ಕರ್ನಾಟಕದಂಥ ರಿಮೋಟ್ ಕಂಟ್ರೋಲ್ ಸರ್ಕಾರ ಬೇಕೆ?: ಮೋದಿ
ಚಿತ್ರದುರ್ಗ, ಏಪ್ರಿಲ್ 09: ಪ್ರಧಾನಿ ನರೇಂದ್ರ ಮೋದಿ ಅವರು ಓಬವ್ವನ ನೆಲೆ ಚಿತ್ರದುರ್ಗಕ್ಕೆ ಆಗಮಿಸಿದ್ದು, ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಸಮಾವೇಶ ನಡೆಸಲಿದ್ದಾರೆ.
ಮೊದಲಿಗೆ ಮಹಾರಾಷ್ಟ್ರದಲ್ಲಿ ಸಮಾವೇಶ ಮುಗಿಸಿದ ನಂತರ ಚಿತ್ರದುರ್ಗಕ್ಕೆ ಆಗಮಿಸಿರುಮೋದಿ, ಪ್ರಥಮ ಬಾರಿಗೆ ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿರುವ DRDO ಒಳಗಿರುವ ರನ್ ವೇಗೆ ವಿಶೇಷ ವಿಮಾನದಲ್ಲಿ ಬಂದಿಳಿದರು.

ವಿಶೇಷ ಹೆಲಿಕಾಪ್ಟರ್ ಮೂಲಕ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಬಿಜೆಪಿ ಬೃಹತ್ ಸಮಾವೇಶದಲ್ಲಿ ಭಾಗವಸಿದ್ದಾರೆ. ಕಾರ್ಯಕ್ರಮಕ್ಕೆ 35 ಸಾವಿರ ಆಸನ ವ್ಯವಸ್ಥೆ ಮಾಡಲಾಗಿದ್ದು, ಲಕ್ಷಾಂತರ ಜನ ಆಗಮಿಸಿದ್ದಾರೆ. ಪ್ರಧಾನಿ ಮೋದಿ ಅವರ ಭಾಷಣದ ಕ್ಷಣ ಕ್ಷಣದ ಮಾಹಿತಿಯನ್ನು ಒನ್ ಇಂಡಿಯಾ ಕನ್ನಡ ನೀಡಲಿದೆ.
ಹಳ್ಳಿ ಹಳ್ಳಿಯಲ್ಲೂ ಕೂಡ, ನಗರ ನಗರ ಕೂಡ, ಮನೆ ಮನೆಯಲ್ಲೂ ಕೂಡ, ರೈತರು ಕೂಡ, ತಾಯಿ-ಮಕ್ಕಳು, ದೇಶದ ಗಡಿಯಲ್ಲಿ ಕೂಡ ಎಲ್ಲೆಲ್ಲೂ ಚೌಕಿದಾರ ಎನ್ನುವ ಘೋಷಣೆಯೊಂದಿಗೆ ಮೋದಿ ತಮ್ಮ ಮಾತು ಮುಗಿಸಿದರು.
21 ನೇ ಶತಮಾನದ ಯುವಕರು ಮೊದಲ ಬಾರಿಗೆ ಮತದಾನ ಮಾಡಿ, ಸದೃಢ ಸರ್ಕಾರ ನೀಡುವ ಮೂಲಕ ಕಾಂಗ್ರೆಸ್ ಗೆ ಶಿಕ್ಷೆ ನೀಡಿ-ನರೇಂದ್ರ ಮೋದಿ
ಮೊದಲ ಬಾರಿಗೆ ಮತಚಲಾಯಿಸುವವರಿಗೆ ನನ್ನ ಮನವಿ. ನಿಮ್ಮ ಈ ಮತ ಸದೃಢ ದೇಶಕ್ಕಾಗಿ, ದೇಶಕ್ಕಿ ಪ್ರಾಣತ್ಯಾಗ ಮಾಡುವ ಯೋಧರಿಗೆ, ದೇಶದ ಬಡವ ಮನೆಪಡೆಯುವುದಕ್ಕಾಗಿ, ಎಲ್ಲರಿಗೂ ಶುದ್ಧ ನೀರು ಸಿಗುವುದಕ್ಕಾಗಿ ನಿಮ್ಮ ಮತ ಮೀಸಲಿಡಿ- ನರೇಂದ್ರ ಮೋದಿ
ಈ ಅನ್ಯಾಯಕ್ಕೆ ನ್ಯಾಯ ಬೇಕೋ ಬೇಡವೋ, ಅನ್ಯಾಯ ಮಾಡಿದವರನ್ನು ಶಿಕ್ಷಿಸಬೇಕೋ ಬೇಡವೋ?-ನರೇಂದ್ರ ಮೋದಿ
ಕಾಂಗ್ರೆಸ್ ಎಷ್ಟೋ ದಶಕಳಿಂದ ಸೇನೆಗೆ, ನಮ್ಮ ವಿದೇಶಿ ನೀತಿಗೆ, ಅಭಿವೃದ್ಧಿಗೆ ಮಾಡಿದ ಅನ್ಯಾಯವನ್ನು ನಾವು ಐದು ವರ್ಷಗಳಲ್ಲಿ ಸರಿಪಡಿಸಲು ನೋಡಿದ್ದೇವೆ- ನರೇಂದ್ರ ಮೋದಿ
ರೈತರಿಗಾಗಿ ಈ ಸಮ್ಮಿಶ್ರ ಸರ್ಕಾರ ಏನು ಮಾಡಿದೆ? ನಿಮ್ಮ ಸಾಲಮನ್ನಾ ಮಾಡುವುದಾಗಿ ಹೇಳಿದ್ದರಲ್ಲ, ಮಾಡಿದರಾ? ನಿಮ್ಮ ಖಾತೆಗೆ ಹಣ ಹಾಕಿದರಾ?-ನರೇಂದ್ರ ಮೋದಿ
ಕಾಂಗ್ರೆಸ್-ಜೆಡಿಎಸ್ ಗೆ ಯಾರ ಉದ್ಧಾರವೂ ಬೇಕಾಗಿಲ್ಲ. ಕಾಂಗ್ರೆಸ್-ಜೆಡಿಎಸ್ ಸರ್ಕಾರ ನಿಯತ್ತಿನಿಂದ ಕೆಲಸ ಮಾಡಿದ್ದರೆ ರಾಜ್ಯ ಹೀಗಿರುತ್ತಿರಲಿಲ್ಲ- ನರೇಂದ್ರ ಮೋದಿ
ವಿಪಕ್ಷಗಳಿಗೆ ದೇಶದ ಹಿತಕ್ಕಿಂತ ಸ್ವಾರ್ಥ ಮುಖ್ಯ, ತುಷ್ಟೀಕರಣವೇ ಅವರ ಧ್ಯೇಯ. ಆದರೆ ನಮ್ಮ ಉದ್ದೇಶ ಸಬ್ ಕೆ ಸಾಥ್ ಸಬ್ ಕೆ ವಿಕಾಸ್-ನರೇಂದ್ರ ಮೋದಿ
ನಮ್ಮ ಸಂಕಲ್ಪ ಎಲ್ಲಾ ಬಡವರಿಗೂ ಮನೆ ನೀಡುವುದು, ಎಲ್ಲಾ ಮನೆಗಳಿಗೆ ಎಲ್ ಪಿಜಿ ಸಂಪರ್ಕ ನೀಡುವುದು, ನಮ್ಮ ಸಂಕಲ್ಪ ರೈತರ ಆದಾಯವನ್ನು ದ್ವಿಗುಣಗೊಳಿಸುವುದು- ನರೇಂದ್ರ ಮೋದಿ
ವೀರಮದಕರಿ ನಾಯಕ, ವೀರ ಮದಕರಿ ನಾಯಕರ ನಾಡಾದ ಈ ಚಿತ್ರದುರ್ಗದ ಬಗ್ಗೆ ನಮಗೆ ಹೆಮ್ಮೆ ಇದೆ- ನರೇಂದ್ರ ಮೋದಿ
ಕೇವಲ 125 ಕೋಟಿ ಭಾರತೀಯರನ್ನೇ ನನ್ನ ಹೈಕಮಾಂಡ್ ಎಂದುಕೊಳ್ಳುವ ಪ್ರಧಾನಿಯನ್ನು ಆರಿಸಿ-ನರೇಂದ್ರ ಮೋದಿ
ಸದೃಢ ಸರ್ಕಾರವನ್ನು ಆರಿಸದಿದ್ದರೆ ಏನಾಗುತ್ತದೆ ಎಂಬುದನ್ನು ಈಗಾಗಲೇ ನೀವು ನೋಡಿದ್ದೀರಿ. ಕರ್ನಾಟಕ ಸರ್ಕಾರವನ್ನು ಯಾರು ನಡೆಸುತ್ತಿದ್ದಾರೆ? ಇಂಥ ರಿಮೋಟ್ ಕಂಟ್ರೋಲ್ ಸರ್ಕಾರ ನಿಮಗೆ ಬೇಕೆ?-ನರೇಂದ್ರ ಮೋದಿ
ಈ ಚುನಾವಣೆಯಲ್ಲಿ ನೀವು ಕೇವಲ ಸಂಸತ್, ಪ್ರಧಾನಿಯನ್ನು ಆರಿಸುತ್ತಿಲ್ಲ. ಆದರೆ ಒಂದು ಸದೃಢ ಭಾರತಕ್ಕಾಗಿ, ಸದೃಢ ಸರ್ಕಾರವನ್ನು ಆಯ್ಕೆ ಮಾಡುತ್ತೀರಿ-ನರೇಂದ್ರ ಮೋದಿ
ಏರ್ ಸ್ಟ್ರೈಕ್ ನಡೆದಾಗಲೂ, ಉಪಗ್ರಹ ಪ್ರತಿರೋಧನ ಅಸ್ತ್ರವನ್ನು ಯಶಸ್ವಿಯಾಗಿ ಪರೀಕ್ಷೆ ಮಾಡಿದಾಗಲೂ ಮೋದಿ ವಿರೋಧಿಗಳು ಟೀಕಿಸಿದರು. ಇವರಿಗೆ ದೇಶದ ಉನ್ನತಿ ಬೇಕಿಲ್ಲ. ಮೋದಿಯನ್ನು ವಿರೋಧಿಸುವುದು ಬೇಕಿದೆ- ನರೇಂದ್ರ ಮೋದಿ
ಹಿಂದಿನ ಸರ್ಕಾರವಿದ್ದಾಗ ಎಷ್ಟೇ ಭಯೋತ್ಪದಾಕ ದಾಳಿ ನಡೆದರೂ, ಪಾಕಿಸ್ತಾನಕ್ಕೆ ಹೆದರಿ ಸರ್ಕಾರ ಸುಮ್ಮನೇ ಕೂರುತ್ತಿತ್ತು. ಆದರೆ ನಾವು ಪಾಕಿಸ್ತಾನದ ಧಮ್ಕಿಗೆ ಹೆದರಲಿಲ್ಲ. ಬಾಲಕೋಟ್ ಗೇ ತೆರಳಿ ನಾವು ದಾಳಿ ನಡೆಸಿದವು- ನರೇಂದ್ರ ಮೋದಿ
ಜಗತ್ತಿನಲ್ಲಿ ಭಾರತಕ್ಕೆ ಜೈಕಾರ ಹೇಳಲಾಗುತ್ತಿದೆ. ಅದಕ್ಕೆ ಮೋದಿ ಕಾರಣವಲ್ಲ, ಅದಕ್ಕೆಲ್ಲ ನೀವು ಕಾರಣ-ನರೇಂದ್ರ ಮೋದಿ
ನೀವೆಲ್ಲರೂ ಈ ಚೌಕಿದಾರನ ಮೇಲೆ ವಿಶ್ವಾಸವನ್ನಿಟ್ಟುಕೊಂಡು ನಮಗೆ ಐದು ವರ್ಷ ಅಧಿಕಾರ ನೀಡಿದ್ದೀರಿ- ನರೇಂದ್ರ ಮೋದಿ
ಶಿವಕುಮಾರ್ ಸ್ವಾಮೀಜಿ ಅವರಿಗೂ ನನ್ನ ನಮನ ಎಂದು ಸಿದ್ದಗಂಗಾ ಶ್ರೀಗಳನ್ನು ಸ್ಮರಿಸಿದ ಮೋದಿ
ಚಿತ್ರದುರ್ಗದ ಮತದಾರರಿಗೆ ನಿಮ್ಮ ಚೌಕಿದಾರ ನರೇಂದ್ರ ಮೋದಿಯಿಂದ ನಮಸ್ಕಾರ ಎಂದು ಕನ್ನಡದಲ್ಲೇ ಮೋದಿ ಅವರು ಮಾತು ಆರಂಭಿಸಿದರು.
ನರೇಂದ್ರ ಮೋದಿ ಅವರನ್ನು ಸನ್ಮಾನಿಸಿ ಸ್ವಾಗತಿಸಿದ ಚಿತ್ರದುರ್ಗ ಜಿಲ್ಲಾ ಘಟಕದ ಬಿಜೆಪಿ ನಾಯಕರು
ಕಾರ್ಯಕ್ರಮಕ್ಕೆ ಬಿಗಿಬಂದೋಬಸ್ತ್ ಏರ್ಪಡಿಸಲಾಗಿದ್ದು, 1,500 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
READ MORE












Click it and Unblock the Notifications