ಕಾಂಗ್ರೆಸ್ ಗೃಹಲಕ್ಷ್ಮೀ, ಗೃಹಜ್ಯೋತಿ ಯೋಜನೆಗಳ ವಿರುದ್ಧ ಸಚಿವ ಬಿಸಿ ಪಾಟೀಲ್ ವ್ಯಂಗ್ಯ
ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭರವಸೆ ನೀಡಿರುವ ಗೃಹಲಕ್ಷ್ಮೀ ಹಾಗೂ ಗೃಹಜ್ಯೋತಿ ಯೋಜನೆಯ ವಿರುದ್ಧ ಕೃಷಿ ಸಚಿವ ಬಿಸಿ ಪಾಟೀಲ್ ವ್ಯಂಗ್ಯವಾಡಿದರು.
ಚಿತ್ರದುರ್ಗ, ಫೆಬ್ರವರಿ 25: ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭರವಸೆ ನೀಡಿರುವ ಗೃಹಲಕ್ಷ್ಮೀ ಹಾಗೂ ಗೃಹಜ್ಯೋತಿ ಯೋಜನೆಯ ವಿರುದ್ಧ ಕೃಷಿ ಸಚಿವ ಬಿಸಿ ಪಾಟೀಲ್ ವ್ಯಂಗ್ಯವಾಡಿದರು.
ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳ ಸೇರಿ ಅನೇಕ ಕೆಲಸ ಹೇಳದೆ ಮಾಡಿದ್ದೇವೆ. "ಆಡದೆ ಕೊಡುವವನು ಉತ್ತಮ, ಆಡಿ ಕೊಡುವವ ಮಧ್ಯಮ, ಆಡಿಯೂ ಕೊಡದವ ಅಧಮ", ಕಾಂಗ್ರೆಸ್ ಪಕ್ಷದವರು ಅಧಮರು ಆಗುತ್ತಾರೆಂದು ವಚನದ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಟಾಂಗ್ ನೀಡಿದ್ದಾರೆ.

ಕಾಂಗ್ರೆಸ್ ನಾಯಕರು ಗ್ಯಾರಂಟಿ ಕಾರ್ಡ್ ಬಿಡುಗಡೆ ಮಾಡಿದ್ದಾರೆ. ಆದರೆ ಜನರಿಗೆ ಯೋಜನೆ ಕೊಡುವ ಯಾವುದೇ ಗ್ಯಾರಂಟಿ ಇಲ್ಲ. ಅಲ್ಲದೇ ಪುಕ್ಕಟೆ ಕಾರ್ಡ್ ಬಿಡುಗಡೆ ಮಾಡುವುದು ದೊಡ್ಡ ವಿಷಯ ಅಲ್ಲ, ನುಡಿದಂತೆ ನಡೆಯಬೇಕು, ಕಾಂಗ್ರೆಸ್ಸಿಗರಿಗೆ ನುಡಿದಂತೆ ನಡೆಯಲಾಗದು ಎಂದು ಕಾಂಗ್ರೆಸ್ ವಿರುದ್ಧ ಕುಟುಕಿದರು.
ಇನ್ನು ಮಾಜಿ ಸಿಎಂ ಸಿದ್ಧರಾಮಯ್ಯ ಬಹಳ ದೊಡ್ಡವರಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಬಾಯಿಗೆ ಬಂದಂತೆ ಬೈದು ಮಾತಾನಾಡುತ್ತಾರೆ. ಭಾರತ ದೇಶವನ್ನು ದೊಡ್ಡ ಮಟ್ಟಕ್ಕೆ ಕೊಂಡೊಯ್ದಿದಿರುವ ಪ್ರಧಾನಿ ಬಗ್ಗೆಯೇ ಮಾತಾಡುವುದು ಸರಿಯಲ್ಲ ಎಂದರು.

ರಾಜ್ಯದಲ್ಲಿ ಕೆಲ ಶ್ರೀಗಳಿಗೆ ಕಾಂಗ್ರೆಸ್ ಪರ ಒಲವು ವಿಚಾರ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸ್ವಾಮೀಜಿಗಳು ಕಾಂಗ್ರೆಸ್ ಪಕ್ಷದಿಂದ ಚುನಾವಣೆಗೆ ನಿಂತುಕೊಳ್ಳಲಿ, ಕಾಂಗ್ರೆಸ್ ಪರ ಬ್ಯಾಟಿಂಗ್ ಏಕೆ, ಬ್ಯಾಟಿಂಗ್, ಬಾಲಿಂಗ್ ಎರಡೂ ಮಾಡಲಿ. ನಮ್ಮ ಪರವಾಗಿರಿ ಎಂದು ನಾವು ಕೇಳಲ್ಲ. ಬದಲಿಗೆ ನಮ್ಮಕೆಲಸ ನೋಡಿ ಮತ ನೀಡುತ್ತಾರೆ ಎಂದರು.
ಇನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಲದ ಅರ್ಕಾವತಿ ಹಗರಣವನ್ನು ಮುಖ್ಯಮಂತ್ರಿಗಳು ಬಿಚ್ಚಿಟ್ಟಿದ್ದಾರೆ. ಸುಮಾರು 8 ಸಾವಿರ ಕೋಟಿ ಹಗರಣವನ್ನು ಬಿಚ್ಚಿಟ್ಟಿದ್ದಾರೆ. ಇಂತಹ ಪ್ರಕರಣವನ್ನು ಮುಚ್ಚಿ ಹಾಕಲು ಲೋಕಾಯುಕ್ತವನ್ನು ಮುಚ್ಚಿದರು. ಬಿಜೆಪಿ ಬಗ್ಗೆ ಕಾಂಗ್ರೆಸ್ ಮಾತಾಡುವುದು ಭೂತದ ಬಾಯಲ್ಲಿ ಭಗವದ್ಗೀತೆ ಬಂದಂತೆ, ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರದ ಕೂಸು ಎಂದು ಸಚಿವರು ಕಾಂಗ್ರೆಸ್ ಆರೋಪಕ್ಕೆ ತಿರುಗೇಟು ನೀಡಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications