ಕಾಡುಗೊಲ್ಲರ ಕಣಜ ಸಿರಿಯಮ್ಮಗೆ ಜಾನಪದ ಅಕಾಡೆಮಿ ಪ್ರಶಸ್ತಿ
ಚಿತ್ರದುರ್ಗ, ನವೆಂಬರ್ 06: ಮಧ್ಯ ಕರ್ನಾಟಕದ ಬುಡಕಟ್ಟು ಸಮುದಾಯಗಳಲ್ಲಿ ಕಾಡುಗೊಲ್ಲ ಸಮುದಾಯ ಒಂದಾಗಿದೆ. ಈ ಸಮುದಾಯದಲ್ಲಿ ತನ್ನದೇ ಆದ ವಿಶಿಷ್ಟ ಆಚರಣೆ ಮತ್ತು ಸಂಸ್ಕೃತಿಯನ್ನು ಹೊಂದಿದೆ. ಈ ಸಮುದಾಯದಲ್ಲಿ ಜಾನಪದ ಕಣಜ ಎಂದೇ ಪ್ರಸಿದ್ಧಿ ಪಡೆದಿರುವ ಚಳ್ಳಕೆರೆಯ ನಾಡೋಜ ಪುರಸ್ಕೃತ ಸಿರಿಯಮ್ಮಗೆ 2023ನೇ ಸಾಲಿನ 'ಜಾನಪದ ಅಕಾಡೆಮಿ ಪ್ರಶಸ್ತಿ' ಲಭಿಸಿದೆ.
ಸಿರಿಯಮ್ಮ ಅನಕ್ಷರಸ್ಥರಾದ ಸಹ ಜಾನಪದ ಹಾಡುಗಳನ್ನು ಪೋಣಿಸುವುದಲ್ಲಿ ಎತ್ತಿದ ಕೈ. ಸಾವಿರಾರು ಪದಗಳನ್ನು ತನ್ನ ಜ್ಞಾನ ಭಂಡಾರದಲ್ಲಿಟ್ಟುಕ್ಕೊಂಡು ಈ ಹಿರಿಯ ಕಲಾವಿದೆ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಸಮುದಾಯದ ಸಾಂಸ್ಕೃತಿಕ ವೀರ ನಾಯಕರಾದ ಎತ್ತಪ್ಪ, ಜುಂಜಪ್ಪ, ಚಿಕ್ಕಣ್ಣ, ಕ್ಯಾತಪ್ಪ, ಕದರಿ ನರಸಿಂಹ ಹಾಗೂ ರಂಗಪ್ಪನ ರಂಗಪ್ಪನ ಮಹಾಕಾವ್ಯಗಳನ್ನು ಪಟಪಟನೇ ಸಾಸಿವೆ ಕಾಳು ಸಿಡಿದಂತೆ ಹಾಡುವುದನ್ನು ಕರಗತ ಮಾಡಿಕೊಂಡಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಎಲಗಟ್ಟೆ ಗ್ರಾಮದ ಸಿರಿಯಮ್ಮ ಅನಕ್ಷರಸ್ಥರು. ಆದರೂ ಸಹ ಅವರು ಅಜ್ಜಿ ಮತ್ತು ತಾಯಿಯಿಂದ ಕಲಿತುಕೊಂಡು ಚಿಕ್ಕಂದಿನಿಂದಲೂ ಹಾಡುವುದನ್ನು ಆರಂಬಿಸಿದರು. ಜಾನಪದ ಕಣಜ, ಜಾನಪದ ಸರಸ್ವತಿ ಎಂದು ನಾಡಿನಾದ್ಯಂತ ಗುರುತಿಸಿಕೊಂಡಿದ್ದಾರೆ. ಸಿರಿಯಜ್ಜಿಯ ನಂತರ ಈಗಿನ ಕಾಡುಗೊಲ್ಲರ ಹೆಣ್ಣು ಮಕ್ಕಳಿಗೆ ಹಾಡುಗಳನ್ನು ಕಲಿಸುವ ಮೂಲಕ ಜಾನಪದವನ್ನು ಉಳಿಸುವ ಪ್ರಯತ್ನ ಮಾಡುತ್ತಿದ್ದಾರೆ.
ಪ್ರಶಸ್ತಿ ಕುರಿತು ಮಾತನಾಡಿರುವ ಸಿರಿಯಮ್ಮ ಅವರು, 'ಅನಕ್ಷರಸ್ಥೆಯಾದ ನನಗೆ ಪ್ರಶಸ್ತಿ ಸಿಗುತ್ತದೆ ಎಂಬ ನಿರೀಕ್ಷೆ ಇರಲಿಲ್ಲ. ಪ್ರಶಸ್ತಿ ಬಂದಿರುವುದು ಸಂತಸ ತಂದಿದೆ. ವಯಸ್ಸು ಆಯಿತು. ಆರೋಗ್ಯ ಸರಿಯಿಲ್ಲ. ನಾನು ಕಲಿತಿರುವ ಪದಗಳನ್ನು ಮುಂದಿನ ಪೀಳಿಗೆಯ ಹೆಣ್ಣು ಮಕ್ಕಳಿಗೆ ಕಲಿಸೋಣ ಅಂದ್ರೆ ಈಗಿನ ಹೆಣ್ಣು ಮಕ್ಕಳು ಕಲಿಯುವ ಹಾಡುಗಳ ಕಡೆ ಆಸಕ್ತಿ ತೋರುತ್ತಿಲ್ಲ. ಪ್ರಶಸ್ತಿಗೆ ನನ್ನನ್ನು ಗುರುತಿಸಿರುವುದು ಸಂತಸ ತಂದಿದೆ' ಎಂದು ಹರ್ಷ ವ್ಯಕ್ತಪಡಿಸಿದರು.
ಕಾಡುಗೊಲ್ಲ ಸಮುದಾಯ ಜಾನಪದ ಹಿರಿಯ ಸೋಬಾನೆ ಕಲಾವಿದೆಯನ್ನು ಗುರುತಿಸಿ ಸರ್ಕಾರ ಪ್ರಶಸ್ತಿಗೆ ಆಯ್ಕೆ ಮಾಡಿರುವುದು ಸಂತಸ ತಂದಿದೆ ಎಂದು ಸಮುದಾಯದ ಚಿಂತಕರು, ಸಾಹಿತಿಗಳು, ಕಲಾವಿದರು, ಮುಖಂಡರು ಹರ್ಷ ವ್ಯಕ್ತಪಡಿಸಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications