ಚಿತ್ರದುರ್ಗದಲ್ಲೂ ಕಂಡುಬಂದ ಮಿಡತೆಗಳು; ರೈತರಲ್ಲಿ ಆತಂಕ
ಚಿತ್ರದುರ್ಗ, ಮೇ 30: ರೈತರು ಬೆಳೆದ ಬೆಳೆಯನ್ನು ಸಂಪೂರ್ಣವಾಗಿ ನಾಶ ಮಾಡಿ ರೈತರನ್ನು ಸಂಕಷ್ಟಕ್ಕೆ ದೂಡಿರುವ ಮರುಭೂಮಿ ಮಿಡತೆಗಳು ಈಗ ಚಿತ್ರದುರ್ಗ ಜಿಲ್ಲೆಯಲ್ಲೂ ಕಂಡುಬರುತ್ತಿವೆ.
ದೇಶದ ಕೃಷಿ ವಲಯದಲ್ಲಿ ಆತಂಕ ತಂದಿರುವ ಈ ಮರುಭೂಮಿ ಮಿಡತೆಗಳು ಕೋಟೆ ನಾಡು ಚಿತ್ರದುರ್ಗಕ್ಕೂ ಲಗ್ಗೆ ಇಟ್ಟಿರುವುದು ಇಲ್ಲಿನ ರೈತರಲ್ಲೂ ಭಯದ ವಾತಾವರಣ ಮೂಡಿಸಿವೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ಹರಿಶ್ಚಂದ್ರ ಘಾಟ್ ಬಳಿ ಹಸಿರು ಎಕ್ಕೆ ಗಿಡಗಳಲ್ಲಿ ಬಣ್ಣ ಬಣ್ಣದ ಮಿಡತೆಗಳು ಎಲೆಗಳನ್ನು ತಿನ್ನುವ ದೃಶ್ಯ ಕಂಡುಬಂದಿದೆ.
ಈಗಾಗಲೇ ರಾಜಸ್ಥಾನ, ಗುಜರಾತ್, ಉತ್ತರ ಪ್ರದೇಶ, ಮಹಾರಾಷ್ಟ್ರ ಸೇರಿದಂತೆ ಮತ್ತಿತರ ರಾಜ್ಯಗಳಲ್ಲಿ ಮಿಡತೆಗಳು ದಾಳಿ ನಡೆಸಿ ಬೆಳೆ ನಾಶಕ್ಕೆ ಕಾರಣವಾಗಿವೆ. ನಿನ್ನೆಯಷ್ಟೇ ರಾಜ್ಯದ ಕೋಲಾರದಲ್ಲೂ ಮಿಡತೆಗಳು ಕಂಡುಬಂದಿವೆ. ಈ ನಡುವೆ ಮಿಡತೆ ದಂಡು ಬೀದರ್ ಜಿಲ್ಲೆಗೂ ಲಗ್ಗೆಯಿಡುವ ಸಾಧ್ಯತೆ ಇದೆ ಎಂದು ಬೀದರ್ ಜಿಲ್ಲಾಧಿಕಾರಿ ಎಚ್.ಆರ್ ಮಹದೇವ್ ಮಾಹಿತಿ ನೀಡಿರುವುದು ಸಹಜವಾಗಿಯೇ ಆತಂಕ ಮೂಡಿಸಿದೆ.

ಈ ನಡುವೆ ಜಿಲ್ಲೆಯಲ್ಲಿ ಮಿಡತೆಗಳು ಕಾಣಿಸಿಕೊಂಡಿವೆ. ಈಗಾಗಲೇ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದು, ರೈತರು ಕೃಷಿ ಚಟುವಟಿಕೆ ನಡೆಸಲು ಸಿದ್ಧವಾಗಿದ್ದಾರೆ. ಆದರೆ ಈ ಹೊತ್ತಿನಲ್ಲಿ ಇವು ಕಾಣಿಸಿಕೊಂಡಿರುವುದು ರೈತರಿಗೆ ಗೊಂದಲ ಮೂಡಿಸಿವೆ.
ಈ ಕುರಿತು ಮಾತನಾಡಿದ ರೈತ ಸಂಘದ ಅಧ್ಯಕ್ಷ ಕೆ.ಟಿ. ತಿಪ್ಪೇಸ್ವಾಮಿ, "ನಮ್ಮ ಜಿಲ್ಲೆಯಲ್ಲಿ ಇದುವರೆಗೂ ಮಿಡತೆಗಳು ಕಂಡುಬಂದಿಲ್ಲ. ಈಗ ಸ್ವಲ್ಪ ಮಳೆಯಾಗಿರುವುದರಿಂದ ಹೊಲದಲ್ಲಿ ಮೊಳಕೆ ಚಿಗುರೊಡೆದಾಗ ಅದನ್ನು ತಿನ್ನಲು ಮಿಡತೆಗಳು ಬರುವುದು ಸಾಮಾನ್ಯ. ಇದನ್ನು ಹಾವಳಿ ಎನ್ನುವಂತಿಲ್ಲ, ಇವು ವಿದೇಶಿ ಮಿಡತೆಗಳಲ್ಲ" ಎಂದಿದ್ದಾರೆ.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ










Click it and Unblock the Notifications