ಚಿತ್ರಗಳು; ಚಿತ್ರದುರ್ಗದಲ್ಲಿ ಗಮನ ಸೆಳೆದ ಯುವ ಸೌರಭ ಕಾರ್ಯಕ್ರಮ
ಚಿತ್ರದುರ್ಗ, ಡಿಸೆಂಬರ್ 01; ಕರ್ನಾಟಕ ಶಾಸ್ತ್ರೀಯ ಸಂಗೀತ, ಹಿಂದುಸ್ತಾನಿ ವಾದ್ಯ ಸಂಗೀತ, ಸುಗಮ ಸಂಗೀತ, ವಚನ ಸಂಗೀತ, ದಾಸರ ಪದಗಳು, ಜಾನಪದ ಗೀತೆಗಳು, ಸಮೂಹ ನೃತ್ಯ, ನೃತ್ಯರೂಪಕ, ಜನಪದ ಪ್ರದರ್ಶನ ಕಲಾ ತಂಡಗಳು, ನಾಟಕ, ಯಕ್ಷಗಾನ, ಮೂಡಲಪಾಯ, ಬಯಲಾಟ, ಗೊಂಬೆಮೇಳ, ಗಮಕ ಕಥಾ ಕೀರ್ತನಾ ಸೇರಿದಂತೆ ವಿವಿಧ ಕಲಾ ಪ್ರಕಾರಗಳು ಜಿ. ಆರ್. ಹಳ್ಳಿ ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳನ್ನು ಮುದಗೊಳಿಸಿತು.
ಚಿತ್ರದುರ್ಗ ತಾಲ್ಲೂಕಿನ ಗುಡ್ಡದರಂಗವ್ವನಹಳ್ಳಿಯ ದಾವಣಗೆರೆ ವಿಶ್ವವಿದ್ಯಾನಿಲಯ ಜ್ಞಾನಗಂಗೋತ್ರಿ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಬುಧವಾರ ಕನ್ನಡ ಮತ್ತು ಸಂಸ್ಕಂತಿ ಇಲಾಖೆ ಹಾಗೂ ಗುಡ್ಡದರಂಗವ್ವನಹಳ್ಳಿ ದಾವಣಗೆರೆ ವಿಶ್ವವಿದ್ಯಾನಿಲಯ ಸ್ನಾತಕೋತ್ತರ ಅಧ್ಯಯನ ಕೇಂದ್ರದ ವತಿಯಿಂದ 'ಯುವಸೌರಭ' ಕಾರ್ಯಕ್ರಮ ನಡೆಯಿತು.
ಯುವ ಸೌರಭ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಚಿತ್ರದುರ್ಗ ತಾಲ್ಲೂಕಿನ ಜಿ. ಆರ್. ಹಳ್ಳಿ ದಾವಣಗೆರೆ ವಿಶ್ವವಿದ್ಯಾನಿಲಯ ಜ್ಞಾನಗಂಗೋತ್ರಿ ಸ್ನಾತಕೋತ್ತರ ಅಧ್ಯಯನ ಕೇಂದ್ರದ ನಿರ್ದೇಶಕ ಡಾ. ಹೆಚ್. ವಿಶ್ವನಾಥ್, "ಜಾನಪದ ನೆಲ ಹಾಗೂ ಜನರ ಭಾಷೆಯಾಗಿದೆ. ಜನಮಾನಸದ ಸಂಸ್ಕಂತಿಯು ಈ ನೆಲದಲ್ಲಿ ಜೀವಂತವಾಗಿ ಉಳಿಯಬೇಕಾದರೆ ಜಾನಪದ ಕಲಾ ಪ್ರಕಾರಗಳು, ಕಲಾವಿದರು ಬಹಳ ಅವಶ್ಯಕ. ಈ ನೆಲದ ಎಲ್ಲ ಕಲಾ ಪ್ರಕಾರಗಳನ್ನು ಉಳಿಸುವ ಕೆಲಸವಾಗಬೇಕಿದೆ" ಎಂದು ಹೇಳಿದರು.
"ಕೋಲಾಟ, ಸೋಬಾನೆ ಪದ, ವೀರಗಾಸೆ, ಕಂಸಾಳೆ, ದೊಡ್ಡಾಟ, ಸಣ್ಣಾಟ, ಕೃಷ್ಣ ಪಾರಿಜಾತ ಸೇರಿದಂತೆ ಅನೇಕ ಕಲಾ ಪ್ರಕಾರಗಳು ಕಣ್ಣರೆಯಾಗುವ ಈ ಸಂದರ್ಭದಲ್ಲಿ ಸರ್ಕಾರವು ಕನ್ನಡ ಮತ್ತು ಸಂಸ್ಕಂತಿ ಇಲಾಖೆಯ ಮೂಲಕ ಕನ್ನಡ ನಾಡಿನ ನೆಲದ ಕಲೆ ಮತ್ತು ಸಂಸ್ಕಂತಿಯನ್ನು ಉಳಿಸಿ ಬೆಳೆಸುವ ಕಾರ್ಯ ಮಾಡುತ್ತಿದೆ" ಎಂದರು.

ಪಾಶ್ಚಿಮಾತ್ಯ ಸಂಸ್ಕಂತಿ ಪ್ರಭಾವಕ್ಕೆ ಒಳಗಾಗಿದೆ
"ಇಂದಿನ ಯುವ ಪೀಳಿಗೆಯು ಈ ನೆಲದ ಸಂಸ್ಕಂತಿಯನ್ನು ಬಿಟ್ಟು ಪಾಶ್ಚಿಮಾತ್ಯ ಸಂಸ್ಕಂತಿಯ ಪ್ರಭಾವಕ್ಕೆ ಒಳಗಾಗಿದೆ. ಪಾಶ್ಚಿಮಾತ್ಯ ಸಂಸ್ಕೃತಿಯು ಈ ನೆಲದ ಸಂಸ್ಕೃತಿಯನ್ನು ಹಾಳುಗೆಡವಿದೆ. ಜಾಗತೀಕರಣ, ಉದಾರೀಕರಣದ ದಳ್ಳೂರಿನಿಂದಾಗಿ ಈ ನೆಲದ ಸಂಸ್ಕಂತಿ ಕಣ್ಮರೆಯಾಗುತ್ತಿದೆ' ಎಂದು ಡಾ. ಹೆಚ್. ವಿಶ್ವನಾಥ್ ಬೇಸರ ವ್ಯಕ್ತಪಡಿಸಿದರು.
ನೆಹರು ಯುವ ಕೇಂದ್ರದ ಜಿಲ್ಲಾ ಯುವ ಸಮನ್ವಯಾಧಿಕಾರಿ ಸುಹಾಸ್ ಮಾತನಾಡಿ, "ಸಾಹಿತ್ಯ ಮತ್ತು ಸಂಸ್ಕೃತಿಯು ನಮ್ಮ ಜೀವನದ ಒಂದು ಭಾಗವಾಗಿದೆ. ಭಾರತ ದೇಶವು ಹಲವಾರು ಕಲೆಗಳ ತವರೂರು. ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಜನಪದ ಗೀತೆಗಳು, ದಾಸ ಸಾಹಿತ್ಯ, ವಚನ ಸಾಹಿತ್ಯ, ರಾಮಾಯಣ, ಮಹಾಭಾರತ ಮಹಾಕಾವ್ಯ, ವೀರಗಾಸೆ, ಡೊಳ್ಳು ಕುಣಿತ, ಕೋಲಾಟ ಸೇರಿದಂತೆ ಇನ್ನೂ ಹಲವಾರು ಸಾಹಿತ್ಯ ಹಾಗೂ ಕಲಾ ಪ್ರಕಾರಗಳಲ್ಲಿ ಆದರ್ಶ, ಜೀವನದ ಮೌಲ್ಯಗಳು ಅಡಗಿವೆ" ಎಂದು ಅಭಿಪ್ರಾಯಪಟ್ಟರು.

ಸಂಸ್ಕೃತಿಯನ್ನು ಬೆಳೆಸಬೇಕಿದೆ
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ. ಧನಂಜಯ ಪ್ರಾಸ್ತಾವಿಕವಾಗಿ ಮಾತನಾಡಿ, 'ಇಂದಿನ ವಿದ್ಯಾರ್ಥಿಗಳು ಮುಂದಿನ ಸಂಸ್ಕೃತಿಯ ಕಟ್ಟಾಳುಗಳು. ಯುವ ಪೀಳಿಗೆ ನಮ್ಮ ನಾಡಿನ ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕಾಗಿದೆ. ಪ್ರತಿಯೊಬ್ಬರು ಸಾಂಸ್ಕೃತಿಕ ರಾಯಭಾರಿಗಳಾಗುವ ಅಗತ್ಯವಿದೆ. ಒತ್ತಡದ ಬದುಕಿನಿಂದ ವಿಮುಖರಾಗಲು ಕಲೆಯಿಂದ ಮಾತ್ರ ಸಾಧ್ಯ" ಎಂದರು.
"ಕನ್ನಡ ಮತ್ತು ಸಂಸ್ಕಂತಿ ಇಲಾಖೆಯು ನಾಡು, ನುಡಿ, ಸಂಸ್ಕೃತಿಯನ್ನು ಪೋಷಣೆ, ರಕ್ಷಣೆ ಹಾಗೂ ಬೆಳೆಸುವ ಕಾರ್ಯ ಮಾಡುತ್ತಿದೆ. ಕಲೆ, ಸಂಸ್ಕೃತಿಯಿಂದ ಬದುಕು ತೃಪ್ತಕರವಾಗಲಿದ್ದು, ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಕಲೆ, ಸಂಸ್ಕೃತಿಯನ್ನು ಅಳವಡಿಸಿಕೊಂಡರೆ ಉತ್ತಮ ವ್ಯಕ್ತಿತ್ವ ರೂಪುಗೊಳ್ಳಲಿದೆ" ಎಂದು ಹೇಳಿದರು.

ಸಾಂಸ್ಕಂತಿಕ ಕಾರ್ಯಕ್ರಮಗಳು
ಸುಜಿತ್ ಕುಲಕರ್ಣಿ ಅವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ, ಕರ್ನಾಟಕ ಹಿಂದೂಸ್ತಾನಿ ವಾದ್ಯ ಸಂಗೀತ, ಹೇಮಂತ್ ಕುಮಾರ್ ಮತ್ತು ತಂಡದವರಿಂದ ಸುಗಮ ಸಂಗೀತ, ವಚನ ಸಂಗೀತ, ತತ್ವಪದ ದಾಸರ ಪದಗಳನ್ನು ಪ್ರಸ್ತುತ ಪಡಿಸಿದರು.
ಅಭಿಶ್ರೀ ಎಂ. ಪಿ. ಮತ್ತು ಸಂಗಡಿಗರು ಜಾನಪದ ಗೀತೆಗಳನ್ನು ಹಾಡಿ ರಂಜಿಸಿದರು. ನಾಗಶ್ರೀ ಎಂ. ಪಿ. ಮತ್ತು ಸಂಗಡಿಗರು ಸಮೂಹ ನೃತ್ಯ ನೃತ್ಯ ರೂಪಕ ಪ್ರದರ್ಶಿಸಿದರು. ಜನಪದ ಪ್ರದರ್ಶನ ಕಲಾ ತಂಡಗಳಾದ ವೀರಗಾಸೆಯನ್ನು ಶಂಕರ್ ಮತ್ತು ತಂಡದವರು, ನಾಸಿಕ್ ಡೋಲು ಕಲೆಯನ್ನು ರಾಘವೇಂದ್ರ ಮತ್ತು ತಂಡದವರು ಹಾಗೂ ಮಹಂತೇಶ್ ಮತ್ತು ತಂಡದವರು ಕೀಲು ಕುದರೆ ಪ್ರದರ್ಶನವನ್ನು ಪ್ರಸ್ತುತ ಪಡಿಸಿದರು.
Recommended Video

ಗಮನ ಸೆಳೆದ ಕಾರ್ಯಕ್ರಮಗಳು
ನಾಟಕ, ಯಕ್ಷಗಾನ, ಮೂಡಲಪಾಯ, ಬಯಲಾಟ, ಗೊಂಬೆಮೇಳ ಹಾಗೂ ವಿಜಯ ನಗರ ಸಾಮ್ರಾಜ್ಯದ ಕುರಿತು ರೂಪಕ ಕಾರ್ಯಕ್ರಮಗಳನ್ನು ಜಿ.ಆರ್.ಹಳ್ಳಿ ಸ್ನಾತಕೋತ್ತರ ಕೇಂದ್ರದ ತನುಜ ಕೆ ಮತ್ತು ತಂಡದವರು ಪ್ರಸ್ತುತ ಪಡಿಸಿದರು. ಪಿ.ಆರ್.ಸ್ಫೂರ್ತಿ ಮತ್ತು ತಂಡದವರು ಗಮಕಕಥಾ ಕೀರ್ತನ ಹಾಡಿದರು. ಕಾರ್ಯಕ್ರಮವನ್ನು ಗುಡ್ಡದರಂಗವ್ವನಹಳ್ಳಿ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಡಾ. ಹೆಚ್. ಜಿ. ವಿಜಯಕುಮಾರ್ ಹಾಗೂ ಎಂ. ಕೆ. ಹರೀಶ್ ನಿರೂಪಿಸಿದರು.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications