ಹಿರಿಯೂರು: ಮನೆಯಲ್ಲಿ ಅಕ್ರಮವಾಗಿ ಆನೆ ದಂತ, ಶ್ರೀಗಂಧ ಸಂಗ್ರಹ, ಆರೋಪಿಗಳ ಬಂಧನ
ಚಿತ್ರದುರ್ಗ, ನವೆಂಬರ್, 10: ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಆನೆ ದಂತ ಹಾಗೂ ಶ್ರೀಗಂಧವನ್ನು ಪೊಲೀಸರು ವಶಪಡಿಸಿಕೊಂಡಿರುವ ಘಟನೆ ಹಿರಿಯೂರು ತಾಲೂಕಿನ ಬಬ್ಬೂರು ಗ್ರಾಮದಲ್ಲಿ ನಡೆದಿದೆ.
ಹಿರಿಯೂರು ತಾಲೂಕಿನ ಬಬ್ಬೂರು ಗ್ರಾಮದಲ್ಲಿರುವ ಮನೆಯ ಮೇಲೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಪೊಲೀಸರು ಪರಿಶೀಲಿಸಿದಾಗ, ಅಪಾರ ಪ್ರಮಾಣದ ಶ್ರೀಗಂಧ ಹಾಗೂ ಆನೆ ದಂತಗಳು ಸಿಕ್ಕಿವೆ. ಇನ್ನು ಆರೋಪಿಗಳಾದ ತರೀಕೆರೆ ಮೂಲದ ಚಂದ್ರಶೇಖರ್ ಹಾಗೂ ತಮಿಳುನಾಡು ಮೂಲದ ಕಲೀಲ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಪೊಲೀಸರು ಬುಧವಾರ ಸಂಜೆ ದಾಳಿ ನಡೆಸಿದ್ದು, ಗುರುವಾರ ಹಾಗೂ ಶುಕ್ರವಾರ ಪರಿಶೀಲನೆ ನಡೆಸಿದ್ದಾರೆ. ಇಂದು ಆ ಎಲ್ಲಾ ವಸ್ತುಗಳನ್ನು ಮಾಜೂರು ಮಾಡಿದ್ದು, ಚಿತ್ರದುರ್ಗ ಪೊಲೀಸ್ ಕಚೇರಿಗೆ ಅಧಿಕಾರಿಗಳ ತಂಡ ಆ ಸ್ತುಗಳನ್ನು ತೆಗೆದುಕೊಂಡು ಹೋಗಿದೆ. ಇನ್ನು ಅಲ್ಲಿಯೇ ಪತ್ರಿಕಾಗೋಷ್ಠಿ ನಡೆಸಿ ಎಲ್ಲ ಮಾಹಿತಿಯನ್ನು ತಿಳಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.
ಓರ್ವ ಬೇಟೆಗಾರ ಸಾವು
ಬೇಟೆಗಾರರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದು ಓರ್ವ ಬೇಟೆಗಾರ ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ಚೆಕ್ ಪೋಸ್ಟ್ ಸಮೀಪ ಇತ್ತೀಚೆಗಷ್ಟೇ ನಡೆದಿತ್ತು.
ಗುಂಡ್ಲುಪೇಟೆ ತಾಲೂಕಿನ ಭೀಮನಬೀಡು ಗ್ರಾಮದ ಯುವಕ ಮೃತಪಟ್ಟಿರುವ ದುರ್ದೈವಿ ಎಂದು ಪ್ರಾಥಮಿಕ ಮೂಲಗಳು ತಿಳಿಸಿವೆ. ಮದ್ದೂರು ಅರಣ್ಯ ವಲಯದಲ್ಲಿ ಬೇಟೆಗೆ ಬಂದಿದ್ದ ವೇಳೆ ಗಸ್ತಿನ ಸಿಬ್ಬಂದಿ ಹಾಗೂ 8-10 ಮಂದಿ ಇದ್ದ ಬೇಟೆಗಾರರ ಗುಂಪಿನ ನಡುವೆ ಗುಂಡಿನ ಚಕಮಕಿ ನಡೆದಿದೆ. ನಾಡಬಂದೂಕುಗಳಿಂದ ಕಳ್ಳಬೇಟೆಗೆ ಬಂದು ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ದಾಳಿ ಮಾಡಲು ಮುಂದಾದ ವೇಳೆ ಈ ಘಟನೆ ನಡೆದಿದೆ. ಈ ಬಗ್ಗೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬಂಡೀಪುರ ಸಿಎಫ್ಒ ರಮೇಶ್ ಕುಮಾರ್ ತಿಳಿಸಿದ್ದರು.
ಕಡವೆ, ಕಾಡುಹಂದಿಗಳನ್ನು ಬೇಟೆಯಾಡಲು 8-10 ಮಂದಿ ಬಂದಿದ್ದರು ಎನ್ನಲಾಗಿ ಎನ್ನಲಾಗಿದ್ದು, ಈ ಪೈಕಿ ಗುಂಡಿನ ದಾಳಿಯಿಂದ ಓರ್ವ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಕಾಡಾನೆ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ
ಇತ್ತೀಚೆಗಷ್ಟೇ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಅಭಯಾರಣ್ಯ ಓಂಕಾರ ವನ್ಯಜೀವಿ ವಲಯ ವ್ಯಾಪ್ತಿಯ ಕುರುಬರಹುಂಡಿಯ ಆಲದ ಮರದ ಹಳ್ಳ ಅರಣ್ಯ ಪ್ರದೇಶದಲ್ಲಿ 35 ವರ್ಷದ ಗಂಡು ಕಾಡಾನೆ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು.
ಕಾಡಾನೆಯು ಮತ್ತೊಂದು ಕಾಡಾನೆಯ ಜೊತೆ ಕಾದಾಟ ನಡೆಸಿ ಮೃತಪಟ್ಟಿರುವುದಾಗಿ ಅರಣ್ಯ ಅಧಿಕಾರಿಗಳು ದೃಢಪಡಿಸಿದ್ದರು.
ಕಾಡಾನೆಯ ಕಣ್ಣಿನ ಕೆಳಭಾಗದಲ್ಲಿ ಎದುರಾಳಿ ಕಾಡಾನೆಯ ದಂತ ಚುಚ್ಚಿರುವುದು ಕಂಡು ಬಂದಿದ್ದು, ರಕ್ತಸ್ರಾವ ಹಾಗೂ ನಿತ್ರಾಣದಿಂದ ಮೃತಪಟ್ಟಿದೆ. ಎದುರಾಳಿ ಕಾಡಾನೆಯ ದಂತ ಚುಚ್ಚಿ ದಂತವು ಮೃತ ಕಾಡಾನೆಯ ಮೇಲ್ದವಡೆಯವರೆಗೆ 30 ಸೆ.ಮೀ ಆಳದವರೆಗೆ ಹೊಳಹೊಕ್ಕಿದ್ದು, ದವಡೆಯ ಒಳಗೆ ದಂತವು ಮುರಿದಿರುವುದರಿಂದ ಕಾಡಾನೆಯು ಸಾವನ್ನಪ್ಪಿದೆ ಎಂದು ಬಂಡೀಪುರ ಹುಲಿ ಯೋಜನೆಯ ಅರಣ್ಯ ಸಂರಕ್ಷಣಾಧಿಕಾರಿ ಡಾ.ಪಿ.ರಮೇಶ್ಕುಮಾರ್ ಮಾಹಿತಿ ನೀಡಿದ್ದರು.
ಎದುರಾಳಿ ಆನೆಯ ಮುರಿದ ದಂತದ ಭಾಗ ಹಾಗೂ ಮೃತ ಕಾಡಾನೆಯ ಎರಡು ದಂತಗಳನ್ನು ಇಲಾಖೆಯು ವಶಪಡಿಸಿಕೊಂಡು ಮೃತ ಕಾಡಾನೆಯ ಶವವನ್ನು ಮರಣೋತ್ತರ ಪರೀಕ್ಷೆ ನಡೆಸಿ ಕಳೆಬರವನ್ನು ನಿಯಮಾನುಸಾರ ಅರಣ್ಯ ಪ್ರದೇಶದಲ್ಲೇ ಬಿಡಲಾಗಿತ್ತು.
ಈ ಸಂದರ್ಭದಲ್ಲಿ ಬಂಡೀಪುರ ಹುಲಿ ಯೋಜನೆ ಅರಣ್ಯ ಸಂರಕ್ಷಣಾಧಿಕಾರಿ ಡಾ.ಪಿ.ರಮೇಶ್ ಕುಮಾರ್, ಗುಂಡ್ಲುಪೇಟೆ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜಿ.ರವೀಂದ್ರ, ಓಂಕಾರ ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿ ಕೆ.ಪಿ.ಸತೀಶ್ ಕುಮಾರ್, ಇಲಾಖಾ ಪಶುವೈದ್ಯಾಧಿಕಾರಿ ಡಾ.ಮಿರ್ಜಾ ವಾಸಿಂ, ಗಸ್ತು ವನಪಾಲಕ ಸಂತೋಷ್ ಸೇರಿದಂತೆ ಅರಣ್ಯ ವೀಕ್ಷಕ ಹಾಗೂ ಇಲಾಖಾ ಸಿಬ್ಬಂದಿ ವರ್ಗದವರು ಹಾಜರಿದ್ದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications