ಕೆಎಸ್ಆರ್ಟಿಸಿ ಕೆಲಸ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚನೆ; ಆರೋಪಿಗಳ ಬಂಧನ
ಚಿತ್ರದುರ್ಗ, ಅಕ್ಟೋಬರ್ 27: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಇಲಾಖೆಯಲ್ಲಿ ಜನವರಿ 2019ನೇ ಸಾಲಿನಲ್ಲಿ ಕರೆಯಲಾಗಿದ್ದ ಸಂಚಾರಿ ನಿರೀಕ್ಷಕರು ಹಾಗೂ ಸಹಾಯಕ ಸಂಚಾರಿ ನಿರೀಕ್ಷಕರ ಹುದ್ದೆಗಳನ್ನು ಕೊಡಿಸುವುದಾಗಿ ನಂಬಿಸಿ ನಕಲಿ ದಾಖಲೆಗಳನ್ನು ಸೃಷ್ಟಿಸಿ 70 ಲಕ್ಷ ರೂಪಾಯಿ ಹಣವನ್ನು ವಂಚನೆ ಮಾಡಿರುವ ಐವರು ಆರೋಪಿಗಳನ್ನು ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಪೊಲೀಸರು ಬಂಧಿಸಿದ್ದಾರೆ.
ವಂಚನೆಗೆ ಒಳಗಾಗಿದ್ದ ಅಭಿಷೇಕ್ ಎಂಬುವವರು ಅ. 9 ರಂದು ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ದೂರು ನೀಡಿದ್ದರು. ಈ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದರು.
ವಂಚನೆ ಆರೋಪಿಗಳನ್ನು ಪತ್ತೆ ಹಚ್ಚಲು ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ರಾಧಿಕಾ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಮಹಾನಿಂಗ. ಬಿ. ನಂದಗಾವಿ ಮಾರ್ಗದರ್ಶನದಲ್ಲಿ, ಡಿವೈಎಸ್ಪಿ ರೋಷನ್ ಜಮೀರ್ ಉಸ್ತುವಾರಿಯಲ್ಲಿ, ಹೊಸದುರ್ಗ ಸಿಪಿಐ ಎಂ.ಡಿ. ಫೈಜುಲ್ಲಾ ನೇತೃತ್ವದಲ್ಲಿ ಹೊಸದುರ್ಗ ಠಾಣೆಯ ಪಿಎಸ್ಐ ಶಿವಕುಮಾರ್ ಮತ್ತು ಶ್ರೀರಾಂಪುರ ಠಾಣೆಯ ಪಿಎಸ್ಐ ನಾಗರಾಜ್ ಹಾಗೂ ಸಿಬ್ಬಂದಿಗಳ ಸೇರಿದಂತೆ ತಂಡವೊಂದನ್ನು ರಚನೆ ಮಾಡಲಾಗಿತ್ತು.

ಬಂಧಿತ ಆರೋಪಿಗಳು:
ಬಾದಾಮಿ ತಾಲ್ಲೂಕಿನ ಮಹಮ್ಮದ್ಸಾಬ್ ಅಲ್ಲಾಸಾಬ್ ಭಾಗವಾನ್, ವಿಜಯಪುರ ನಗರದ ಬಸವರಾಜ, ಬಾಗಲಕೋಟೆಯ ವೀರಭದ್ರಪ್ಪ ಸೋಮಲಿಂಗಪ್ಪ ಅರಗಿನಶೆಟ್ಟಿ ಅವರನ್ನು ಬಂಧಿಸಲಾಗಿದೆ. ಅಲ್ಲದೆ, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ ಬಿ.ಮಂಜುನಾಥ ಅಲಿಯಾಸ್ ಮಂಜುನಾಥ ಬಿಲ್ಯ ನಾಯ್ಕ ಹಾಗೂ ಅನಿಲ್ ಕುಮಾರ್ ಎಂಬ ಇಬ್ಬರನ್ನು ನ್ಯಾಯಾಲಯದ ಆದೇಶದ ಮೇರೆಗೆ ಪೊಲೀಸ್ ವಶಕ್ಕೆ ಪಡೆದುಕೊಳ್ಳಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 16.40 ಲಕ್ಷ ನಗದು ಹಣ, ಕೃತ್ಯಕ್ಕೆ ಉಪಯೋಗಿಸಿದ್ದ 5 ಲಕ್ಷ ರೂ. ಬೆಲೆಬಾಳುವ ಸ್ಕೋಡ ಕಾರು ಹಾಗೂ ಆರೋಪಿತರು ಸೃಷ್ಟಿಸಿದ್ದ ನಕಲಿ ದಾಖಲಾತಿಗಳನ್ನು ವಶಪಡಿಸಿಕೊಳ್ಳಲಾಗಿದೆ. ವಂಚಕ ಆರೋಪಿಗಳ ಬಂಧನ ಕಾರ್ಯವನ್ನು ಚಿತ್ರದುರ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರು ಶ್ಲಾಘಿಸಿದ್ದಾರೆ.
ಆರೋಪಿಗಳು ವಂಚನೆ ಮಾಡಿದ ವಿಧಾನ
ಆರೋಪಿತರು ನಮಗೆ ವಿಧಾನಸೌಧ ಹಾಗೂ ವಿಕಾಸಸೌಧದಲ್ಲಿ ಪರಿಚಯವಿದ್ದು, ಸರ್ಕಾರದ ಮಟ್ಟದಲ್ಲಿ ಅಧಿಕಾರಿಗಳ ಪರಿಚಯವಿರುತ್ತದೆ. ಸರ್ಕಾರಿ ಕೆಲಸಗಳನ್ನು ಮಾಡಿಸಿ ಕೊಡುತ್ತೇವೆ ಎಂದು ಸರ್ಕಾರಿ ಕೆಲಸಕ್ಕಾಗಿ ಹುಡುಕಾಟ ನಡೆಸುತ್ತಿದ್ದವರನ್ನು ನಂಬಿಸಿ 2019ರ ಜನವರಿಯಲ್ಲಿ ಕೆಎಸ್ಆರ್ಟಿಸಿ ಇಲಾಖೆಯಲ್ಲಿ ಕರೆಯಲಾಗಿರುವ ಸಂಚಾರಿ ನಿರೀಕ್ಷಕರು ಹಾಗೂ ಸಹಾಯಕ ಸಂಚಾರಿ ನಿರೀಕ್ಷಕರ ಹುದ್ದೆಗಳನ್ನು ಕೊಡಿಸುವುದಾಗಿ ಆಸೆ ಹುಟ್ಟಿಸಿ, ಅಭ್ಯರ್ಥಿಗಳಿಂದ ದಾಖಲಾತಿಗಳನ್ನು ಪಡೆದು ಹಗರಿಬೊಮ್ಮನಹಳ್ಳಿ ತಾಲ್ಲೂಕು, ಮಾನ್ವಿ ಡ್ಯಾಂ ಹತ್ತಿರ ಇರುವ ಕೆಎಸ್ಆರ್ಟಿಸಿ ತರಬೇತಿ ಕೇಂದ್ರದ ಮುಂಭಾಗದಲ್ಲಿ ಹಾಗೂ ಹಗರಿಬೊಮ್ಮನಹಳ್ಳಿ ಪ್ರವಾಸಿ ಮಂದಿರದಲ್ಲಿ ಸಂದರ್ಶನ ನಡೆಸಿದ್ದಾರೆ.

ನಂತರ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೆಡಿಕಲ್ ಮಾಡಿಸಿ, ನಕಲಿ ಆದೇಶಗಳನ್ನು ನೀಡಿರುತ್ತಾರೆ. ಇದಾದ ಬಳಿಕ ಅಭ್ಯರ್ಥಿಗಳು ಕೆಲಸಕ್ಕಾಗಿ ಸೇರಲು ಸಂಬಂಧಪಟ್ಟ ಕೆಎಸ್ಆರ್ಟಿಸಿ ಡಿಪೋಗಳಿಗೆ ಹೋದಾಗ ಆರೋಪಿತರು ನಕಲಿ ಆದೇಶಗಳನ್ನು ಕೊಟ್ಟು ಮೋಸ ಮಾಡಿರುವುದು ಗೊತ್ತಾಗಿದೆ. ಆರೋಪಿತರು ಇದೇ ರೀತಿ ಸುಮಾರು 500 ಜನ ಅಭ್ಯರ್ಥಿಗಳಿಗೆ ಮೋಸ ಮಾಡಿರುವುದಾಗಿ ತಿಳಿದು ಬಂದಿದೆ.
Recommended Video
-
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ












Click it and Unblock the Notifications