ರಾಜಕಾರಣದಲ್ಲಿ ಯಾರೂ ಶ್ರತ್ರುಗಳಿಲ್ಲ, ಮಿತ್ರರಿಲ್ಲ: ಸಚಿವ ಡಿ.ಸುಧಾಕರ್ ಹೀಗೆ ಹೇಳಿದ್ದೇಕೆ?
ಹಿರಿಯೂರು, ಮಾರ್ಚ್, 18: ರಾಜಕಾರಣದಲ್ಲಿ ಯಾರು ಶತ್ರುಗಳಲ್ಲ, ಮಿತ್ರರಲ್ಲ. ಮುಂಬರುವ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಅವರನ್ನು ಗೆಲ್ಲಿಸಲು ಹೃದಯ ಪೂರ್ವಕವಾಗಿ ಕೆಲಸ ಮಾಡುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.
ನಗರದ ನೆಹರೂ ಮೈದಾನದ ಎ.ಕೃಷ್ಣಪ್ಪ ರೋಟರಿ ಸಭಾಂಗಣದಲ್ಲಿ ಸೋಮವಾರ ತಾಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ಆಯೋಜಿಸಿದ್ದ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಚುನಾವಣಾ ಪೂರ್ವಭಾವಿ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ನನಗೂ ಚಿರಪರಿತರಾಗಿದ್ದ ಎ.ಕೃಷ್ಣಪ್ಪ ಅವರು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು. ಅಭಿವೃದಿ ಪರ ಕೆಲಸ ಮಾಡಿದ ವ್ಯಕ್ತಿ. ಆ ಹಿನ್ನೆಲೆ ಅವರ ಪುತ್ರಿ ಕೆ.ಪೂರ್ಣಿಮಾ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ. ಕೃಷ್ಣಪ್ಪ ಅವರಿಗೆ ನಾನೇ ಟಿಕೆಟ್ ತಪ್ಪಿಸಿ ತಪ್ಪು ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಅವರೇ ಹೇಳಿದ್ದರು.
ಈಗ ನಾವೆಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಪಕ್ಷಕ್ಕಾಗಿ ದುಡಿಯೋಣ. ಅಹಂಕಾರ, ಹಣ ಯಾವುದು ಶಾಶ್ವತವಲ್ಲ. ಎಲ್ಲಾ ವರ್ಗದ ಜನರಿಗೂ ಸಾಮಾಜಿಕ ನ್ಯಾಯ ಕಲ್ಪಿಸುವ ಪಕ್ಷ ಕಾಂಗ್ರೆಸ್. ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಭರದಿಂದ ಆರಂಭ ಆಗಿದೆ. ತಾಲೂಕಿನಲ್ಲಿ ಅಭಿವೃದ್ಧಿಗಾಗಿ ಒಂದಾಗಿ ಹೋಗೋಣ ಎಂದರು.
ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಮಾತನಾಡಿ, ಕಳೆದ 5 ವರ್ಷ ಬಿಜೆಪಿ ಶಾಸಕಿಯಾಗಿ ಸೇವೆ ಸಲ್ಲಿಸಿದ್ದೇನೆ. ನಾನು ಬೇರೆ ಪಕ್ಷದಿಂದ ಮರಳಿ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದೇನೆ. ಆದ್ದರಿಂದ ಎರಡು ಪಕ್ಷದಲ್ಲಿದ್ದ ಕಾರ್ಯಕರ್ತರು ವಾದ-ವಿವಾದ, ಪಕ್ಷ ಸಮರ್ಥನೆ ಇನ್ನೀತರ ಕಾರಣಗಳಿಂದ ಭಿನ್ನಾಭಿಪ್ರಾಯ ತೋರದೆ ಏನೇ ವೈಮನಸ್ಸು ಇದ್ದರೂ ಎಲ್ಲಾವನ್ನು ಬದಿಗೊತ್ತಿ ನಾವೆಲ್ಲರೂ ಒಂದಾಗಬೇಕು. ಕಾಂಗ್ರೆಸ್ ವಿಶ್ವಾಸ, ನಂಬಿಕೆ ಇಟ್ಟುಕೊಂಡಿರುವ ಪಕ್ಷ ಎಂದರು. ಜಿಲ್ಲೆಯಲ್ಲಿ ಐದು ಜನರು ಕಾಂಗ್ರೆಸ್ ಪಕ್ಷದ
ಶಾಸಕರಿದ್ದಾರೆಂದು ಸುಮ್ಮನೆ ಕೂರದೇ ಕಾರ್ಯಕರ್ತರು ಮನೆ-ಮನೆಗೂ ತೆರಳಿ ಗ್ಯಾರಂಟಿ ಯೋಜನೆ ತಲುಪಿಸಿರುವ ಬಗ್ಗೆ ನೆನೆಸಿದರೆ ಲೋಕಸಭೆ ಹಾಗೂ ಆಗ್ನೇಯ ಶಿಕ್ಷಕರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧ್ಯ. ಅಭ್ಯರ್ಥಿ ಯಾರೇ ಆಗಲಿ ನಾವೆಲ್ಲಾ ಕಾಂಗ್ರೆಸ್ ಗೆಲುವಿಗೆ ಹೋರಾಡಬೇಕು. ಪಕ್ಷ ತಾಯಿ ಸಮಾನ, ಪಕ್ಷಕ್ಕೆ ಮೋಸ ಮಾಡಿದರೆ, ತಾಯಿಗೆ ಮೋಸ ಮಾಡಿದಂತೆ ಎಂದರು.
ಆಗ್ನೇಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಮಾತನಾಡಿ, ಈ ಭಾಗದಲ್ಲಿ ಇಲ್ಲಿಯವರೆಗೂ ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್ ಗೆಲುವು ಸಾಧಿಸಿಲ್ಲ. ಆದ್ದರಿಂದ ಎಲ್ಲಾ ಕಾರ್ಯಕರ್ತರು ಕಾಂಗ್ರೆಸ್ ಗೆಲ್ಲಿಸಲು ಹಗಲಿರುಳೆನ್ನದೇ ಕಂಕಣ ಬದ್ಧರಾಗಿ ಕೆಲಸ ಮಾಡಬೇಕು. ಯುವಕರು ಅಂಧರು. ಅವರಿಗೆ ವಾಸ್ತು ಕಟುಸತ್ಯದ ಮೂಲಕ ಪಕ್ಷಕ್ಕೆ ಕರೆತರಬೇಕು ಎಂದರು.
ಲೋಕಸಭಾ ಚುನಾವಣೆಯಲ್ಲಿ ಸಿಎಂ ಮತ್ತು ಡಿಸಿಎಂ ಇಟ್ಟಿರುವ 20ಕ್ಷೇತ್ರಗಳ ಟಾರ್ಗೆಟ್ನಲ್ಲಿ ಚಿತ್ರದುರ್ಗ ಮೊದಲ ಸ್ಥಾನವಾಗಬೇಕು ಎಂದರು. ಈ ದೇಶದ ಅಭಿವೃದ್ದಿಗೆ ಶಿಕ್ಷಕರ ಕೊಡುಗೆ ಅಪಾರ. ಈಗಾಗಲೇ ಸಿಎಂ ಅವರು ಏಳನೇ ಆಯೋಗದ ವರದಿಯನ್ನು ಸ್ವೀಕರಿಸಿದ್ದಾರೆ. ಮುಂದಿನ ದಿನಗಳಲ್ಲಿ ವರದಿ ಅನುಷ್ಠಾನಕ್ಕೆ ಬರುವುದು ಹಾಗೂ ಓಪಿಎಸ್ ಜಾರಿಗೆ ತರುವುದು ನೂರಕ್ಕೆ ನೂರರಷ್ಟು ಸತ್ಯ. ಕರೊನಾ ವೇಳೆ ಖಾಸಗಿ ಶಿಕ್ಷಕರ ಸಮಸ್ಯೆ ನೋಡಿದ್ದೇವೆ. ಅನುದಾನಿತ ಶಿಕ್ಷಣ ಸಂಸ್ಥೆಗಳನ್ನು ಉಳಿಸುವ ಕೆಲಸ ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿರಮೇಶ್, ಈರಲಿಂಗೇಗೌಡ, ಕೆಪಿಸಿಸಿ ಸದಸ್ಯ ಅಮೃತೇಶ್ವರಸ್ವಾಮಿ, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಆರ್.ನಾಗೇಂದ್ರನಾಯ್ಕ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಗೀತಾನಂದಿನಿಗೌಡ, ಪ್ರಚಾರ ಸಮಿತಿ ಅಧ್ಯಕ್ಷ ಕೃಷ್ಣಮೂರ್ತಿ, ನಗರಸಭೆ ಸದಸ್ಯೆ ಮೊದಲ ಮೇರಿಯಾ, ಯುವ ಮುಖಂಡ ಡಾ.ಬ್ರಿಜೇಶ್, ಡಾ.ಸುಜಾತ, ಜಿ.ಎಲ್.ಮೂರ್ತಿ, ಕಾಂತರಾಜ್, ಗುರುಪ್ರಸಾದ್, ವೈ.ನಾಗರಾಜ್, ಚಂದ್ರನಾಯ್ಕ್, ತಿಮ್ಮಣ್ಣ, ಶ್ರೀನಿವಾಸ್, ರಜಿಯಾ ಸುಲ್ತಾನ್, ಜ್ಞಾನೇಶ್, ಶಿವಕುಮಾರ್ ಸೇರಿದಂತೆ ಮತ್ತಿತರರಿದ್ದರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications