Get Updates
Get notified of breaking news, exclusive insights, and must-see stories!

ಚಿತ್ರದುರ್ಗದಲ್ಲಿ ಏ. 26 ಕ್ಕೆ ಸರ್ಕಾರದಿಂದ ಸಾಮೂಹಿಕ ವಿವಾಹ

ಚಿತ್ರದುರ್ಗ, ಫೆಬ್ರವರಿ 23: ಕರ್ನಾಟಕ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆ ವತಿಯಿಂದ ಆಯೋಜಿಸಿರುವ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮ ಮುಂದಿನ ಏಪ್ರಿಲ್ 26 ರಂದು ಚಿತ್ರದುರ್ಗ ಜಿಲ್ಲೆಯ ಮೂರು ಸ್ಥಳಗಳಲ್ಲಿ ನಡೆಯಲಿದೆ.

ಸಾಮೂಹಿಕ ವಿವಾಹ ನಡೆಯುವ ಜಿಲ್ಲೆಯ ಸ್ಥಳಗಳೆಂದರೆ, ಹಿರಿಯೂರು ತಾಲ್ಲೂಕಿನ ವದ್ದಿಕೆರೆ ಗ್ರಾಮದ ಶ್ರೀ ಕಾಲಭೈರವೇಶ್ವರ ದೇವಾಲಯ, ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿಯ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನ ಹಾಗೂ ಹೊಸದುರ್ಗ ತಾಲೂಕಿನ ಶ್ರೀ ಗವಿ ರಂಗನಾಥ ಸ್ವಾಮಿ ದೇವಾಲಯ ಇಲ್ಲಿ ಸಾಮೂಹಿಕ ವಿವಾಹ ಜರುಗಲಿದೆ.

ಸರ್ಕಾರದಿಂದ ನಡೆಯುವ ಈ ವಿವಾಹ ಕಾರ್ಯಕ್ರಮ ಉಚಿತವಾಗಿದ್ದು, ಜಿಲ್ಲೆಯ ಸಮಸ್ತ ಬಡ ಕುಟುಂಬದವರು ಹಾಗೂ ಸರಳವಾಗಿ ವಿವಾಹ ಬಯಸಿರುವವರು ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬಹುದು ಎಂದು ಧಾರ್ಮಿಕ ದತ್ತಿ ಇಲಾಖೆ ಹೇಳಿದೆ.

Mass Marriage By The State Government On April 26 In Chitradurga

ಸರ್ಕಾರದಿಂದ ವರನಿಗೆ ಪ್ರೋತ್ಸಾಹ ಧನವಾಗಿ ಹೂವಿನ ಹಾರ, ಪಂಚೆ, ಶಲ್ಯ ಖರೀದಿಗಾಗಿ 5 ಸಾವಿರ ಕೊಡಲಾಗುವುದು. ವಧುವಿಗೆ ಪ್ರೋತ್ಸಾಹ ಧನವಾಗಿ ಹೂವಿನ ಹಾರ, ಧಾರೆ ಸೀರೆ ಮತ್ತು ರವಿಕೆ ಕಣ ಖರೀದಿಗಾಗಿ 10 ಸಾವಿರ ಹಣ ಕೊಡಲಾಗುವುದು.

ವಧುವಿಗೆ ಚಿನ್ನದ ತಾಳಿ, ಎರಡು ಚಿನ್ನದ ಗುಂಡು (ಅಂದಾಜು 8 ಗ್ರಾಂ ತೂಕ) ಕೊಡಲಾಗುವುದು.

Mass Marriage By The State Government On April 26 In Chitradurga

ನವದಂಪತಿಗಳಿಗೆ 40 ಸಾವಿರ ನಗದು ಹಣ ಕೊಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಉಚಿತ ಸಹಾಯವಾಣಿ 1800 4256654 ನಂಬರ್ ಗೆ ಕರೆ ಮಾಡಬಹುದು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+