ಚಿತ್ರದುರ್ಗ ಜಿಲ್ಲೆಯ ಕಂಚಿಪುರದಲ್ಲಿ ದುಡ್ಡಿನ ಜಾತ್ರೆ; ಹಣ ಆಯ್ದುಕೊಳ್ಳಲು ನೆರೆದ ಜನಸಾಗರ
ಚಿತ್ರದುರ್ಗ, ಸೆಪ್ಟೆಂಬರ್, 20: ಸಾಮಾನ್ಯವಾಗಿ ರಾಜ್ಯದೆಲ್ಲೆಡೆ ಎಲ್ಲ ದೇವಾಲಯಗಳಲ್ಲೂ ವಿಜಯದಶಮಿಯ ದಿನದಂದು ಅಂಬು ಹೊಡೆಯುತ್ತಾರೆ. ಆದರೆ ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಕಂಚಿಪುರ ಗ್ರಾಮದ ಕಂಚಿವರದರಾಜ ಸ್ವಾಮಿಗೆ ಉತ್ತರೆ ಮಳೆಯ ಸಂದರ್ಭದಲ್ಲಿ ಅಂಬು ಹೊಡೆಯಲಾಗುತ್ತದೆ. ಅಲ್ಲದೆ ಇದೇ ಸಂದರ್ಭದಲ್ಲಿಯೇ ವರ್ಷಕ್ಕೆ ಒಮ್ಮೆ ಮಾತ್ರ ದೇವರಿಗೆ ಉತ್ತರೆ ಮಳೆ ನೀರಿನಲ್ಲಿ ನಾಮ ಧರಿಸುವ ಸಂಪ್ರದಾಯವೂ ರೂಡಿಯಲ್ಲಿದೆ.
ವಿಷ್ಣುವಿನ ಇನ್ನೊಂದು ಹೆಸರೇ ವರದರಾಜ. ಈ ಕಂಚಿವರದರಾಜ ಸ್ವಾಮಿಯ ದೇವಸ್ಥಾನ ಕಂಚಿಪುರದಲ್ಲಿದೆ. ಇಲ್ಲಿನ ದೇವರಿಗೆ ದುಡ್ಡಿನ ಹರಕೆ ಮಾಡಿಕೊಳ್ಳುವ ಸಾಂಪ್ರದಾಯಿಕ ಆಚರಣೆ ರೂಡಿಯಲ್ಲಿದೆ. ನಂತರ ಹರಕೆ ಕಟ್ಟಿಕೊಂಡವರು ದೇವರ ಮೇಲೆ ಚಿಲ್ಲರೆ ನಾಣ್ಯಗಳನ್ನು ಎಸೆಯುತ್ತಾರೆ. ಹಣವನ್ನು ಹುಂಡಿಗೆ ಹಾಕುವಂತಿಲ್ಲ. ಇಷ್ಟಾರ್ಥ ಸಿದ್ದಿಯಾದವರು ಸಹ ಹಣವನ್ನು ದೇವರ ಹುಂಡಿಗಾಗಲಿ ಅಥವಾ ಆಡಳಿತ ಮಂಡಳಿಗಾಗಲಿ ನೀಡುವಂತಿಲ್ಲ. ಬದಲಾಗಿ ದೇವರಿಗೆ ಎಸೆಯುವ ಮೂಲಕ ತಮ್ಮ ಹರಕೆ ಈಡೇರಿಸಿಕೊಳ್ಳುತ್ತಾರೆ. ಇನ್ನು ಈ ಹಣವನ್ನು ಆಯ್ದುಕೊಳ್ಳಲು ಸಾಕಷ್ಟು ಜನರು ಬರುತ್ತಾರೆ. ಹೀಗೆ ದೇವರ ಮೇಲೆ ತೂರಿದ ಹಣವನ್ನು ಆಯ್ದುಕೊಳ್ಳಲು ಭಕ್ತರು ದೇವರ ಹಿಂದೆಯೇ ಬಟ್ಟೆ ಹಿಡಿದುಕೊಂಡು ಹೋಗುತ್ತಾರೆ.
ಹರಕೆ ತೀರಿಸುವ ವಿಧಾನಗಳು
ಭಕ್ತರು ಕಷ್ಟ ನಿವಾರಣೆಗೆ, ಉದ್ಯೋಗ, ಮದುವೆ, ಸಂತಾನ ಭಾಗ್ಯ ಸೇರಿದಂತೆ ಇನ್ನಿತರ ಬೇಡಿಕೆಯಿಟ್ಟು ಹರಕೆ ಹೊತ್ತುಕೊಳ್ಳುತ್ತಾರೆ. ತಾವು ಅಂದುಕೊಂಡಿದ್ದು ಈಡೇರಿದರೆ ಅದಕ್ಕೆ ಪ್ರತಿಯಾಗಿ ಹಣವನ್ನು ನೀಡುವುದಾಗಿ ಕೋರಿಕೊಳ್ಳುತ್ತಾರೆ. ಭಕ್ತರು ತಮ್ಮ ಬೇಡಿಕೆ ಈಡೇರಿದ ನಂತರ ಜಾತ್ರೆ ಸಂದರ್ಭದಲ್ಲಿ ಹರಕೆ ತೀರಿಸುತ್ತಾರೆ. ಜಾತ್ರೆ ಆರಂಭವಾದ ದಿನ ಅಂಬಿನೋತ್ಸವ ನಡೆಯುತ್ತದೆ. ಒಂದು ವಾರಗಳ ಕಾಲ ಜಾತ್ರೆ ನಡೆಯುತ್ತದೆ. ಅಂಬಿನ ಬೆಳಗಿನ ಜಾವ 16 ಸೇರಿನ ಅಕ್ಕಿಯ ಪ್ರಸಾದ ತಯಾರಿಸಿ ಭಕ್ತರಿಗೆ ನೀಡಲಾಗುತ್ತದೆ.

ತಿರುಪತಿಯಿಂದ ಬಂದ ವರದರಾಜ
ಇಲ್ಲಿ ಹರಕೆ ಹೊತ್ತುಕೊಂಡರೆ ದೆವ್ವ, ಪಿಶಾಚಿ ಕಾಟದಿಂದ ಮುಕ್ತಿ ಸಿಗುತ್ತದೆ. ಒಳ್ಳೆಯ ಉದ್ಯೋಗ ದೊರೆಯತ್ತದೆ, ಸಂತಾನ ಪ್ರಾಪ್ತಿ ಆಗುತ್ತದೆ ಎನ್ನುವ ನಂಬಿಕೆ ಇಲ್ಲಿನ ಜನರದ್ದಾಗಿದೆ. ವರದರಾಜ ಸ್ವಾಮಿ ತಿರುಪತಿಯಿಂದ ಬಂದು ಇಲ್ಲಿಯೇ ನಲೆಯೂರಿದ್ದಾನೆ ಎಂದು ಹೇಳಲಾಗುತ್ತಿದೆ. ವರದರಾಜನಿಗೆ ವರ್ಷಕ್ಕೊಮ್ಮೆ ಮಾತ್ರ, ಅಂದರೆ ಜಾತ್ರೆಯ ಸಂದರ್ಭದಲ್ಲಿ ಮಾತ್ರ ನಾಮ ಹಾಕಲಾಗುತ್ತದೆ. ಜಾತ್ರೆಗೆ ಬರುವವರು ತಮ್ಮ ಜೊತೆ ಚೀಲಗಳನ್ನೂ ಹಿಡಿದುಕೊಂಡು ಬರುತ್ತಾರೆ. ಹಣವನ್ನು ಆರಿಸಿಕೊಳ್ಳಲು ಸಾಕಷ್ಟು ಜನಸಾಗರವೆ ನೆರೆಯುತ್ತದೆ.

ಜಾತ್ರೆಯಲ್ಲಿ ಹಾಲಿ ಹಾಗೂ ಮಾಜಿ ಶಾಸಕರು ಭಾಗಿ
ಇನ್ನು ಈ ಜಾತ್ರೆಯಲ್ಲಿ ಹಾಲಿ ಶಾಸಕ ಗೂಳಿಹಟ್ಟಿ ಡಿ.ಶೇಖರ್, ಹಾಗೂ ಮಾಜಿ ಶಾಸಕ ಬಿ.ಜಿ.ಗೋವಿಂದಪ್ಪ ಸೇರಿದಂತೆ ಮತ್ತಿತರರು ಜಾತ್ರೆಯಲ್ಲಿ ಭಾಗವಹಿಸಿ ದೇವರ ದರ್ಶನ ಪಡೆದರು. ಇದೇ ಸಂದರ್ಭದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಕಾಣಲು ದೇವರಲ್ಲಿ ಬೇಡಿಕೊಂಡಿದ್ದಾರೆ ಎನ್ನಲಾಗಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications