ಚಿತ್ರದುರ್ಗದಲ್ಲೂ ಕಂಡುಬಂದ ಮಿಡತೆಗಳು; ರೈತರಲ್ಲಿ ಆತಂಕ
ಚಿತ್ರದುರ್ಗ, ಮೇ 30: ರೈತರು ಬೆಳೆದ ಬೆಳೆಯನ್ನು ಸಂಪೂರ್ಣವಾಗಿ ನಾಶ ಮಾಡಿ ರೈತರನ್ನು ಸಂಕಷ್ಟಕ್ಕೆ ದೂಡಿರುವ ಮರುಭೂಮಿ ಮಿಡತೆಗಳು ಈಗ ಚಿತ್ರದುರ್ಗ ಜಿಲ್ಲೆಯಲ್ಲೂ ಕಂಡುಬರುತ್ತಿವೆ.
ದೇಶದ ಕೃಷಿ ವಲಯದಲ್ಲಿ ಆತಂಕ ತಂದಿರುವ ಈ ಮರುಭೂಮಿ ಮಿಡತೆಗಳು ಕೋಟೆ ನಾಡು ಚಿತ್ರದುರ್ಗಕ್ಕೂ ಲಗ್ಗೆ ಇಟ್ಟಿರುವುದು ಇಲ್ಲಿನ ರೈತರಲ್ಲೂ ಭಯದ ವಾತಾವರಣ ಮೂಡಿಸಿವೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ಹರಿಶ್ಚಂದ್ರ ಘಾಟ್ ಬಳಿ ಹಸಿರು ಎಕ್ಕೆ ಗಿಡಗಳಲ್ಲಿ ಬಣ್ಣ ಬಣ್ಣದ ಮಿಡತೆಗಳು ಎಲೆಗಳನ್ನು ತಿನ್ನುವ ದೃಶ್ಯ ಕಂಡುಬಂದಿದೆ.
ಈಗಾಗಲೇ ರಾಜಸ್ಥಾನ, ಗುಜರಾತ್, ಉತ್ತರ ಪ್ರದೇಶ, ಮಹಾರಾಷ್ಟ್ರ ಸೇರಿದಂತೆ ಮತ್ತಿತರ ರಾಜ್ಯಗಳಲ್ಲಿ ಮಿಡತೆಗಳು ದಾಳಿ ನಡೆಸಿ ಬೆಳೆ ನಾಶಕ್ಕೆ ಕಾರಣವಾಗಿವೆ. ನಿನ್ನೆಯಷ್ಟೇ ರಾಜ್ಯದ ಕೋಲಾರದಲ್ಲೂ ಮಿಡತೆಗಳು ಕಂಡುಬಂದಿವೆ. ಈ ನಡುವೆ ಮಿಡತೆ ದಂಡು ಬೀದರ್ ಜಿಲ್ಲೆಗೂ ಲಗ್ಗೆಯಿಡುವ ಸಾಧ್ಯತೆ ಇದೆ ಎಂದು ಬೀದರ್ ಜಿಲ್ಲಾಧಿಕಾರಿ ಎಚ್.ಆರ್ ಮಹದೇವ್ ಮಾಹಿತಿ ನೀಡಿರುವುದು ಸಹಜವಾಗಿಯೇ ಆತಂಕ ಮೂಡಿಸಿದೆ.

ಈ ನಡುವೆ ಜಿಲ್ಲೆಯಲ್ಲಿ ಮಿಡತೆಗಳು ಕಾಣಿಸಿಕೊಂಡಿವೆ. ಈಗಾಗಲೇ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದು, ರೈತರು ಕೃಷಿ ಚಟುವಟಿಕೆ ನಡೆಸಲು ಸಿದ್ಧವಾಗಿದ್ದಾರೆ. ಆದರೆ ಈ ಹೊತ್ತಿನಲ್ಲಿ ಇವು ಕಾಣಿಸಿಕೊಂಡಿರುವುದು ರೈತರಿಗೆ ಗೊಂದಲ ಮೂಡಿಸಿವೆ.
ಈ ಕುರಿತು ಮಾತನಾಡಿದ ರೈತ ಸಂಘದ ಅಧ್ಯಕ್ಷ ಕೆ.ಟಿ. ತಿಪ್ಪೇಸ್ವಾಮಿ, "ನಮ್ಮ ಜಿಲ್ಲೆಯಲ್ಲಿ ಇದುವರೆಗೂ ಮಿಡತೆಗಳು ಕಂಡುಬಂದಿಲ್ಲ. ಈಗ ಸ್ವಲ್ಪ ಮಳೆಯಾಗಿರುವುದರಿಂದ ಹೊಲದಲ್ಲಿ ಮೊಳಕೆ ಚಿಗುರೊಡೆದಾಗ ಅದನ್ನು ತಿನ್ನಲು ಮಿಡತೆಗಳು ಬರುವುದು ಸಾಮಾನ್ಯ. ಇದನ್ನು ಹಾವಳಿ ಎನ್ನುವಂತಿಲ್ಲ, ಇವು ವಿದೇಶಿ ಮಿಡತೆಗಳಲ್ಲ" ಎಂದಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications