ಲಾಕ್ ಡೌನ್: ಮಧ್ಯಪ್ರದೇಶದಲ್ಲಿ ಸಿಲುಕಿಕೊಂಡ ಚಿತ್ರದುರ್ಗ ವಿದ್ಯಾರ್ಥಿಗಳು
ಚಿತ್ರದುರ್ಗ, ಎಪ್ರಿಲ್ 14: ಕೊರೊನಾ ವೈರಸ್ ನಿಂದಾಗಿ ದೇಶಾದ್ಯಂತ ಲಾಕ್ ಡೌನ್ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ಸಾರಿಗೆ ಸೌಲಭ್ಯ ಬಂದ್ ಆಗಿದೆ. ಇದೇ ಸಂದರ್ಭದಲ್ಲಿ ಮಕ್ಕಳು ಮಧ್ಯಪ್ರದೇಶದಲ್ಲಿದ್ದರೆ, ಪಾಲಕರು ಚಿತ್ರದುರ್ಗದಲ್ಲಿದ್ದಾರೆ.
ಕೊರೊನಾ ವೈರಸ್ ಹರುಡುವಿಕೆಯನ್ನು ತಡೆಗಟ್ಟಲು ಲಾಕ್ ಡೌನ್ ಮಾಡಿದ ಹಿನ್ನೆಲೆಯಲ್ಲಿ ಮಕ್ಕಳು ಮಧ್ಯಪ್ರದೇಶದಲ್ಲೇ ಲಾಕ್ ಆಗಿದ್ದಾರೆ. ಮಧ್ಯಪ್ರದೇಶದ ಇಂದೋರ್ ಸಮೀಪದ ದೇವಾಸ್ ನಗರದಲ್ಲಿ ಚಿತ್ರದುರ್ಗ ಮೂಲದ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ.
ಚಿತ್ರದುರ್ಗ ಜಿಲ್ಲೆಯ 23 ಮಕ್ಕಳು ದೇವಾಸ್ ನವೋದಯ ವಿದ್ಯಾಲಯದಲ್ಲಿ 9 ನೇ ತರಗತಿ ಓದುತ್ತಿದ್ದಾರೆ. ಪಾಲಕರನ್ನು ನೆನೆದು ಮಕ್ಕಳು ಕಣ್ಣೀರಿಡುತ್ತಿರುವ ದೃಶ್ಯ ಕಂಡುಬಂದಿದೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಉಡುವಳ್ಳಿ ನವೋದಯ ವಿದ್ಯಾಲಯದ ವಿದ್ಯಾರ್ಥಿಗಳು ದೇವಾಸ್ ಶಾಲೆಗೆ ವರ್ಗಾವಣೆ ಆಗಿದ್ದರು. 1 ವರ್ಷದ ಮೈಗ್ರೇಷನ್ ಕೋರ್ಸ್ ಗಾಗಿ ದೇವಾಸ್ ನವೋದಯ ವಿದ್ಯಾಲಯಕ್ಕೆ ವರ್ಗಾವಣೆ ಆಗಿದ್ದರು.
ಉಡುವಳ್ಳಿ ನವೋದಯ ಶಾಲೆಯ 9 ನೇ ತರಗತಿಯ 23 ವಿದ್ಯಾರ್ಥಿಗಳು ದೇವಾಸ್ ಗೆ ವರ್ಗಾವಣೆಯಾಗಿದ್ದರು. 23 ವಿದ್ಯಾರ್ಥಿಗಳ ಪೈಕಿ 11 ವಿದ್ಯಾರ್ಥಿನಿಯರು, 12 ವಿದ್ಯಾರ್ಥಿಗಳನ್ನು ವರ್ಗಾವಣೆ ಮಾಡಲಾಗಿತ್ತು.

ಮಧ್ಯಪ್ರದೇಶದ ದೇವಾಸ್ ಸಮೀಪದಲ್ಲಿ ಕೊರೊನಾ ವೈರಸ್ ಹೆಚ್ಚಾಗಿದ್ದು, ಮಕ್ಕಳು ಜೀವ ಕೈಯಲ್ಲಿಡಿದು ಬದುಕುತ್ತಿದ್ದಾರೆ. ನಮ್ಮನ್ನು ವಾಪಸ್ ಊರಿಗೆ ಕರೆಸಿಕೊಳ್ಳಿ ಎಂದು ಮಕ್ಕಳು ಅಂಗಲಾಚುತ್ತಿದ್ದಾರೆ.
ಮಕ್ಕಳ ಈ ಗೋಳಾಟ ನೋಡಿ ಪ್ರಧಾನಮಂತ್ರಿಗೆ ಪಾಲಕರು ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ. ಸ್ಯಾನಿಟೈಸರ್ ಬಸ್ ಮೂಲಕ ಮಕ್ಕಳನ್ನು ಕರ್ನಾಟಕಕ್ಕೆ ಕಳುಹಿಸಲು ಕ್ರಮ ಕೈಗೊಳ್ಳಬೇಕು ಮತ್ತು ರಾಜ್ಯ ಸರ್ಕಾರ ಕೂಡಲೇ ಮಧ್ಯ ಪ್ರವೇಶ ಮಾಡಿ ಮಕ್ಕಳನ್ನು ಕರೆತರಬೇಕು ಎಂದು ಪತ್ರದ ಮೂಲಕ ಮನವಿ ಮಾಡಿದ್ದಾರೆ.
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications