ಅಬಕಾರಿ ಇಲಾಖೆ ಕಚೇರಿ ಎದುರು ಧರಣಿ ಕುಳಿತ ಶಾಸಕ ಗೂಳಿಹಟ್ಟಿ ಶೇಖರ್
ಚಿತ್ರದುರ್ಗ, ಅಕ್ಟೋಬರ್ 21: ರಾಜ್ಯ ಸರ್ಕಾರದಿಂದ ಮಂಜೂರಾಗಿದ್ದ MSIL ಅಂಗಡಿಗೆ NOC ನೀಡಲು ವಿಳಂಬವಾದ ಹಿನ್ನೆಲೆಯಲ್ಲಿ ಚಿತ್ರದುರ್ಗ ನಗರದ ಅಬಕಾರಿ ಕಚೇರಿ ಬಾಗಿಲು ಎದುರು ಹೊಸದುರ್ಗದ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಧರಣಿ ಕುಳಿತಿದ್ದರು.
ಚಿತ್ರದುರ್ಗ ಹೊಸದುರ್ಗ ಪಟ್ಟಣ ಹಾಗೂ ಶ್ರೀರಾಂಪುರ ಗ್ರಾಮಕ್ಕೆ ಕಳೆದ ಎಂಟು ತಿಂಗಳ ಹಿಂದೆ MSIL ಮಂಜೂರಾಗಿತ್ತು. ಇದಕ್ಕೆ NOC ನೀಡದೆ ಶಾಸಕರಿಗೆ ಅಬಕಾರಿ ಡಿಸಿ ನಿರ್ಲಕ್ಷ್ಯ ತೋರಿದ್ದರಿಂದ ಅಬಕಾರಿ ಅಧಿಕಾರಿಗಳ ಕ್ರಮಕ್ಕೆ ಸ್ವತಃ ಶಾಸಕರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಚಿತ್ರದುರ್ಗ ಜಿಲ್ಲಾ ಅಬಕಾರಿ ಅಧಿಕಾರಿಗಳ ನಿರ್ಲಕ್ಷಕ್ಕೆ ಬೇಸತ್ತಾ ಹೊಸದುರ್ಗ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್, ಜಿಲ್ಲಾ ಅಬಕಾರಿ ಕಚೇರಿ ಬಳಿ ಧರಣಿ ಕುಳಿತಿದ್ದರು. ಶಾಸಕರ ಧರಣಿ ವಿಷಯ ತಿಳಿದ ಅಬಕಾರಿ ಜಿಲ್ಲಾ ಅಧಿಕಾರಿ ಧರಣಿ ಸ್ಥಳಕ್ಕೆ ದೌಡಾಯಿಸಿದರು.
Recommended Video
ಕೂಡಲೇ ಕೆಲಸ ಮಾಡಿ ಕೊಡುವುದಾಗಿ ಹೇಳಿ, ಅಬಕಾರಿ ಜಿಲ್ಲಾ ಅಧಿಕಾರಿ ನಾಗಶಯನ ಶಾಸಕರ ಬಳಿ ಕ್ಷಮೆ ಕೇಳಿದ್ದಾರೆ. ಅಧಿಕಾರಿ ಕ್ಷಮೆ ಕೇಳಿದ್ದರಿಂದ ಶಾಸಕ ಗೂಳಿಹಟ್ಟಿ ಶೇಖರ್ ಧರಣಿ ಕೈಬಿಟ್ಟರು. ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗದಲ್ಲಿ ಶಾಸಕ ಗೂಳಿಹಟ್ಟಿ ಶೇಖರ್ ಧರಣಿ ಕುಳಿತುಕೊಳ್ಳುವ ಮೂಲಕ ಅಬಕಾರಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ.