ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವರಿಷ್ಠರ ಸೂಚನೆ ಮೇರೆಗೆ ಮೊಳಕಾಲ್ಮೂರಿನಿಂದ ಹೊರಟ ಜನಾರ್ದನ ರೆಡ್ಡಿ!

|
Google Oneindia Kannada News

ಮೊಳಕಾಲ್ಮೂರು (ಚಿತ್ರದುರ್ಗ ಜಿಲ್ಲೆ), ಏಪ್ರಿಲ್ 30: ಮಾಜಿ ಸಚಿವ- ಗಣಿ ಉದ್ಯಮಿ ಗಾಲಿ ಜನಾರ್ದನ ರೆಡ್ಡಿ ಬಿಜೆಪಿಯ ಕೇಂದ್ರ ವರಿಷ್ಠರ ಹುಕುಂ ಮೇರೆಗೆ ಚಿತ್ರದುರ್ಗದ ಮೊಳಕಾಲ್ಮೂರಿನಿಂದ ಎದ್ದು ನಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಮ್ಮ ಆಪ್ತ ಹಾಗೂ ಬಿಜೆಪಿ ಅಭ್ಯರ್ಥಿ ಬಿ.ಶ್ರೀರಾಮುಲು ಪರವಾಗಿ ಜನಾರ್ದನ ರೆಡ್ಡಿ ಅವರು ಮೊಳಕಾಲ್ಮೂರಿನಲ್ಲಿ ಪ್ರಚಾರ ನಡೆಸಿದ್ದರು. ಶ್ರೀರಾಮುಲು ಅಲ್ಲಿಂದ ನಾಮಪತ್ರ ಸಲ್ಲಿಸುವ ವೇಳೆ ಹಾಗೂ ರೋಡ್ ಶೋ ಸಂದರ್ಭದಲ್ಲಿ ಸ್ವತಃ ಜನಾರ್ದನ ರೆಡ್ಡಿ ಹಾಜರಿದ್ದರು.

ಬಳ್ಳಾರಿಯಲ್ಲಿ ರೆಡ್ಡಿ ಮಾಸ್ಟರ್ ಪ್ಲಾನ್, ಒಂದೇ ಕಲ್ಲಿಗೆ ಮೂರು ಹಕ್ಕಿಬಳ್ಳಾರಿಯಲ್ಲಿ ರೆಡ್ಡಿ ಮಾಸ್ಟರ್ ಪ್ಲಾನ್, ಒಂದೇ ಕಲ್ಲಿಗೆ ಮೂರು ಹಕ್ಕಿ

ಯಾವಾಗ ಬಿಜೆಪಿಯ ಚುನಾವಣೆ ಪ್ರಚಾರದಲ್ಲಿ ಜನಾರ್ದನ ರೆಡ್ಡಿ ಕಾಣಿಸಿಕೊಳ್ಳಲು ಆರಂಭಿಸಿದರೋ ಅದೇ ವಿಚಾರವಾಗಿ ಪ್ರತಿ ಪಕ್ಷವಾದ ಕಾಂಗ್ರೆಸ್ ವಾಗ್ದಾಳಿ ಆರಂಭಿಸಿತು. ಬಳ್ಳಾರಿ ಗಣಿ ಹಗರಣದ ಪ್ರಮುಖ ಆರೋಪಿ ಜನಾರ್ದನ ರೆಡ್ಡಿ. ಆ ಕಾರಣಕ್ಕೆ ಸಿಬಿಐನಿಂದ ಜನಾರ್ದನ ರೆಡ್ಡಿಯನ್ನು ಬಂಧಿಸಲಾಗಿತ್ತು. ಸದ್ಯಕ್ಕೆ ಅವರು ಬಳ್ಳಾರಿ ಪ್ರವೇಶಿಸಬಾರದು ಎಂಬ ಷರತ್ತಿನ ಜಾಮೀನಿನ ಮೇಲೆ ಇದ್ದಾರೆ.

Janardana Reddy leaves Molakalmuru following orders from BJP high command

ಕಳೆದ ಮಾರ್ಚ್ ನಲ್ಲಿ ಮೈಸೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡುತ್ತಾ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಬಿಜೆಪಿಗೂ ಜನಾರ್ದನ ರೆಡ್ಡಿಗೂ ಯಾವುದೇ ಸಂಬಂಧವಿಲ್ಲ ಎಂದಿದ್ದರು.

ಯಡಿಯೂರಪ್ಪ, ಶಿವರಾಜ್ ಸಿಂಗ್ ಚವ್ಹಾಣ್ ಕಾಲಿಗೆ ಬಿದ್ದ ಜನಾರ್ದನ ರೆಡ್ಡಿಯಡಿಯೂರಪ್ಪ, ಶಿವರಾಜ್ ಸಿಂಗ್ ಚವ್ಹಾಣ್ ಕಾಲಿಗೆ ಬಿದ್ದ ಜನಾರ್ದನ ರೆಡ್ಡಿ

ಆದರೆ, ಬಳ್ಳಾರಿ ಚಿತ್ರದುರ್ಗದ ಗಡಿ ಭಾಗದಲ್ಲಿ ಒಂದು ಮನೆ ಬಾಡಿಗೆಗೆ ತೆಗೆದುಕೊಂಡು, ಶ್ರೀರಾಮುಲು ಪರವಾಗಿ ಪ್ರಚಾರ ಆರಂಭಿಸಿದ್ದರು.

English summary
Karnataka Assembly Elections 2018: Mining baron and former minister Gali Janardana Reddy has left Molakalmuru in Chitradurga reportedly after an order from BJP's central leadership.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X