ಕರಿಯಾಲ ಗ್ರಾಮ ಪಂಚಾಯತಿ ಪಿಡಿಒ ವರ್ತನೆಗೆ ಬೇಸತ್ತು ಸಾಮೂಹಿಕ ರಾಜೀನಾಮೆ ಸಲ್ಲಿಸಿದ ಸದಸ್ಯರು
ಹಿರಿಯೂರು, ಮಾರ್ಚ್, 01: ತಾಲೂಕಿನ ಜವನಗೊಂಡನಹಳ್ಳಿ ಹೋಬಳಿಯ ಕರಿಯಾಲ ಗ್ರಾಮಪಂಚಾಯಿತಿ ಪಿಡಿಓ ಚಂದ್ರಕಲಾ ಅವರು ಸರಿಯಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ ಹಾಗೂ ಸಾರ್ವಜನಿಕರ ಕೈಗೆ ಸಿಗುತ್ತಿಲ್ಲ ಎಂದು ಆರೋಪಿಸಿ ಪಂಚಾಯಿತಿ ಉಪಾಧ್ಯಕ್ಷರು ಹಾಗೂ ಸದಸ್ಯರು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.
ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದ್ದು, ಸಮಸ್ಯೆ ಬಗೆಹರಿಸುವಲ್ಲಿ ಪಿಡಿಓ ವಿಫಲರಾಗಿದ್ದಾರೆ. ಜೊತೆಗೆ ಪಂಚಾಯಿತಿ ಅಭಿವೃದ್ಧಿ ಕಾರ್ಯಗಳು ಸಂಪೂರ್ಣವಾಗಿ ನಿಂತು ಹೋಗಿದ್ದು, ಗ್ರಾಮಗಳಲ್ಲಿ ತೊಂದರೆ ಉಂಟಾಗಿದೆ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬೇಜವಾಬ್ದಾರಿ ತೋರುತ್ತಿದ್ದಾರೆ ಎಂದು ದೂರಿದರು.

ಗ್ರಾಮ ಪಂಚಾಯಿತಲ್ಲಿ 15 ಜನ ಸದಸ್ಯರಿದ್ದಾದ್ದು, ಉಪಾಧ್ಯಕ್ಷರು ಸೇರಿ 11 ಜನ ಸದಸ್ಯರು ರಾಜೀನಾಮೆ ನೀಡಿದ್ದಾರೆ. ಅಧ್ಯಕ್ಷರು ಕೂಡ ರಾಜೀನಾಮೆ ನೀಡಲಿದ್ದು, ಉಳಿದ ಮೂರು ಜನರು ಕಾರಣಗಳಿಂದ ಬೇರೆಡೆಯಿದ್ದು, ಒಂದೆರಡು ದಿನಗಳಲ್ಲಿ ಅವರು ರಾಜೀನಾಮೆ ನೀಡಲಿದ್ದಾರೆ. ರಾಜೀನಾಮೆ ಕುರಿತು ಪಂಚಾಯಿತಿ ಸದಸ್ಯ ಕೆ. ಬಸವರಾಜ್ ಮಾತನಾಡಿ, ಪಂಚಾಯಿತಿ ಪಿಡಿಒ ಅವರು ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಸದಸ್ಯರಿಗೆ ಗೌರವ ಕೊಡದೇ ಅಗೌರವ ತೋರಿಸುತ್ತಾರೆ ಎಂದಿದ್ದಾರೆ.
ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರಮುಖವಾಗಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಸರಿಯಾದ ಸಮಯಕ್ಕೆ ಈಸ್ವತ್ತು ಮಾಡಿಕೊಡುತ್ತಿಲ್ಲ. ವಸತಿ ಯೋಜನೆಯ ಮನೆಗಳಿಗೆ ಹಣ ಬಿಲ್ ಪಾಸ್ ಮಾಡುತ್ತಿಲ್ಲ, ನರೇಗಾ ಯೋಜನೆಯಲ್ಲಿ ಯಾವುದೇ ಕೆಲಸಗಳು ನಡೆಯುತ್ತಿಲ್ಲ. ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷರ ಹಾಗೂ ಸದಸ್ಯರ ಪೋನ್ ಸಂಪರ್ಕಕ್ಕೆ ಸಿಗದೇ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದರು.
ಗ್ರಾಮ ಪಂಚಾಯತಿಗೆ ಸರಿಯಾದ ಸಮಯದಲ್ಲಿ ಕರ್ತವ್ಯಕ್ಕೆ ಹಾಜರಾಗುತ್ತಿಲ್ಲ. ಎನ್.ಆರ್.ಜಿ. ಕಾಮಗಾರಿಯಲ್ಲಿ ರೈತರ ಸಾಮಗ್ರಿಗಳ ವೆಚ್ಚದ ಬಿಲ್ ಮಾಡದೇ ಇರುವುದು. ಇಲ್ಲದೆ ಪ್ರಮುಖವಾಗಿ ಕುಡಿಯುವ ನೀರಿನ ಸಾಮಗ್ರಿಗಳು ಹಾಗೂ ವಿದ್ಯುತ್ ಬಲ್ಬ್ಗಳು ಅಂಗಡಿಯಲ್ಲಿ ಖರೀದಿ ಮಾಡಿದ್ದು, ಅಂಗಡಿ ಮಾಲೀಕರಿಗೆ ಬಿಲ್ ಕೊಡದೆ ಸತಾಯಿಸುತ್ತಿದ್ದಾರೆ. ಹೀಗೆ ಅನೇಕ ಸಮಸ್ಯೆಗಳಿವೆ. ಆಡಳಿತದಲ್ಲಿ ಅಸಹಾಯಕತೆ ತೋರಿರುವ ಪಿಡಿಓ ಚಂದ್ರಕಲಾ ಅವರ ನಡುವಳಿಕೆಗೆ ಬೇಸತ್ತು ರಾಜೀನಾಮೆ ನೀಡಿದ್ದೇವೆ ಎಂದು ತಿಳಿಸಿದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications