₹4,00,000 ಲಂಚ ಸ್ವೀಕರಿಸುವ ವೇಳೆ ಚಿತ್ರದುರ್ಗ ಬಯಲು ಸೀಮೆಯ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ
ಚಿತ್ರದುರ್ಗ, ಮೇ, 06: ಚಿತ್ರದುರ್ಗ ಬಯಲು ಸೀಮೆಯ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಬಸವರಾಜಪ್ಪ 4,00,000 ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಗುತ್ತಿಗೆದಾರನ ಕಾಮಗಾರಿಗೆ ಬಿಲ್ ಪಾವತಿ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಗುತ್ತಿಗೆದಾರ ಸಿದ್ದನಗೌಡನಿಂದ 4 ಲಕ್ಷ ರೂಪಾಯಿ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ಬಯಲು ಸೀಮೆಯ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿಯನ್ನು ಬಲೆಗೆ ಕೆಡವಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ದಾಳಿಯನ್ನು ಲೋಕಾಯುಕ್ತ ಡಿವೈಎಸ್ಪಿ ಬಸವರಾಜ್ ನೇತೃತ್ವದಲ್ಲಿ ನಡೆಸಲಾಗಿದ್ದು, ಆರೋಪಿ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಎಡಿಎಲ್ಆರ್ ಲೋಕಾಯುಕ್ತ ಬಲೆಗೆ: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರದಲ್ಲಿರುವ ಭೂ ದಾಖಲೆಗಳ ಸಹಾಯಕ ನಿರ್ದೇಶಕ ಕಛೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ಲಂಚ ಪಡೆಯುತ್ತಿದ್ದಾಗ ಎಡಿಎಲ್ಆರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಘಟನೆ ನಡೆದಿತ್ತು.
ರೈತನ ಜಮೀನಿಗೆ ಸಂಬಂಧಿಸಿದಂತೆ ದಾಖಲೆ ಹಾಗೂ ಪಹಣಿ ನೀಡಲು 15ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟು, 10 ಸಾವಿರ ಲಂಚ ಪಡೆಯುತ್ತಿದ್ದಾಗ ಎಡಿಎಲ್ ಆರ್.ಗಂಗಣ್ಣ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದರು.
ಚಳ್ಳಕೆರೆ ತಾಲೂಕಿನ ಓಬಳಾಪುರ ಗ್ರಾಮದ ರೈತ ಕೆ.ಜಿ.ಜಯ್ಯಣ್ಣ ತಮ್ಮ ಜಮೀನಿಗೆ ಸಂಭಂದಿಸಿದಂತೆ ದಾಖಲೆಗಳನ್ನು ಪ್ರತ್ಯೇಕವಾಗಿ ಮಾಡಿಕೊಡಲು ಗಂಗಣ್ಣ 15,000 ರೂಪಾಯಿ ಹಣ ಕೇಳಿದ್ದರು. ಲಂಚ ಕೇಳಿರುವ ಬಗ್ಗೆ ರೈತ ಜಯಣ್ಣ ಲೋಕಾಯುಕ್ತರಿಗೆ ದೂರು ನೀಡಿದ್ದರು.
ಲಂಚ ಕೇಳಿದ ಅಧಿಕಾರಿ ಅಮಾನತು: ಈ ದೂರಿನನ್ವಯ ಲೋಕಾಯುಕ್ತ ಪೊಲೀಸರು ಇಂದು ಕಾರಿನ ಚಾಲಕ ಕಿರಣ್ ಎಂಬುವವರು ಜಯಣ್ಣನಿಂದ 10 ಸಾವಿರ ರೂಪಾಯಿ ಹಣ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಇವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಲೋಕಾಯುಕ್ತ ಎಸ್ಪಿ ವಾಸುದೇವರಾಮ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಮೃತ್ಯುಂಜಯ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications