ಕೊರೊನಾ ನಿಯಂತ್ರಣದಲ್ಲಿ ಕರ್ನಾಟಕ ಗೆದ್ದಿದೆ: ಸಚಿವ ಶ್ರೀರಾಮುಲು

ಚಿತ್ರದುರ್ಗ, ಏಪ್ರಿಲ್ 14: ಕರ್ನಾಟಕ ರಾಜ್ಯದಲ್ಲಿ ಈವರೆಗೆ 247 ಜನರಲ್ಲಿ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದ್ದು, 8 ಜನ ಸಾವಿಗೀಡಾಗಿದ್ದರೆ, 60 ಜನ ಗುಣಮುಖರಾಗಿದ್ದಾರೆ. ಹೀಗಾಗಿ ಭಾರತ ದೇಶದಲ್ಲಿ ಪ್ರಾರಂಭದಲ್ಲಿ ಕೊರೊನಾ ವೈರಸ್ ಪೀಡಿತರ ಸಂಖ್ಯೆಯಲ್ಲಿ 3ನೇ ಸ್ಥಾನದಲ್ಲಿದ್ದ ಕರ್ನಾಟಕ ರಾಜ್ಯ ಈಗ 12ನೇ ಸ್ಥಾನಕ್ಕೆ ಇಳಿದಿದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.

ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯ ಬಳಿಕ ಮಾತನಾಡಿದ ಅವರು, ಕೊರೊನಾ ಸೋಂಕು ಹರಡದಂತೆ ಮೇ 3 ರವರೆಗೆ ಲಾಕ್ ಡೌನ್ ಮುಂದುವರಿಯಲಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ತಿಳಿಸಿದ್ದಾರೆ. ಆದ್ದರಿಂದ ಎಲ್ಲರೂ ಪ್ರಧಾನಿ ಮೋದಿಯವರು ನೀಡಿರುವ ಸಪ್ತ ಸೂತ್ರಗಳನ್ನು ಚಾಚು ತಪ್ಪದೇ ಪಾಲಿಸಬೇಕು ಎಂದರು.

ಪ್ರಧಾನಿ ಮೋದಿಯವರು ಹೇಳಿರುವಂತೆ ರಾಜ್ಯದಲ್ಲಿ ಯಾರು ಸಹ ಹಸಿವಿನಿಂದ ಬಳಲಬಾರದು. ಹೀಗಾಗಿ ಶ್ರೀಮಂತರು ಹಾಗೂ ಸ್ಥಿತಿವಂತರಾಗಿರುವವರು ಬಡವರಿಗೆ, ನಿರ್ಗತಿಕರಿಗೆ ಮತ್ತು ಕೂಲಿಕಾರ್ಮಿಕರಿಗೆ ಸಹಾಯ ಮಾಡಿ ಎಂದು ಕರೆ ನೀಡಿದರು. ಜೊತೆಗೆ ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಕೂಡ ಬಡವರು, ನಿರ್ಗತಿಕರಿಗೆ ಆಹಾರ ವ್ಯವಸ್ಥೆ ಮಾಡಲಾಗುವುದು ಎಂಬ ಭರವಸೆ ಸಹ ನೀಡಿದರು.

 Karnataka Won Under Corona Control: Minister B Sriramulu

ಕೊರೊನಾ ವೈರಸ್ ಭೀತಿಯಿಂದ ಎಲ್ಲರೂ ಮಾಸ್ಕ್ ಬಳಸುತ್ತಿದ್ದಾರೆ. ಆದರೆ ವೈದ್ಯರು ಹೊರತುಪಡಿಸಿ ಸಾರ್ವಜನಿಕರು ಎನ್ 95 ಮಾಸ್ಕ್ ಧರಿಸುವ ಅಗತ್ಯವಿಲ್ಲ. ಜನಸಾಮಾನ್ಯರು ಕೇವಲ ಬಟ್ಟೆಗಳಿಂದ ತಯಾರಿಸಿದ ಮಾಸ್ಕ್ ಧರಿಸಿದರೆ ಸಾಕು ಎಂದು ಹೇಳಿದರು.

ಬಟ್ಟೆ ಮಾಸ್ಕ್ ಗಳಿಂದ ಯಾವುದೇ ಸಮಸ್ಯೆಗಳಿಲ್ಲ, ಜೊತೆಗೆ ಕೋವಿಡ್ 19 ಹರಡದಂತೆ ಜಿಲ್ಲೆಯ ಗಡಿಭಾಗದಲ್ಲಿ ಬಂದ್ ಮಾಡಿ ಕೊರೊನಾ ಹರಡದಂತೆ ಕಟ್ಟೆಚ್ಚರ ವಹಿಸಲಾಗಿದೆ. ಈ ವೇಳೆ ಕೃಷಿ ಕಾಯಕಕ್ಕೆ ಸಕಲ ನೆರವು ನೀಡುವ ಮೂಲಕ ರೈತರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಆರೋಗ್ಯ ಸಚಿವ ಬಿ. ಶ್ರೀರಾಮುಲು ಸೂಚಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+