ರಾಜಕಾರಣದಲ್ಲಿ ಯಾರೂ ಶ್ರತ್ರುಗಳಿಲ್ಲ, ಮಿತ್ರರಿಲ್ಲ: ಸಚಿವ ಡಿ.ಸುಧಾಕರ್ ಹೀಗೆ ಹೇಳಿದ್ದೇಕೆ?
ಹಿರಿಯೂರು, ಮಾರ್ಚ್, 18: ರಾಜಕಾರಣದಲ್ಲಿ ಯಾರು ಶತ್ರುಗಳಲ್ಲ, ಮಿತ್ರರಲ್ಲ. ಮುಂಬರುವ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಅವರನ್ನು ಗೆಲ್ಲಿಸಲು ಹೃದಯ ಪೂರ್ವಕವಾಗಿ ಕೆಲಸ ಮಾಡುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.
ನಗರದ ನೆಹರೂ ಮೈದಾನದ ಎ.ಕೃಷ್ಣಪ್ಪ ರೋಟರಿ ಸಭಾಂಗಣದಲ್ಲಿ ಸೋಮವಾರ ತಾಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ಆಯೋಜಿಸಿದ್ದ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಚುನಾವಣಾ ಪೂರ್ವಭಾವಿ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ನನಗೂ ಚಿರಪರಿತರಾಗಿದ್ದ ಎ.ಕೃಷ್ಣಪ್ಪ ಅವರು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು. ಅಭಿವೃದಿ ಪರ ಕೆಲಸ ಮಾಡಿದ ವ್ಯಕ್ತಿ. ಆ ಹಿನ್ನೆಲೆ ಅವರ ಪುತ್ರಿ ಕೆ.ಪೂರ್ಣಿಮಾ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ. ಕೃಷ್ಣಪ್ಪ ಅವರಿಗೆ ನಾನೇ ಟಿಕೆಟ್ ತಪ್ಪಿಸಿ ತಪ್ಪು ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಅವರೇ ಹೇಳಿದ್ದರು.
ಈಗ ನಾವೆಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಪಕ್ಷಕ್ಕಾಗಿ ದುಡಿಯೋಣ. ಅಹಂಕಾರ, ಹಣ ಯಾವುದು ಶಾಶ್ವತವಲ್ಲ. ಎಲ್ಲಾ ವರ್ಗದ ಜನರಿಗೂ ಸಾಮಾಜಿಕ ನ್ಯಾಯ ಕಲ್ಪಿಸುವ ಪಕ್ಷ ಕಾಂಗ್ರೆಸ್. ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಭರದಿಂದ ಆರಂಭ ಆಗಿದೆ. ತಾಲೂಕಿನಲ್ಲಿ ಅಭಿವೃದ್ಧಿಗಾಗಿ ಒಂದಾಗಿ ಹೋಗೋಣ ಎಂದರು.
ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಮಾತನಾಡಿ, ಕಳೆದ 5 ವರ್ಷ ಬಿಜೆಪಿ ಶಾಸಕಿಯಾಗಿ ಸೇವೆ ಸಲ್ಲಿಸಿದ್ದೇನೆ. ನಾನು ಬೇರೆ ಪಕ್ಷದಿಂದ ಮರಳಿ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದೇನೆ. ಆದ್ದರಿಂದ ಎರಡು ಪಕ್ಷದಲ್ಲಿದ್ದ ಕಾರ್ಯಕರ್ತರು ವಾದ-ವಿವಾದ, ಪಕ್ಷ ಸಮರ್ಥನೆ ಇನ್ನೀತರ ಕಾರಣಗಳಿಂದ ಭಿನ್ನಾಭಿಪ್ರಾಯ ತೋರದೆ ಏನೇ ವೈಮನಸ್ಸು ಇದ್ದರೂ ಎಲ್ಲಾವನ್ನು ಬದಿಗೊತ್ತಿ ನಾವೆಲ್ಲರೂ ಒಂದಾಗಬೇಕು. ಕಾಂಗ್ರೆಸ್ ವಿಶ್ವಾಸ, ನಂಬಿಕೆ ಇಟ್ಟುಕೊಂಡಿರುವ ಪಕ್ಷ ಎಂದರು. ಜಿಲ್ಲೆಯಲ್ಲಿ ಐದು ಜನರು ಕಾಂಗ್ರೆಸ್ ಪಕ್ಷದ
ಶಾಸಕರಿದ್ದಾರೆಂದು ಸುಮ್ಮನೆ ಕೂರದೇ ಕಾರ್ಯಕರ್ತರು ಮನೆ-ಮನೆಗೂ ತೆರಳಿ ಗ್ಯಾರಂಟಿ ಯೋಜನೆ ತಲುಪಿಸಿರುವ ಬಗ್ಗೆ ನೆನೆಸಿದರೆ ಲೋಕಸಭೆ ಹಾಗೂ ಆಗ್ನೇಯ ಶಿಕ್ಷಕರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧ್ಯ. ಅಭ್ಯರ್ಥಿ ಯಾರೇ ಆಗಲಿ ನಾವೆಲ್ಲಾ ಕಾಂಗ್ರೆಸ್ ಗೆಲುವಿಗೆ ಹೋರಾಡಬೇಕು. ಪಕ್ಷ ತಾಯಿ ಸಮಾನ, ಪಕ್ಷಕ್ಕೆ ಮೋಸ ಮಾಡಿದರೆ, ತಾಯಿಗೆ ಮೋಸ ಮಾಡಿದಂತೆ ಎಂದರು.
ಆಗ್ನೇಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಮಾತನಾಡಿ, ಈ ಭಾಗದಲ್ಲಿ ಇಲ್ಲಿಯವರೆಗೂ ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್ ಗೆಲುವು ಸಾಧಿಸಿಲ್ಲ. ಆದ್ದರಿಂದ ಎಲ್ಲಾ ಕಾರ್ಯಕರ್ತರು ಕಾಂಗ್ರೆಸ್ ಗೆಲ್ಲಿಸಲು ಹಗಲಿರುಳೆನ್ನದೇ ಕಂಕಣ ಬದ್ಧರಾಗಿ ಕೆಲಸ ಮಾಡಬೇಕು. ಯುವಕರು ಅಂಧರು. ಅವರಿಗೆ ವಾಸ್ತು ಕಟುಸತ್ಯದ ಮೂಲಕ ಪಕ್ಷಕ್ಕೆ ಕರೆತರಬೇಕು ಎಂದರು.
ಲೋಕಸಭಾ ಚುನಾವಣೆಯಲ್ಲಿ ಸಿಎಂ ಮತ್ತು ಡಿಸಿಎಂ ಇಟ್ಟಿರುವ 20ಕ್ಷೇತ್ರಗಳ ಟಾರ್ಗೆಟ್ನಲ್ಲಿ ಚಿತ್ರದುರ್ಗ ಮೊದಲ ಸ್ಥಾನವಾಗಬೇಕು ಎಂದರು. ಈ ದೇಶದ ಅಭಿವೃದ್ದಿಗೆ ಶಿಕ್ಷಕರ ಕೊಡುಗೆ ಅಪಾರ. ಈಗಾಗಲೇ ಸಿಎಂ ಅವರು ಏಳನೇ ಆಯೋಗದ ವರದಿಯನ್ನು ಸ್ವೀಕರಿಸಿದ್ದಾರೆ. ಮುಂದಿನ ದಿನಗಳಲ್ಲಿ ವರದಿ ಅನುಷ್ಠಾನಕ್ಕೆ ಬರುವುದು ಹಾಗೂ ಓಪಿಎಸ್ ಜಾರಿಗೆ ತರುವುದು ನೂರಕ್ಕೆ ನೂರರಷ್ಟು ಸತ್ಯ. ಕರೊನಾ ವೇಳೆ ಖಾಸಗಿ ಶಿಕ್ಷಕರ ಸಮಸ್ಯೆ ನೋಡಿದ್ದೇವೆ. ಅನುದಾನಿತ ಶಿಕ್ಷಣ ಸಂಸ್ಥೆಗಳನ್ನು ಉಳಿಸುವ ಕೆಲಸ ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿರಮೇಶ್, ಈರಲಿಂಗೇಗೌಡ, ಕೆಪಿಸಿಸಿ ಸದಸ್ಯ ಅಮೃತೇಶ್ವರಸ್ವಾಮಿ, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಆರ್.ನಾಗೇಂದ್ರನಾಯ್ಕ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಗೀತಾನಂದಿನಿಗೌಡ, ಪ್ರಚಾರ ಸಮಿತಿ ಅಧ್ಯಕ್ಷ ಕೃಷ್ಣಮೂರ್ತಿ, ನಗರಸಭೆ ಸದಸ್ಯೆ ಮೊದಲ ಮೇರಿಯಾ, ಯುವ ಮುಖಂಡ ಡಾ.ಬ್ರಿಜೇಶ್, ಡಾ.ಸುಜಾತ, ಜಿ.ಎಲ್.ಮೂರ್ತಿ, ಕಾಂತರಾಜ್, ಗುರುಪ್ರಸಾದ್, ವೈ.ನಾಗರಾಜ್, ಚಂದ್ರನಾಯ್ಕ್, ತಿಮ್ಮಣ್ಣ, ಶ್ರೀನಿವಾಸ್, ರಜಿಯಾ ಸುಲ್ತಾನ್, ಜ್ಞಾನೇಶ್, ಶಿವಕುಮಾರ್ ಸೇರಿದಂತೆ ಮತ್ತಿತರರಿದ್ದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications