Lok Sabha Election 2024: ಚಿತ್ರದುರ್ಗದಲ್ಲಿ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಜಿಲ್ಲಾಧಿಕಾರಿ ಸೂಚನೆ
ಚಿತ್ರದುರ್ಗ, ಮಾರ್ಚ್, 17: ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆ 2ನೇ ಹಂತದಲ್ಲಿ ನಡೆಯಲಿದೆ. ತಕ್ಷಣದಿಂದಲೇ ಮಾದರಿ ಚುನಾವಣೆ ನೀತಿ ಸಂಹಿತೆ ಜಾರಿಗೊಳಿಸಲಾಗಿದೆ. ಚುನಾವಣೆಗೆ ಜಿಲ್ಲೆಯಲ್ಲಿ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಸಲು, ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಬಿಗಿ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಘೋಷಣೆ ಹಾಗೂ ಮಾದರಿ ನೀತಿ ಸಂಹಿತೆ ಜಾರಿ ಕುರಿತು ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಭಾರತ ಚುನಾವಣಾ ಆಯೋಗ ಲೋಕಸಭಾ ಚುನಾವಣೆಗೆ ವೇಳಾಪಟ್ಟಿ ಬಿಡುಗಡೆ ಮಾಡಿದೆ.

ಇದರಂತೆಯೇ ಇದೇ ಮಾರ್ಚ್ 28 ಗುರುವಾರದಂದು ಅಧಿಸೂಚನೆ ಹೊರಡಿಸಲಾಗುವುದು. ಏಪ್ರಿಲ್ 04ರಂದು ಗುರುವಾರ ನಾಮಪತ್ರ ಸಲ್ಲಿಸಲು ಕಡೆಯ ದಿನವಾಗಿದೆ. ಏಪ್ರಿಲ್ 05ರಂದು ಶುಕ್ರವಾರ ನಾಮಪತ್ರ ಪರಿಶೀಲನೆ ನಡೆಸಲಾಗುವುದು. ಏಪ್ರಿಲ್ 8ರಂದು ಸೋಮವಾರ ನಾಮಪತ್ರ ಹಿಂಪಡೆಯುಲು ಕೊನೆಯ ದಿನ. ಏಪ್ರಿಲ್ 26ರಂದು ಶುಕ್ರವಾರ ಮತದಾನ ನಡೆಯಲಿದೆ. ಜೂನ್ 4ರಂದು ಮಂಗಳವಾರ ಮತಗಳ ಎಣಿಕೆ ನಡೆಯಲಿದೆ. ಜೂನ್ 6ರಂದು ಗುರುವಾರ ಚುನಾವಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದರು.
ಚಿತ್ರದುರ್ಗ (ಪರಿಶಿಷ್ಟ ಜಾತಿ) ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜಿಲ್ಲೆಯ ಮೊಳಕಾಲ್ಮುರು, ಚಳ್ಳಕೆರೆ, ಚಿತ್ರದುರ್ಗ, ಹಿರಿಯೂರು, ಹೊಸದುರ್ಗ, ಹೊಳಲ್ಕೆರೆ ಹಾಗೂ ತುಮಕೂರು ಜಿಲ್ಲೆಯ ಸಿರಾ ಮತ್ತು ಪಾವಗಡ ಸೇರಿದಂತೆ ಒಟ್ಟು 8 ವಿಧಾನಸಭಾ ಕ್ಷೇತ್ರಗಳು ಇರುತ್ತವೆ ಎಂದರು.
ಮತದಾರರು ಎಷ್ಟು ಮಂದಿ ಇದ್ದಾರೆ?: ಜಿಲ್ಲೆಯಲ್ಲಿ 6 ವಿಧಾನಸಭಾ ಕ್ಷೇತ್ರಗಳಿಂದ ಜಿಲ್ಲೆಯಲ್ಲಿ ಒಟ್ಟು 14,18,211 ಮತದಾರರು ಇದ್ದಾರೆ. ಇದರಲ್ಲಿ 7,04,896 ಪುರುಷ ಮತದಾರರು, 7,13,228 ಮಹಿಳಾ ಮತದಾರರು ಹಾಗೂ 87 ಮಂದಿ ಇತರೆ ಮತದಾರರಿದ್ದಾರೆ. ತುಮಕೂರು ಜಿಲ್ಲೆಯ ಸಿರಾ ವಿಧಾನ ಕ್ಷೇತ್ರದಲ್ಲಿ 1,13,788 ಪುರುಷರು ಹಾಗೂ 1,12,898 ಮಹಿಳಾ ಮತದಾರರು ಹಾಗೂ 8 ಇತರೆ ಮತದಾರರು ಸೇರಿದಂತೆ ಒಟ್ಟು 2,26,694 ಮತದಾರರು ಇದ್ದಾರೆ.
ಪಾವಗಡ ವಿಧಾನ ಸಭಾ ಕ್ಷೇತ್ರದಲ್ಲಿ 1,00,380 ಪುರುಷ ಮತದಾರರು, 96,643 ಮಹಿಳಾ ಮತದಾರರು ಹಾಗೂ 9 ಇತರೆ ಮತದಾರರು ಸೇರಿದಂತೆ ಒಟ್ಟು 1,97,032 ಮತದಾರರಿದ್ದಾರೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳು ಹಾಗೂ ತುಮಕೂರು ಜಿಲ್ಲೆಯ ಸಿರಾ ಮತ್ತು ಪಾವಗಡ ವಿಧಾನಸಭಾ ಕ್ಷೇತ್ರಗಳು ಸೇರಿದಂತೆ ಒಟ್ಟು 18,41,937 ಮತದಾರರು ಇದ್ದಾರೆ. ಇದರಲ್ಲಿ 9,19,064 ಪುರುಷರು ಹಾಗೂ 9,22,769 ಮಹಿಳೆಯರು, 104 ಇತರೆ ಮತದಾರರಿದ್ದಾರೆ ಎಂದು ತಿಳಿಸಿದರು.
2,167 ಮತಗಟ್ಟೆಗಳು: ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳು ಹಾಗೂ ತುಮಕೂರು ಜಿಲ್ಲೆಯ ಸಿರಾ ಮತ್ತು ಪಾವಗಡ ವಿಧಾನಸಭಾ ಕ್ಷೇತ್ರಗಳು ಸೇರಿದಂತೆ ಒಟ್ಟು 2,167 ಮತಗಟ್ಟೆಗಳು ಇವೆ.
ಜಿಲ್ಲೆಯ ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರದಲ್ಲಿ 285 ಮತಗಟ್ಟೆಗಳು, ಚಳ್ಳಕೆರೆ-260, ಚಿತ್ರದುರ್ಗ-288, ಹಿರಿಯೂರು-287, ಹೊಸದುರ್ಗ-242, ಹೊಳಲ್ಕೆರೆ-299 ಸೇರಿದಂತೆ ಚಿತ್ರದುರ್ಗ ಜಿಲ್ಲೆಯಲ್ಲಿ 1661 ಮತಗಟ್ಟೆಗಳಿವೆ. ತುಮಕೂರು ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರದಲ್ಲಿ 266 ಮತಗಟ್ಟೆಗಳು ಹಾಗೂ ಪಾವಗಡ ವಿಧಾನಸಭಾ ಕ್ಷೇತ್ರದಲ್ಲಿ 240 ಮತಗಟ್ಟೆಗಳು ಇವೆ ಎಂದು ತಿಳಿಸಿದರು.
ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರ (ಎಸ್ಟಿ) ಸಹಾಯಕ ಚುನಾವಣಾಧಿಕಾರಿಯಾಗಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ಬಸನಗೌಡ ಕೋಟೂರ, ಚಳ್ಳಕೆರೆ ವಿಧಾನಸಭಾ ಕ್ಷೇತ್ರ (ಎಸ್ಟಿ) ಸಹಾಯಕ ಚುನಾವಣಾಧಿಕಾರಿಯಾಗಿ ಜಿಲ್ಲಾ ಕೈಗಾರಿಕೆ ಕೇಂದ್ರದ ಜಂಟಿ ನಿರ್ದೇಶಕ ಬಿ.ಆನಂದ್, ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ಸಹಾಯಕ ಚುನಾವಣಾಧಿಕಾರಿಯಾಗಿ ಉಪ ವಿಭಾಗಾಧಿಕಾರಿ ಎಂ.ಕಾರ್ತೀಕ್, ಹಿರಿಯೂರು ವಿಧಾನಸಭಾ ಕ್ಷೇತ್ರ ಸಹಾಯಕ ಚುನಾವಣಾಧಿಕಾರಿಯಾಗಿ ಎನ್.ಹೆಚ್-48 ವಿಶೇಷ ಭೂಸ್ವಾಧೀನಾಧಿಕಾರಿ ಹೆಚ್.ಎನ್.ಶಿವೇಗೌಡ ಕಾರ್ಯನಿರ್ವಹಿಸುವರು.
ಅಲ್ಲದೆ ಹೊಸದುರ್ಗ ವಿಧಾನಸಭಾ ಕ್ಷೇತ್ರ ಸಹಾಯಕ ಚುನಾವಣಾಧಿಕಾರಿಯಾಗಿ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ಮಹೇಂದ್ರ ಕುಮಾರ್, ಹೊಳಲ್ಕೆರೆ ವಿಧಾನಸಭಾ ಕ್ಷೇತ್ರ (ಎಸ್ಸಿ) ಸಹಾಯಕ ಚುನಾವಣಾಧಿಕಾರಿಯಾಗಿ ಭದ್ರಾ ಮೇಲ್ದಂಡೆ ಯೋಜನೆ ವಿಶೇಷ ಭೂಸ್ವಾಧೀನಾಧಿಕಾರಿ ಟಿ.ವಿವೇಕಾನಂದ ಹಾಗೂ ತುಮಕೂರು ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಯಾಗಿ ಕೆಐಎಡಿಬಿ ವಿಶೇಷ ಭೂ ಸ್ವಾಧೀನಾಧಿಕಾರಿ ಸೋಮಪ್ಪ ಕಡಕೋಳ, ಪಾವಗಡ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಯಾಗಿ ತುಮಕೂರು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ- ನರಸಿಂಹಮೂರ್ತಿ ಕಾರ್ಯನಿರ್ವಹಿಸುವರು ಎಂದು ತಿಳಿಸಿದರು.
47 ಚೆಕ್ಪೋಸ್ಟ್ ಕಾರ್ಯನಿರ್ವಹಣೆ: ಚುನಾವಣಾ ಅಕ್ರಮ ತಡೆಗಾಗಿ ಜಿಲ್ಲೆಯಲ್ಲಿ 35 ಚೆಕ್ಪೋಸ್ಟ್ ಹಾಗೂ ಶಿರಾ ಹಾಗೂ ಪಾವಗಡದಲ್ಲಿ ತಲಾ 6 ಚೆಕ್ಪೋಸ್ಟ್ ಸ್ಥಾಪನೆ ಸೇರಿದಂತೆ ಒಟ್ಟು 47 ಚೆಕ್ಪೋಸ್ಟ್ಗಳು ಕಾರ್ಯನಿರ್ವಹಣೆ ಮಾಡಲಿವೆ. ಜಿಲ್ಲೆಯು ಹೊರ ರಾಜ್ಯದೊಂದಿಗೆ ಗಡಿ ಪ್ರದೇಶ ಹೊಂದಿರುವುದರಿಂದ ಸತ್ಯಸಾಯಿ ಹಾಗೂ ಅನಂತಪುರ ಗಡಿಭಾಗದಲ್ಲಿ ಅಂತರರಾಜ್ಯ ಚೆಕ್ಪೋಸ್ಟ್ಗಳನ್ನು ಸ್ಥಾಪನೆ ಮಾಡಲಾಗಿದೆ ಎಂದು ತಿಳಿಸಿದರು.
ಇವಿಎಂ, ವಿವಿಪ್ಯಾಟ್ ದಾಸ್ತಾನು ವಿವರ: ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 2,167 ಮತಗಟ್ಟೆಗಳು ಇದ್ದು, 3,952 ಬ್ಯಾಲೆಟ್ ಯುನಿಟ್, 2,721 ಕಂಟ್ರೋಲ್ ಯುನಿಟ್ ಹಾಗೂ 2,867 ವಿವಿ ಪ್ಯಾಟ್ಗಳ ದಾಸ್ತಾನು ಮಾಡಲಾಗಿದೆ. 47 ಎಸ್ಎಸ್ಟಿ ತಂಡಗಳು, 8 ವಿಎಸ್ಟಿ ತಂಡಗಳು, 8 ವಿವಿಟಿ ತಂಡಗಳು ಹಾಗೂ 31 ಎಫ್ಎಸ್ಟಿ ತಂಡಗಳನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದರು.
ಚುನಾವಣಾ ದೂರುಗಳಿಗೆ ಟೋಲ್ ಫ್ರೀ ಸಂಖ್ಯೆ 1950: ಸಾರ್ವಜನಿಕರು ಚುನಾವಣೆ ಪ್ರಕ್ರಿಯೆ ಸಂಬಂಧಿಸಿದಂತೆ ಯಾವುದೇ ಮಾಹಿತಿ ಮತ್ತು ದೂರುಗಳಿದ್ದಲ್ಲಿ ಮತದಾರರ ಟೋಲ್ ಫ್ರೀ ಸಂಖ್ಯೆ 1950ಗೆ ಸಂಪರ್ಕಿಸಬಹುದು. ಅಲ್ಲದೇ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾದಲ್ಲಿ ಸಾರ್ವಜನಿಕರು ದೂರುಗಳನ್ನು ಸಿ-ವಿಜಿಲ್ ಮೊಬೈಲ್ ಆಪ್ ಮೂಲಕವೂ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.
ಎಲ್ಲಾ ಮತಗಟ್ಟೆಗಳಿಗೆ ಮೂಲಭೂತ ಸೌಕರ್ಯಗಳಾದ ಶೌಚಾಲಯ, ಕುಡಿಯುವ ನೀರು, ವಿದ್ಯುತ್, ನೆರಳಿನ ವ್ಯವಸ್ಥೆ ಹಾಗೂ ಅಂಗವಿಕಲರಿಗೆ ರ್ಯಾಂಪ್ ವ್ಯವಸ್ಥೆ ಮಾಡಲಾಗಿದೆ. ಇವಿಎಂ ಮತ್ತು ವಿವಿ ಪ್ಯಾಟ್ ಸಾಗಾಣೆ ಮಾಡುವ ವಾಹನಗಳಿಗೆ ಜಿ.ಪಿ.ಎಸ್ ಅಳವಡಿಸಿ ಅವುಗಳ ಚಲನ ವಲನಗಳನ್ನು ಮೇಲ್ವಿಚಾರಣೆ ಮಾಡಲಾಗುವುದು. ಧ್ವನಿವರ್ಧಕಗಳನ್ನು ರಾತ್ರಿ 10ರಿಂದ 6ರವರೆಗೆ ಉಪಯೋಗಿಸುವಂತಿಲ್ಲ ಎಂದು ಹೇಳಿದರು.
ಅಭ್ಯರ್ಥಿಗಳು ಮತ್ತು ರಾಜಕೀಯ ಪಕ್ಷಗಳು ಪ್ರಚಾರಕ್ಕಾಗಿ ಪರಿಸರ ಸ್ನೇಹಿ ಪರಿಕರಗಳು (ಪೋಸ್ಟರ್ಸ್, ಬ್ಯಾನರ್ಸ್, ಬಂಟಿಂಗ್ಸ್ ) ಮಾತ್ರ ಬಳಸಬೇಕು. ಇವಿಎಂ ಬಗ್ಗೆ ಮತದಾರರಲ್ಲಿ ಮತಗಟ್ಟೆವಾರು ಅರಿವು ಮತ್ತು ಜಾಗೃತಿ ಮೂಡಿಸಲಾಗಿದೆ. 2014ರಲ್ಲಿ ಶೇಕಡಾ 66ರಷ್ಟು ಮತದಾನ ಆಗಿತ್ತು. 2019ರಲ್ಲಿ ಶೇಕಡಾ 70.64ರಷ್ಟು ಮತದಾನವಾಗಿತ್ತು.
ಈ ಬಾರಿಯೂ ಇನ್ನೂ ಹೆಚ್ಚಿನ ಮತದಾನಕ್ಕೆ ಕ್ರಮ ವಹಿಸಲಾಗಿದ್ದು, ಸ್ವೀಪ್ನಡಿ ಮತದಾರಲ್ಲಿ ಮತದಾನ ಮಾಡುವ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಎಲ್ಲರೂ ತಪ್ಪದೇ ಮತ ಚಲಾಯಿಸಬೇಕೆಂದು ಮನವಿ ಮಾಡಿದ ಜಿಲ್ಲಾಧಿಕಾರಿಗಳು, ಮತದಾನ ಹೆಚ್ಚಳಕ್ಕೆ ಎಲ್ಲ ರೀತಿಯ ಕ್ರಮವಹಿಸಲಾಗಿದೆ ಎಂದರು.
ಜಿಲ್ಲೆಯಲ್ಲಿ 85 ವರ್ಷ ಮೇಲ್ಪಟ್ಟ 11,650 ಮತದಾರರು ಹಾಗೂ 24,750 ವಿಕಲಚೇತನ ಮತದಾರರನ್ನು ಗುರುತಿಸಲಾಗಿದ್ದು, ಅಂತಹವರ ಮನೆಗೆ ತೆರಳಿ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದರು. ಲೋಕಸಭಾ ಚುನಾವಣೆ ಸಂಬಂಧ ಕಾನೂನು ಸುವ್ಯವಸ್ಥೆ ಹಾಗೂ ಚುನಾವಣಾ ಅಕ್ರಮ ತಡೆಯಲು ಪೊಲೀಸ್ ಇಲಾಖೆಯಿಂದ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ ಪತ್ರಿಕಾಗೊಷ್ಠಿಯಲ್ಲಿ ತಿಳಿಸಿದರು.
ಮುಂಜಾಗೃತ ಕ್ರಮವಾಗಿ ಜಿಲ್ಲೆಯಲ್ಲಿ 1058 ಸಮಾಜ ವಿದ್ರೋಹಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. 596 ಜನರನ್ನು ತಹಶೀಲ್ದಾರರ ಮುಂದೆ ಹಾಜರು ಪಡಿಸಿ ವಶಕ್ಕೆ ಪಡೆಯಲಾಗಿದೆ. 20 ಜನರ ಗಡಿಪಾರಿಗೆ ವಿಭಾಗಾಧಿಕಾರಿಗಳ ಮುಂದೆ ವರದಿ ಸಲ್ಲಿಸಲಾಗಿದೆ.
ಜಿಲ್ಲೆಗೆ ಪ್ಯಾರಾ ಮಿಲಿಟರ್ ಆಗಮಿಸಿದ ನಂತರ ಪ್ರತಿ ಹಳ್ಳಿಗಳಿಯೂ ಸಂಚರಿಸಿ ಜನಸಾಮಾನ್ಯರಲ್ಲಿ ಮತದಾನ ಕೈಗೊಳ್ಳಲು ವಿಶ್ವಾಸ ಹೆಚ್ಚಿಸಲಾಗುವುದು. ಈಗಾಗಲೇ ಜಿಲ್ಲೆಯ 35 ಚೆಕ್ ಪೋಸ್ಟ್ಗಳಲ್ಲಿ ಪೊಲೀಸ್ ಅಧಿಕಾರಿಗಳನ್ನು ನಿಯೋಜಿಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂಧರ್ ಕುಮಾರ್ ಮೀನಾ, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಅಬಕಾರಿ ಉಪ ಆಯುಕ್ತ ಡಾ.ಬಿ.ಮಾದೇಶ್ ಇದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications