ಶಿರಾ ಕ್ಷೇತ್ರದಲ್ಲಿ ಸತೀಶ್ ಗೆದ್ದರೆ ಭೂತಪ್ಪನಿಗೆ ಕುರಿ ಹರಕೆ: ಪತ್ರ ವೈರಲ್
ಚಿತ್ರದುರ್ಗ, ಡಿಸೆಂಬರ್ 28: ಸಾಮಾನ್ಯವಾಗಿ ನಾವು ದೇವರಲ್ಲಿ ವಿದ್ಯೆ, ಉದ್ಯೋಗ, ಸಂತಾನ ಭಾಗ್ಯ, ಮದುವೆ, ಸೇರಿದಂತೆ ಕಷ್ಟಗಳನ್ನು ಬಗೆಹರಿಸು ಎಂದು ಬೇಡಿಕೊಳ್ಳುವುದು ವಾಡಿಕೆ ಇದೆ. ಆದರೆ ಇಲ್ಲೊಬ್ಬರು 2023ರ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ನಾಯಕ ಗೆದ್ದರೆ ಒಂದು ಕುರಿ ಊಟ ಕೊಡುತ್ತೇನೆ ಎಂದು ಭೂತೇಶ್ವರ ಹಾಗೂ ಚೌಡೇಶ್ವರಿ ದೇವಿಗೆ ಹರಕೆ ಹೊತ್ತ ಪತ್ರವನ್ನು ಮರಕ್ಕೆ ಕಟ್ಟುತ್ತಿರುವ ಪತ್ರ ಚಿತ್ರದುರ್ಗ ಜಿಲ್ಲೆಯಲ್ಲಿ ಸದ್ಯ ವೈರಲ್ ಆಗಿದೆ.

ಹರಕೆ ಪತ್ರದಲ್ಲೇನಿದೆ
"ಸಾಸಲು ಸತೀಶ್ ಅಣ್ಣ ಶಿರಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದು, ಬಿ.ಫಾರಂ ಸಿಕ್ಕಿದೆ. ಚುನಾವಣೆಯಲ್ಲಿ ಬಹುಮತದಿಂದ ಸ್ವಾಮಿ ಭೂತಪ್ಪ ಹಾಗೂ ಚೌಡೇಶ್ವರಿ ತಾಯಿ ಕೃಪೆಯಿಂದ ನಮ್ಮ ಸತೀಶಣ್ಣ ಚುನಾವಣೆಯ ಸ್ಪರ್ಧೆಯಲ್ಲಿ ಗೆದ್ದರೆ ಒಂದು ಕುರಿ ಬೇಟೆ ಕೊಟ್ಟು ಊಟ ಹಾಕಿಸುತ್ತೇನೆ. ಈ ಬಡ ಭಕ್ತನ ಕೋರಿಕೆಯನ್ನು ನಿಮ್ಮ ಸನ್ನಿಧಿಯಲ್ಲಿ ಈಡೇರಿಸಬೇಕು,'' ಎಂದು ಶಿವು, ಕರಿಯಣ್ಣ, ಗಂಗಣ್ಣ ಪತ್ರ ಬರೆದಿದ್ದಾರೆ.

ಸಾಸಲು ಸತೀಶ್ ಯಾರು?
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ತುಮಕೂರು ಜಿಲ್ಲೆಯ ಕಾಂಗ್ರೆಸ್ ಕಾರ್ಯಾಧ್ಯಕ್ಷ, ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದ ಕಾಡುಗೊಲ್ಲ ಸಮುದಾಯದ ಮುಖಂಡನೇ ಡಾ. ಸಾಸಲು ಸತೀಶ್. 2013ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಪರಾಭವಗೊಂಡಿದ್ದರು.
ಮತ್ತೆ 2018ರಲ್ಲಿ ಸ್ಪರ್ಧಿಸಲು ಪಕ್ಷ ಸಂಘಟನೆ ಮಾಡಿಕೊಂಡು ಪ್ರಬಲ ಆಕಾಂಕ್ಷಿಯಾಗಿದ್ದರು. ಆದರೆ ಸತೀಶ್ಗೆ ಟಿಕೆಟ್ ತಪ್ಪಿಸಿ, ಮಾಜಿ ಸಚಿವ ಜಯಚಂದ್ರ ಮಗ ಸಂತೋಷ್ ಜಯಚಂದ್ರಗೆ ಟಿಕೆಟ್ ನೀಡಿ, ರಾಜ್ಯದ ಕಾಡುಗೊಲ್ಲ ಸಮುದಾಯದ ಕೆಂಗಣ್ಣಿಗೆ ಗುರಿಯಾಗಿ, ಹಿರಿಯೂರು, ಹೊಸದುರ್ಗ, ಹೊಳಲ್ಕೆರೆ, ಚಿತ್ರದುರ್ಗ, ಕೂಡ್ಲಿಗಿ, ಜಗಳೂರು, ಶಿರಾ, ಚಿಕ್ಕನಾಯಕನಹಳ್ಳಿ, ಮಧುಗಿರಿ, ಅರಸೀಕೆರೆ, ಗುಬ್ಬಿ ಹೀಗೆ ಕಾಂಗ್ರೆಸ್ ಹಲವು ಕಡೆಗಳಲ್ಲಿ ಗೆಲ್ಲಬಹುದಾದ ವಿಧಾನಸಭಾ ಕ್ಷೇತ್ರಗಳು ಹಾಗೂ ಚಿತ್ರದುರ್ಗ, ತುಮಕೂರು ಲೋಕಸಭಾ ಕ್ಷೇತ್ರಗಳನ್ನು ಕಳೆದುಕೊಂಡು ನಂತರ ಪಶ್ಚಾತ್ತಾಪ ಪಡಬೇಕಾಯಿತು.

ಶಿರಾ ಕ್ಷೇತ್ರದ ಮೇಲೆ ಸಾಸಲು ಕಣ್ಣು
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಶಿರಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಡಾ. ಸಾಸಲು ಸತೀಶ್ ಇಂಗಿತ ವ್ಯಕ್ತಪಡಿಸುತ್ತಿದ್ದಾರೆ. ಕಾರಣ ಶಿರಾ ತಾಲೂಕಿನಲ್ಲಿ ಕಾಡುಗೊಲ್ಲ ಸಮುದಾಯದ ಸುಮಾರು 40 ಸಾವಿರಕ್ಕೂ ಹೆಚ್ಚು ಮತಗಳಿವೆ. ಹೀಗಾಗಿ ಶಿರಾದಿಂದ ಸ್ಪರ್ಧಿಸಲು ಸತೀಶ್ ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದ್ದಾರೆ. ಅದರಂತೆ ಅಭಿಮಾನಿಗಳು ಕೂಡ ದೇವರಿಗೆ ಹರಕೆ ಕಟ್ಟಿಕೊಂಡಿದ್ದಾರೆ.
ಹಿರಿಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕಿ ಕೆ. ಪೂರ್ಣಿಮಾ ಶ್ರೀನಿವಾಸ್ರನ್ನು ಕಾಂಗ್ರೆಸ್ ಪಕ್ಷಕ್ಕೆ ಕರೆತಂದು ಹಿರಿಯೂರು ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ನೀಡಲು ಕಾಂಗ್ರೆಸ್ ಚಿಂತನೆ ನಡೆಸಿದೆ ಎನ್ನಲಾಗುತ್ತಿದೆ. ಪೂರ್ಣಿಮಾ ಕಾಂಗ್ರೆಸ್ ಪಕ್ಷಕ್ಕೆ ಬಂದರೆ ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆ ಸೇರಿದಂತೆ ಮತ್ತಿತರರ ಕಡೆಗಳಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲಬಹುದು ಎಂಬ ಲೆಕ್ಕಾಚಾರವಾಗಿದೆ. ಏಕೆಂದರೆ ಶಾಸಕಿ ಕೆ. ಪೂರ್ಣಿಮಾ ತಂದೆ ದಿವಂಗತ ಎ. ಕೃಷ್ಣಪ್ಪ ಕಾಂಗ್ರೆಸ್ ಗರಡಿಯಲ್ಲಿ ಬೆಳೆದು ಸಚಿವರಾಗಿದ್ದರು. ತಂದೆಯ ಹಾದಿಯಲ್ಲಿ ಸಾಗುತ್ತಿರುವ ಮಗಳನ್ನು ಪಕ್ಷಕ್ಕೆ ಸೆಳೆಯಲು ಕಾಂಗ್ರೆಸ್ ಸಿದ್ಧತೆ ನಡೆಸುತ್ತಿದೆ ಎನ್ನಬಹುದು.

ಇಬ್ಬರು ಕಾಡುಗೊಲ್ಲರಿಗೆ ಟಿಕೆಟ್
2023ರ ವಿಧಾನಸಭಾ ಚುನಾವಣೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಹಾಗೂ ತುಮಕೂರು ಜಿಲ್ಲೆಯ ಶಿರಾ ಅಥವಾ ಚಿಕ್ಕನಾಯಕನಹಳ್ಳಿ ಕ್ಷೇತ್ರದಲ್ಲಿ ಕಾಡುಗೊಲ್ಲರಿಗೆ ಟಿಕೆಟ್ ನೀಡಲು ಕಾಂಗ್ರೆಸ್ ಚಿಂತನೆ ನಡೆಸಿದೆ ಎನ್ನಲಾಗುತ್ತಿದೆ. 2018ರಲ್ಲಿ ಮಾಡಿದ ತಪ್ಪನ್ನು ಮತ್ತೆ ಮಾಡಬಾರದು ಎಂದು ಸ್ಥಳೀಯ ಕಾಂಗ್ರೆಸ್ ನಾಯಕರು ರಾಜ್ಯಮಟ್ಟದ ನಾಯಕರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಹಾಗಾಗಿ ಹಿರಿಯೂರು ಕ್ಷೇತ್ರದಲ್ಲಿ ಕಾಡುಗೊಲ್ಲರಿಗೆ ಟಿಕೆಟ್ ನೀಡಿದರೆ ನಾವು ರಾಜಕೀಯದಲ್ಲಿ ಮತ್ತಷ್ಟು ಭವಿಷ್ಯ ಕಾಣಬಹುದು ಎಂಬುದು ಮಾಜಿ ಸಚಿವ ಎಚ್. ಆಂಜನೇಯ, ಹೊಸದುರ್ಗ ಮಾಜಿ ಶಾಸಕ ಬಿ.ಜಿ. ಗೋವಿಂದಪ್ಪ, ಮಾಜಿ ಸಂಸದ ಬಿ.ಎನ್. ಚಂದ್ರಪ್ಪ, ತುಮಕೂರು ಮಾಜಿ ಸಂಸದ ಮುದ್ದಹನುಮೇಗೌಡ, ಮಧುಗಿರಿ ಕೆ.ಎನ್. ರಾಜಣ್ಣ, ಮಾಜಿ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಸೇರಿದಂತೆ ಮತ್ತಿತರರು ಸ್ಥಳೀಯ ನಾಯಕರ ಅಭಿಪ್ರಾಯವಾಗಿದೆ.
ಒಟ್ಟಾರೆಯಾಗಿ 2023ರಲ್ಲಿ ರಾಜ್ಯದಲ್ಲಿ ಚುಕ್ಕಾಣಿ ಹಿಡಿಯಲು ಹೊರಟಿರುವ ಕಾಂಗ್ರೆಸ್ ಪಕ್ಷ, 2018ರಲ್ಲಿ ಕಾಡುಗೊಲ್ಲರಿಗೆ ಟಿಕೆಟ್ ಕೊಡಲಾಗುತ್ತದೆ ಎಂದು ಚುನಾವಣೆ ಸಮೀಪಿಸುವರೆಗೂ ಹೇಳಿಕೊಂಡು ಬಂದು ಕೊನೆಯಲ್ಲಿ, ಒಂದು ಟಿಕೆಟ್ ನೀಡದೇ ಕೈಕೊಟ್ಟು ಹಲವು ಕಡೆಗಳಲ್ಲಿ ಗೆಲ್ಲಬಹುದಾದ ವಿಧಾನಸಭಾ ಕ್ಷೇತ್ರಗಳಲ್ಲಿ ಹೀನಾಯ ಸೋಲು ಅನುಭವಿಸಿದೆ. ಮುಂಬರುವ 2023ರಲ್ಲಿ ಕಾಡುಗೊಲ್ಲರಿಗೆ ಟಿಕೆಟ್ ಕೊಡುತ್ತಾರಾ ಅಥವಾ ಕಾಂಗ್ರೆಸ್ ಕೈ ಕೊಡುತ್ತಾ ಕಾದು ನೋಡಬೇಕಿದೆ.
-
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಸೋಷಿಯಲ್ ಮೀಡಿಯಾಗೆ ವಯೋಮಿತಿ ಫಿಕ್ಸ್?: ಕಠಿಣ 'ಎಐ' ಕಾನೂನು ಜಾರಿಗೆ ಸಂಸದೀಯ ಸಮಿತಿ ಶಿಫಾರಸು -
Price Hike: ಕೇಂದ್ರದಿಂದ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ ಹೇಳಿಕೆ, ದರ ಹೆಚ್ಚಿಸಿದ್ದೇ ಕಾಂಗ್ರೆಸ್; ಡಿಕೆಶಿಗೆ ತಿರುಗೇಟು -
Gen Z ಪ್ರತಿಭಟನೆಯಲ್ಲಿ 'ಪಾತ್ರ': ಬಲೆನ್ ಪ್ರಮಾಣ ವಚನ ಸ್ವೀಕರಿಸಿದ ಮರುದಿನವೇ ನೇಪಾಳ ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಬಂಧನ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ












Click it and Unblock the Notifications