ಯಡಿಯೂರಪ್ಪ, ಶಿವರಾಜ್ ಸಿಂಗ್ ಚವ್ಹಾಣ್ ಕಾಲಿಗೆ ಬಿದ್ದ ಜನಾರ್ದನ ರೆಡ್ಡಿ
ಚಿತ್ರದುರ್ಗ, ಏಪ್ರಿಲ್ 21: ಅತ್ತ ಬಿಜೆಪಿ, ಇತ್ತ ಬಳ್ಳಾರಿ ಎರಡಕ್ಕೂ ಸಲ್ಲದೆ ಮಧ್ಯದಲ್ಲಿ ನಿಂತಿರುವ ಜನಾರ್ದನ ರೆಡ್ಡಿ ಬಹಳ ಕಾಲದ ನಂತರ ಬಹಿರಂಗವಾಗಿ ಬಿಜೆಪಿ ವರಿಷ್ಠರ ಜೊತೆ ಕಣಿಸಿಕೊಂಡರು.
ಇಂದು ಜನಾರ್ದನ ರೆಡ್ಡಿ ಅವರ ಆತ್ಮೀಯ ಗೆಳೆಯ ಚಿತ್ರದುರ್ಗದ ಮೊಳಕಾಲ್ಮೂರಿನಿಂದ ಚುನಾವಣೆಗೆ ನಾಮಪತ್ರ ಸಲ್ಲಿಸಿದರು. ಈ ಸಮಯ ಜನಾರ್ದನ ರೆಡ್ಡಿಯೂ ರಾಮುಲು ಅವರ ಜೊತೆಯಲ್ಲಿದ್ದರು. ರಾಮುಲು ನಾಮಪತ್ರ ಸಲ್ಲಿಕೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ ಹಾಗೂ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಸಹ ಭಾಗವಹಿಸಿದ್ದರು.
ಈ ಸಮಯ ಯಡಿಯೂರಪ್ಪ ಹಾಗೂ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಮುಖಾಮುಖಿಯಾದ ಜನಾರ್ದನ ರೆಡ್ಡಿ ಅವರು ಮೊದಲಿಗೆ ಯಡಿಯೂರಪ್ಪ ಅವರ ಕಾಲಿಗೆ ಎರಗಿ ಆಶೀರ್ವಾದ ಪಡೆದರು. ಜನಾರ್ದನ ರೆಡ್ಡಿ ಅವರ ಭೇಟಿಯಿಂದ ಸಂತೋಶಗೊಂಡಂತೆ ಕಂಡ ಯಡಿಯೂರಪ್ಪ ಸಾಮಾನ್ಯಕ್ಕಿಂತ ಕೊಂಚ ಹೆಚ್ಚೇ ನಗುತ್ತಾ ಕೆಲ ಕಾಲ ಕುಶಲೋಪರಿ ನಡೆಸಿದರು. ಆ ನಂತರ ಅಲ್ಲಿಯೇ ಇದ್ದ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ಸಿಂಗ್ ಚೌಹಾಣ್ ಅವರ ಕಾಲಿಗೂ ಬಿದ್ದ ಜನಾರ್ಧನ ರೆಡ್ಡಿ ಅವರೊಂದಿಗೂ ಕೆಲ ಕಾಲ ಮಾತನಾಡಿದರು.

ಆ ನಂತರ ಎಲ್ಲ ನಾಯಕರು ಮೆರವಣಿಗೆಯಲ್ಲಿ ಸಾಗಿ ಶ್ರೀರಾಮುಲು ಅವರ ನಾಮಪತ್ರ ಸಲ್ಲಿಕೆಗೆ ಸಾಕ್ಷಿಯಾದರು.
ಅಮಿತ್ ಶಾ ಅವರು ಈಗಾಗಲೇ ಜನಾರ್ದನ ರೆಡ್ಡಿ ಮತ್ತು ಬಿಜೆಪಿಗೆ ಸಂಬಂಧ ಇಲ್ಲ ಎಂದು ಹೇಳಿಕೆ ನೀಡಿದ್ದಾರೆ, ಆದರೆ ಜನಾರ್ದನ ರೆಡ್ಡಿ ಅವರು ಪರೋಕ್ಷವಾಗಿ ಮಾತ್ರವೇ ಅಲ್ಲದೆ ಪ್ರತ್ಯಕ್ಷವಾಗಿಯೂ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿದ್ದಾರೆ. ಇದು ಗೊಂದಲ ಮೂಡಿಸಿದೆ.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications