ಅಕ್ರಮ ಚಟುವಟಿಕೆಗಳ ತಾಣವಾದ ಹೊಸದುರ್ಗ ಕ್ಷೇತ್ರ: ಗೂಳಿಹಟ್ಟಿ ಶೇಖರ್ ಗಂಭೀರ ಆರೋಪ
ಚಿತ್ರದುರ್ಗ, ಜುಲೈ 11: ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಯಾವುದೇ ಭಯವಿಲ್ಲದೇ ಅಕ್ರಮ ಮರಳು ಸಾಗಾಟ, ಇಸ್ಪೀಟ್ ಆಟ ಹಾಗೂ ಕಂಡ ಕಂಡಲ್ಲಿ ಮದ್ಯಪಾನ ಸೇರಿದಂತೆ ಇನ್ನಿತರ ಅಕ್ರಮ ದಂಧೆ ನಡೆಯುತ್ತಿದೆ ಎಂದು ಮಾಜಿ ಸಚಿವ ಗೂಳಿಹಟ್ಟಿ ಡಿ.ಶೇಖರ್ ಗಂಭೀರವಾಗಿ ಆರೋಪಿಸಿದ್ದಾರೆ.
ಇನ್ನು ಹೊಸದುರ್ಗ ಕ್ಷೇತ್ರದ ವಿವಿಧ ಗ್ರಾಮ ಗ್ರಾಮಗಳ, ಮನೆ ಮನೆಗಳಲ್ಲಿ ಮದ್ಯ ಮಾರಾಟ ಸಾಮಾನ್ಯವಾಗಿ ನಡೆಯುತ್ತಿದೆ. ಜೊತೆಗೆ ಮಾಡದಕೆರೆ, ಡಿಟಿ ವಟ್ಟಿ, ಸೇರಿದಂತೆ ಹಲವಾರು ಜಮೀನುಗಳಲ್ಲಿ ಇಸ್ಪೀಟ್ ದಂಧೆಯಾದರೆ, ದುರ್ಗಾಂಬಿಕಾ ಶಾಲೆ ಹಾಗೂ ಮುರಿಳೀಧರ ಪ್ರೌಢ ಶಾಲೆಗಳಲ್ಲಿ ಜೂಜು ಕೋರರ ಅಡ್ಡವಾಗಿದೆ. ಹಾಗೂ ಕೋಡಮ್ಮನ ದೇವಸ್ಥಾನ ಕೂಡ ಇಸ್ಪೀಟ್ ಆಟಗಾರರ ಅಡ್ಡವಾಗಿದೆ ಎನ್ನುವ ಆರೋಪಗಳು ಕೇಳಿ ಬರುತ್ತಿವೆ.

ಇಸ್ಪೀಟ್ ಆಟದಲ್ಲಿ ಪೊಲೀಸರೂ ಸಹ ಭಾಗಿಯಾಗಿದ್ದಾರೆ ಎನ್ನುವುದು ಸಾರ್ವಜನಿಕರ ದೂರಾಗಿದ್ದು, ಸಾರ್ವಜನಿಕರು ಈ ಬಗ್ಗೆ ಮಾಜಿ ಸಚಿವ ಗೂಳಿಹಟ್ಟಿ ಶೇಖರ್ಗೆ ಮಾಹಿತಿ ನೀಡಿದ್ದಾರೆ. ಇನ್ನು ಸಾರ್ವಜನಿಕರು ಯಾವುದಕ್ಕೂ ಹೆದರಬೇಡಿ, ನನಗೆ ಮಾಹಿತಿ ನೀಡಿ ಎಂದು ಗೂಳಿಹಟ್ಟಿ ಶೇಖರ್ ಅವರು ವಾಯ್ಸ್ ರೆಕಾರ್ಡ್ ಕಳುಹಿಸಿ ಈ ಮೂಲಕ ಮನವಿ ಮಾಡಿದ್ದಾರೆ.
ವಾಯ್ಸ್ ರೆಕಾರ್ಡ್ ಮಾಡಿ ಕಾರ್ಯಕರ್ತರಿಗೆ ಸಲಹೆ ನೀಡಿರುವ ಮಾಜಿ ಸಚಿವರು, ನಿಮ್ಮ ಸಹಾಯಕ್ಕೆ ಬೇಕಾದ ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದ್ದಾರೆ. ಇತ್ತ ಸಾರ್ವಜನಿಕರು ಅಕ್ರಮ ಚಟುವಟಿಕೆಗಳ ಬಗ್ಗೆ ಕಡಿವಾಣ ಹಾಕಲು ಆಗ್ರಹಿಸಿದ್ದಾರೆ. ಮತ್ತೊಂದು ಕಡೆ ಜನರು ಭಯದಲ್ಲೇ ಗೂಳಿಹಟ್ಟಿ ಅವರಿಗೆ ಮಾಹಿತಿ ನೀಡುತ್ತಿದ್ದಾರೆ ಎನ್ನಲಾಗಿದೆ.
ಇನ್ನು ಕ್ಷೇತ್ರದಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆ ಕಡಿವಾಣ ಹಾಕಲು ಸೂಕ್ತ ಕ್ರಮ ತೆಗೆದುಕೊಳ್ಳೋಣ, ಇದರ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸೋಣ ಎಂದಿರುವ ಗೂಳಿಹಟ್ಟಿ ಶೇಖರ್ ವಾಯ್ಸ್ ಮೆಸೇಜ್ ಎಲ್ಲೆಡೆ ವೈರಲ್ ಆಗಿದೆ.
ಸದ್ಯ ಹೊಸದುರ್ಗ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ವಶದಲ್ಲಿದ್ದು, ಕಾಂಗ್ರೆಸ್ ಹಿರಿಯ ಶಾಸಕ ಬಿಜಿ ಗೋವಿಂದಪ್ಪ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಇದೀಗ ಕ್ಷೇತ್ರದ ಬಗ್ಗೆ ಬಿಜೆಪಿ ಮುಖಂಡ ಗಂಭೀರ ಆರೋಪ ಮಾಡುತ್ತಿದ್ದು, ಕಾಂಗ್ರೆಸ್ ಶಾಸಕರು ಈ ಆರೋಪದ ಪ್ರಕರಣವನ್ನು ಎಷ್ಟರ ಮಟ್ಟಿಗೆ ಪರಿಗಣಿಸಲಿದ್ದಾರೆ ಎನ್ನುವುದನ್ನು ಕಾದು ನೋಡಬೇಕಿದೆ.
-
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ-ಬಿ.ಎಸ್.ಯಡಿಯೂರಪ್ಪ -
ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಕೈ ಹಿಡಿಯುತ್ತವೆ: ಸಿದ್ದರಾಮಯ್ಯ ಹೇಳಿಕೆ -
ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ












Click it and Unblock the Notifications