ಕರಿಯಾಲ ಗ್ರಾಮ ಪಂಚಾಯತಿ ಪಿಡಿಒ ವರ್ತನೆಗೆ ಬೇಸತ್ತು ಸಾಮೂಹಿಕ ರಾಜೀನಾಮೆ ಸಲ್ಲಿಸಿದ ಸದಸ್ಯರು
ಹಿರಿಯೂರು, ಮಾರ್ಚ್, 01: ತಾಲೂಕಿನ ಜವನಗೊಂಡನಹಳ್ಳಿ ಹೋಬಳಿಯ ಕರಿಯಾಲ ಗ್ರಾಮಪಂಚಾಯಿತಿ ಪಿಡಿಓ ಚಂದ್ರಕಲಾ ಅವರು ಸರಿಯಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ ಹಾಗೂ ಸಾರ್ವಜನಿಕರ ಕೈಗೆ ಸಿಗುತ್ತಿಲ್ಲ ಎಂದು ಆರೋಪಿಸಿ ಪಂಚಾಯಿತಿ ಉಪಾಧ್ಯಕ್ಷರು ಹಾಗೂ ಸದಸ್ಯರು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.
ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದ್ದು, ಸಮಸ್ಯೆ ಬಗೆಹರಿಸುವಲ್ಲಿ ಪಿಡಿಓ ವಿಫಲರಾಗಿದ್ದಾರೆ. ಜೊತೆಗೆ ಪಂಚಾಯಿತಿ ಅಭಿವೃದ್ಧಿ ಕಾರ್ಯಗಳು ಸಂಪೂರ್ಣವಾಗಿ ನಿಂತು ಹೋಗಿದ್ದು, ಗ್ರಾಮಗಳಲ್ಲಿ ತೊಂದರೆ ಉಂಟಾಗಿದೆ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬೇಜವಾಬ್ದಾರಿ ತೋರುತ್ತಿದ್ದಾರೆ ಎಂದು ದೂರಿದರು.

ಗ್ರಾಮ ಪಂಚಾಯಿತಲ್ಲಿ 15 ಜನ ಸದಸ್ಯರಿದ್ದಾದ್ದು, ಉಪಾಧ್ಯಕ್ಷರು ಸೇರಿ 11 ಜನ ಸದಸ್ಯರು ರಾಜೀನಾಮೆ ನೀಡಿದ್ದಾರೆ. ಅಧ್ಯಕ್ಷರು ಕೂಡ ರಾಜೀನಾಮೆ ನೀಡಲಿದ್ದು, ಉಳಿದ ಮೂರು ಜನರು ಕಾರಣಗಳಿಂದ ಬೇರೆಡೆಯಿದ್ದು, ಒಂದೆರಡು ದಿನಗಳಲ್ಲಿ ಅವರು ರಾಜೀನಾಮೆ ನೀಡಲಿದ್ದಾರೆ. ರಾಜೀನಾಮೆ ಕುರಿತು ಪಂಚಾಯಿತಿ ಸದಸ್ಯ ಕೆ. ಬಸವರಾಜ್ ಮಾತನಾಡಿ, ಪಂಚಾಯಿತಿ ಪಿಡಿಒ ಅವರು ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಸದಸ್ಯರಿಗೆ ಗೌರವ ಕೊಡದೇ ಅಗೌರವ ತೋರಿಸುತ್ತಾರೆ ಎಂದಿದ್ದಾರೆ.
ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರಮುಖವಾಗಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಸರಿಯಾದ ಸಮಯಕ್ಕೆ ಈಸ್ವತ್ತು ಮಾಡಿಕೊಡುತ್ತಿಲ್ಲ. ವಸತಿ ಯೋಜನೆಯ ಮನೆಗಳಿಗೆ ಹಣ ಬಿಲ್ ಪಾಸ್ ಮಾಡುತ್ತಿಲ್ಲ, ನರೇಗಾ ಯೋಜನೆಯಲ್ಲಿ ಯಾವುದೇ ಕೆಲಸಗಳು ನಡೆಯುತ್ತಿಲ್ಲ. ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷರ ಹಾಗೂ ಸದಸ್ಯರ ಪೋನ್ ಸಂಪರ್ಕಕ್ಕೆ ಸಿಗದೇ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದರು.
ಗ್ರಾಮ ಪಂಚಾಯತಿಗೆ ಸರಿಯಾದ ಸಮಯದಲ್ಲಿ ಕರ್ತವ್ಯಕ್ಕೆ ಹಾಜರಾಗುತ್ತಿಲ್ಲ. ಎನ್.ಆರ್.ಜಿ. ಕಾಮಗಾರಿಯಲ್ಲಿ ರೈತರ ಸಾಮಗ್ರಿಗಳ ವೆಚ್ಚದ ಬಿಲ್ ಮಾಡದೇ ಇರುವುದು. ಇಲ್ಲದೆ ಪ್ರಮುಖವಾಗಿ ಕುಡಿಯುವ ನೀರಿನ ಸಾಮಗ್ರಿಗಳು ಹಾಗೂ ವಿದ್ಯುತ್ ಬಲ್ಬ್ಗಳು ಅಂಗಡಿಯಲ್ಲಿ ಖರೀದಿ ಮಾಡಿದ್ದು, ಅಂಗಡಿ ಮಾಲೀಕರಿಗೆ ಬಿಲ್ ಕೊಡದೆ ಸತಾಯಿಸುತ್ತಿದ್ದಾರೆ. ಹೀಗೆ ಅನೇಕ ಸಮಸ್ಯೆಗಳಿವೆ. ಆಡಳಿತದಲ್ಲಿ ಅಸಹಾಯಕತೆ ತೋರಿರುವ ಪಿಡಿಓ ಚಂದ್ರಕಲಾ ಅವರ ನಡುವಳಿಕೆಗೆ ಬೇಸತ್ತು ರಾಜೀನಾಮೆ ನೀಡಿದ್ದೇವೆ ಎಂದು ತಿಳಿಸಿದರು.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications