ಚಿತ್ರದುರ್ಗದಿಂದ ಶಿರಡಿಗೆ ನೂತನ ಸರ್ಕಾರಿ ಬಸ್ ಸೇವೆ
ಚಿತ್ರದುರ್ಗ, ಫೆಬ್ರವರಿ 19: ಭಾರತದ ಪ್ರಮುಖ ಪ್ರಮುಖ ದೇವಸ್ಥಾನಗಳಲ್ಲಿ ಒಂದಾದ ಮಹಾರಾಷ್ಟ್ರದ ಶಿರಡಿ ಸಾಯಿಬಾಬಾ ದೇವಸ್ಥಾನವು ಒಂದಾಗಿದ್ದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಚಿತ್ರದುರ್ಗ ವಿಭಾಗ ವತಿಯಿಂದ ಇಂದಿನಿಂದ ಚಿತ್ರದುರ್ಗ-ಶಿರಡಿ ನಡುವೆ ನೂತನ ನಾನ್ ಎಸಿ ಸ್ಲೀಪರ್ ಸಾರಿಗೆ ಬಸ್ ಸೇವೆ ಆರಂಭಿಸಿದೆ.
ಚಿತ್ರದುರ್ಗದಿಂದ ಹೊರಟ ಬಸ್ ಹೊಸಪೇಟೆ, ಇಳಕಲ್ಲು, ವಿಜಯಪುರ, ಸೊಲ್ಲಾಪುರ ಹಾಗೂ ಅಹಮದನಗರ ಮಾರ್ಗವಾಗಿ ಬಸ್ ಶಿರಡಿಗೆ ತಲುಪುತ್ತದೆ.
ಚಿತ್ರದುರ್ಗ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಿಂದ ಸಂಜೆ 5 ಗಂಟೆಗೆ ಬಸ್ ಹೊರಡಲಿದ್ದು, ಮುಂಜಾನೆ 5 ಗಂಟೆಗೆ ಶಿರಡಿ ತಲುಪುತ್ತದೆ. ನಂತರ ಅದೇ ದಿನ ಶಿರಡಿಯಿಂದ ಸಂಜೆ 6 ಗಂಟೆಗೆ ಹೊರಟರೆ, ಬೆಳಿಗ್ಗೆ 6 ಗಂಟೆಗೆ ಚಿತ್ರದುರ್ಗ ತಲುಪುತ್ತದೆ. ಚಿತ್ರದುರ್ಗದಿಂದ ಹೊರಡುವ ಒಬ್ಬ ಪ್ರಯಾಣಿಕನಿಗೆ 1,150 ಟಿಕೆಟ್ ದರ ನಿಗದಿ ಮಾಡಲಾಗಿದೆ.

ಚಿತ್ರದುರ್ಗದಿಂದ ಶಿರಡಿ ಸಾಯಿಬಾಬಾ ದರ್ಶನಕ್ಕೆ ಹೋಗಲು ಬಸ್ ಸೇವೆ ಇಲ್ಲದ ಕಾರಣ ಬೇರೆ ಬೇರೆ ಕಡೆಗಳಿಂದ ಹೋಗಬೇಕಿತ್ತು, ಇದೀಗ ಸಾಯಿಬಾಬಾ ಭಕ್ತರಿಗೆ ಚಿತ್ರದುರ್ಗದಿಂದ ನೇರವಾಗಿ ಶಿರಡಿಗೆ ಹೋಗುವ ಅವಕಾಶವನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಚಿತ್ರದುರ್ಗ ವಿಭಾಗ ವತಿಯಿಂದ ಕಲ್ಪಿಸಲಾಗಿದೆ.
ಈ ಸಾರಿಗೆ ಸೇವೆಯನ್ನು ಶಿರಡಿ ಸಾಯಿಬಾಬನ ಭಕ್ತರು ಮತ್ತು ಸಾರ್ವಜನಿಕ ಪ್ರಯಾಣಿಕರು ನೂತನ ಸೇವೆಯನ್ನು ಪಡೆದುಕೊಳ್ಳಬಹುದಾಗಿದೆ.
ಇನ್ನು ಹಿರಿಯೂರು, ಶಿರಾ, ಪಾವಗಡ, ಹೊಸದುರ್ಗ, ಚಳ್ಳಕೆರೆ, ಜಗಳೂರು, ತರೀಕೆರೆ,ಅಜ್ಜಂಪುರ, ಮೊಳಕಾಲ್ಮೂರು, ಚಿಕ್ಕನಾಯಕನಹಳ್ಳಿ , ದಾವಣಗೆರೆ ಜಿಲ್ಲೆ ಸೇರಿದಂತೆ ಮತ್ತಿತರ ಜಿಲ್ಲೆಯ ಪ್ರಯಾಣಿಕರು ಮತ್ತು ಭಕ್ತರು ಈ ಸೇವೆ ಬಳಸಿಕೊಳ್ಳಬಹುದಾಗಿದೆ.
-
ಶಿರಡಿ ಸಾಯಿಬಾಬಾ ಮಂದಿರದಲ್ಲಿ ದಾಸೋಹಕ್ಕೆ ದಿನಕ್ಕೆ 500 ಕೆಜಿ ಎಲ್ಪಿಜಿ ಬೇಕು -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ











Click it and Unblock the Notifications