"ಚೈಲ್ಡಿಶ್, ಜೋಕ್ ಆಫ್ ದಿ ಸೆಂಚುರಿ"; ಮೋದಿಗೆ ಜಿಗ್ನೇಶ್ ಮೇವಾನಿ ಬಾಣ!
ಚಿತ್ರದುರ್ಗ, ಅಕ್ಟೋಬರ್ 31: ರಾಜ್ಯ ಮಟ್ಟದಲ್ಲಿ ಸದ್ದು ಮಾಡುತ್ತಿರುವ, ಟಿಪ್ಪು ಹೆಸರನ್ನು ಪಠ್ಯಪುಸ್ತಕದಿಂದ ಹೊರತೆಗೆಯುವ ವಿಚಾರವಾಗಿ, "ಟಿಪ್ಪು ಸುಲ್ತಾನ್ ಹೆಸರನ್ನು ಇಲ್ಲವಾಗಿಸುವ ಯತ್ನ ನಡೆಯುತ್ತಿದೆ. ಆರೆಸ್ಸೆಸ್ ಹಾಗೂ ಬಿಜೆಪಿಯ ಹಿಡನ್ ಅಜೆಂಡಾ ಇದು, ಹಿಂದೂ ತುಷ್ಟೀಕರಣಕ್ಕಾಗಿ ಇತಿಹಾಸವನ್ನು ಅಳಿಸಲು ಬಿಜೆಪಿಯವರು ಹೀಗೆ ಮಾಡುತ್ತಿದ್ದಾರೆ" ಎಂದು ಆರೋಪಿಸಿದ್ದಾರೆ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ.
ಚಿತ್ರದುರ್ಗದಲ್ಲಿ ಜಿಗ್ನೇಶ್ ಮೆವಾನಿ ವಿರುದ್ಧ ಕಳೆದ ವರ್ಷ ಪ್ರಕರಣ ದಾಖಲಾಗಿತ್ತು. ಕಳೆದ ವಿಧಾನಸಭೆ ಚುನಾವಣೆ ವೇಳೆ 'ಮೋದಿ ಕಾರ್ಯಕ್ರಮದಲಿ ಕುರ್ಚಿ ತೂರಿ' ಎಂಬ ಹೇಳಿಕೆ ಹಿನ್ನೆಲೆ 2018 ಏಪ್ರಿಲ್ 6 ರಂದು ನಗರ ಠಾಣೆಯಲ್ಲಿ ಅವರ ವಿರುದ್ಧ ದೂರು ದಾಖಲಾಗಿತ್ತು.
ಇದೇ ಕಾರಣಕ್ಕೆ ಇಂದು ಚಿತ್ರದುರ್ಗ ನ್ಯಾಯಾಲಯಕ್ಕೆ ಬಂದಿದ್ದ ವೇಳೆ ಪ್ರತಿಕ್ರಿಯಿಸಿದ ಅವರು, "ಟಿಪ್ಪು ಇತಿಹಾಸವನ್ನು ಪಠ್ಯದಿಂದ ತೆಗೆಯುವ ಮೂಲಕ ಮುಸ್ಲಿಂ ಸಮುದಾಯವನ್ನು ದಮನ ಮಾಡುವ ಕಾರ್ಯ ನಡೆಯುತ್ತಿದೆ, ಇದರಿಂದ ಹಿಂದೂ ಮುಸ್ಲಿಂ ಸಮುದಾಯಗಳನ್ನು ಇಬ್ಭಾಗಿಸಲಾಗುತ್ತಿದೆ. ಆರ್ ಎಸ್ ಎಸ್ ಕೋಮುವಾದಿ ಮನಸ್ಥಿತಿ ಈ ಕೆಲಸ ಮಾಡುತ್ತಿದೆ. ವೈವಿಧ್ಯತೆ ಮತ್ತು ಏಕತೆಯೇ ಭಾರತದ ಸೌಂದರ್ಯ. ಅದನ್ನು ನಾವು ಪಾಲಿಸಬೇಕಿದೆ" ಎಂದರು.

"ದೇಶದಲ್ಲಿ ಆರ್ಥಿಕ ಮುಗ್ಗಟ್ಟು, ನಿರುದ್ಯೋಗ ತಾಂಡವವಾಡುತ್ತಿವೆ, ಇದಕ್ಕೆ ಪ್ರಧಾನಿ ಮೋದಿ ಬಳಿ ಯಾವುದೇ ಉತ್ತರವಿಲ್ಲ. ಜನರ ಗಮನ ಬೇರೆಡೆ ಸೆಳೆಯಲು ಇಂಥ ತಂತ್ರ ಹೂಡುತ್ತಿದ್ದಾರೆ. ನರೇಗಾ ಯೋಜನೆ, ಆರೋಗ್ಯ ಯೋಜನೆಗಳು ಮುಗ್ಗರಿಸಿವೆ ಹೋಗಿವೆ. ಜನರಿಗೆ ಈಗ ಬಿಜೆಪಿ ಸರ್ಕಾರದ ಧೋರಣೆ ಅರಿವಾಗುತ್ತಿದೆ. ಎಲ್ಲಾ ಪಕ್ಷದ ನಾಯಕರು ವಾಸ್ತವ ಪರಿಸ್ಥಿತಿಯನ್ನು ಜನರ ಮುಂದಿಡಬೇಕಿದೆ" ಎಂದರು.
ಪ್ರಧಾನಿ ಮೋದಿ ಚಹಾ ಮಾರಿದ ಮಾತಿಗೆ ಪ್ರತಿಕ್ರಿಯಿಸಿದ ಮೇವಾನಿ "ಚೈಲ್ಡಿಶ್, ಜೋಕ್ ಆಫ್ ದಿ ಸೆಂಚುರಿ; ಅವರು ಚಹಾ ಮರಿದ್ದಾರೋ ಇಲ್ಲವೋ ಗೊತ್ತಿಲ್ಲ, ಈಗ ದೇಶ ಮಾರುತ್ತಿದ್ದಾರೆ" ಎಂದು ಮೋದಿ ವಿರುದ್ಧ ಕಿಡಿಕಾರಿದರು. ಆರ್ ಎಸ್ ಎಸ್, ಬಿಜೆಪಿಗೆ ದಲಿತರು, ಮುಸ್ಲಿಮರು 2ನೇ ದರ್ಜೆ ನಾಗರೀಕರಾಗಿದ್ದು, ಅವರನ್ನು ಕೆಲಸಕ್ಕೆ ಮಾತ್ರ ಬಳಸಿಕೊಳ್ಳುವುದು ಬಿಜೆಪಿಯ ಅಜೆಂಡ" ಎಂದು ಸಿಡುಕಿದರು.
ಚಿತ್ರದುರ್ಗದಲ್ಲಿ ಜಿಗ್ನೇಶ್ ಮೇವಾನಿ ವಿರುದ್ಧ ಇರುವ ಪ್ರಕರಣದ ವಿಚಾರವಾಗಿಯೂ ಮಾತನಾಡಿ, "ನನ್ನ ವಿರುದ್ಧ ಪ್ರಕರಣ ದಾಖಲಾಗಿದೆ, ಆದರೆ ನಾನು ಆ ರೀತಿ ಹೇಳಿಲ್ಲ. ಅಸಲಿಗೆ ನನಗೆ ಮೋದಿ ಯಾರು ಎಂದೇ ಗೊತ್ತಿಲ್ಲ" ಎಂದು ವ್ಯಂಗ್ಯದ ಧಾಟಿಯಲ್ಲಿ ಉತ್ತರಿಸಿದರು.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications