ಮಾ.17ರಂದು ಹೊಳಲ್ಕೆರೆ ತಾಲ್ಲೂಕಿನ ಶ್ರೀಲಕ್ಷ್ಮಿ ನರಸಿಂಹಸ್ವಾಮಿ ಬ್ರಹ್ಮರಥೋತ್ಸವ
ಚಿತ್ರದುರ್ಗ, ಮಾರ್ಚ್ 12: ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಹೊರಕೇರಿದೇವರಪುರ ಪುಣ್ಯಕ್ಷೇತ್ರದ ಶ್ರೀ ಲಕ್ಷ್ಮಿನರಸಿಂಹಸ್ವಾಮಿ ಬ್ರಹ್ಮರಥೋತ್ಸವವು ಮಾರ್ಚ್ 17ರಂದು ಮಧ್ಯಾಹ್ನ 3.30ರಿಂದ 4.30ರವರೆಗೆ ನಡೆಯಲಿದೆ.
ಶ್ರೀಲಕ್ಷ್ಮಿನರಸಿಂಹಸ್ವಾಮಿ ಜಾತ್ರೆಯು ಈಗಾಗಲೇ ಮಾರ್ಚ್ 10ರಿಂದ ಪ್ರಾರಂಭವಾಗಿದ್ದು, ಮಾರ್ಚ್ 20ರವರೆಗೆ ನಡೆಯಲಿದೆ. ಮಾರ್ಚ್ 10ರ ಬೆಳಿಗ್ಗೆ ಅಂಕುರಾರ್ಪಣೆ, ರಾತ್ರಿ ಹರಣಿ ಕೊಡುವ ಸೇವೆ ಮಾಡಲಾಗಿದೆ. ಮಾ.11ರಂದು ಬೆಳಿಗ್ಗೆ ಧ್ವಜಾರೋಹಣ, ಪೀಠೋತ್ಸವ, ರಾತ್ರಿ ಪೀಠೋತ್ಸವ ಬೇರಿ ತಾಂಡವ ನೆರವೇರಿಸಲಾಗಿದೆ.
ಮಾ.12ರಂದು ಬೆಳಗ್ಗೆ ಪಲ್ಲಕ್ಕಿ ಉತ್ಸವ, ರಾತ್ರಿ ಸಿಂಹೋತ್ಸವ, ಮಾ.13ರಂದು ಬೆಳಿಗ್ಗೆ ಪಲ್ಲಕ್ಕಿ ಉತ್ಸವ, ಚೌಕಿ ಉತ್ಸವ, ರಾತ್ರಿ ಹನುಮಮಂತೋತ್ಸವಕ್ಕೆ ಸ್ವಾಮಿ ಆಗಮನ, ಹನುಮಂತೋತ್ಸವ, ಮಾ.14ರಂದು ಬೆಳಗ್ಗೆ ಚೌಕಿ ಉತ್ಸವ, ರಾತ್ರಿ ಹನುಮಂತೋತ್ಸವ ನಡೆಯಲಿದೆ.

ಮಾ.15ರಂದು ಬೆಳಗ್ಗೆ ಶೇಷೋತ್ಸವ, ರಾತ್ರಿ ಮೊದಲ ಮೀಸಲು ಮತ್ತು ಶೇಷೋತ್ಸವ ಮತಿಘಟ್ಟ ಗ್ರಾಮಸ್ಥರಿಂದ, ಮಾ.16ರಂದು ಬೆಳಗ್ಗೆ ಗರುಡೋತ್ಸವ, ರಾತ್ರಿ ಗರುಡೋತ್ಸವ, ರಾತ್ರಿ 10.30ಕ್ಕೆ ಕಲ್ಯಾಣೋತ್ಸವ ನಡೆಯಲಿದೆ.
ಮಾರ್ಚ್ 17ರಂದು ಬೆಳಗ್ಗೆ ಆನೆ ಉತ್ಸವ, ಮಧ್ಯಾಹ್ನ 3.30 ರಿಂದ 4.30 ಗಂಟೆಯರೆಗೆ ಸಲ್ಲುವ ವೃಶ್ಚಿಕಾ ಲಗ್ನದ ಶುಭ ಪುಬ್ಬಾ ನಕ್ಷತ್ರದ ಶುಭಾಂಶದಲ್ಲಿ ಬ್ರಹ್ಮರಥೋತ್ಸವ ನಡೆಯಲಿದೆ. ಬಳಿಕ ಪಾನಕ ಪೂಜಾ ವಸಂತೋತ್ಸವ, ಅನ್ನ ಸಂತರ್ಪಣೆ ಇರಲಿದೆ. ಮಾರ್ಚ್ 18ರಂದು ಬೆಳಿಗ್ಗೆ ಭೂತಬಲಿ ಸೇವಾ, ಧೂಳೋತ್ಸವ, ಪೀಠೋತ್ಸವ, ಬೆಳ್ಳಿ ಪಲ್ಲಕ್ಕಿ ಉತ್ಸವ ಹಾಗೂ ಚೌಕಿ ಉತ್ಸವ, ಅನ್ನಸಂತರ್ಪಣೆ, ಉಯ್ಯಾಲೋತ್ಸವ, ಚೌಕಿ ಉತ್ಸವ, ಪಲ್ಲಕ್ಕಿ ಉತ್ಸವ ಹಾಗೂ ರಾತ್ರಿ ಅಶ್ವವಾಹನೋತ್ಸವ ಪಾರ್ವಟೋತ್ಸವ ಇರಲಿದೆ.
ಮಾರ್ಚ್ 19ರಂದು ಅವಭೃಥ ಪಲ್ಲಕ್ಕಿ ಉತ್ಸವ, ಸಂತರ್ಪಣೆ, ಪೀಠೋತ್ಸವ ನಡೆಯಲಿದೆ. ಮಾರ್ಚ್ 19ರಂದು ನವಿಲೋತ್ಸವಕ್ಕೆ ಸ್ವಾಮಿಯು ಆಗಮಿಸಲಿದ್ದು, ರಾತ್ರಿ 9:30ಕ್ಕೆ ಹೂವಿನ ಪಲ್ಲಕ್ಕಿ ಮಹೋತ್ಸವ ನಡೆಯಲಿದೆ. ಮಾರ್ಚ್ 20ರಂದು ಶಯನೋತ್ಸವ, ರಥಕ್ಕೆ ಅರಿಶಿನ, ಕುಂಕುಮ ಸೇವೆ ನೇರವೇರಲಿದೆ.
ಬ್ರಹ್ಮರಥೋತ್ಸವದಲ್ಲಿ ಹೊಳಲ್ಕೆರೆ ಶಾಸಕರು ಹಾಗೂ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಎಂ. ಚಂದ್ರಪ್ಪ, ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ, ಅಪರ ಜಿಲ್ಲಾಧಿಕಾರಿ ಈ. ಬಾಲಕೃಷ್ಣ, ಉಪ ವಿಭಾಗಾಧಿಕಾರಿ ಆರ್. ಚಂದ್ರಯ್ಯ, ತಹಶೀಲ್ದಾರ್ ಎಂ. ರಮೇಶ ಚಾರಿ, ಮುಜಾರಾಯಿ ತಹಶೀಲ್ದಾರ ಬಿ.ಎಸ್. ವೆಂಕಟೇಶ್, ದೇವಸ್ಥಾನದ ಆಡಳಿತಾಧಿಕಾರಿ ಹಾಗೂ ಉಪ ತಹಶೀಲ್ದಾರ ಅಶೋಕ, ತಾಳ್ಯದ ರಾಜಸ್ವ ನಿರೀಕ್ಷಕರು ಎಂ.ಜಿ. ವೆಂಕಟೇಶ್ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications