ನಿಮ್ಮದು ಬರೀ ಚುನಾವಣಾ ಗಿಮಿಕ್: ಸುಧಾಕರ್ ಹೇಳಿಕೆಗೆ ಶಾಸಕಿ ತಿರುಗೇಟು
ಚಿತ್ರದುರ್ಗ, ನವೆಂಬರ್ 5: ಕ್ಷೇತ್ರದಿಂದ ಯಾವುದೇ ಹಣ ಸರ್ಕಾರಕ್ಕೆ ವಾಪಸ್ ಹೋಗಿಲ್ಲ ಎಂದು ಹಿರಿಯೂರು ಬಿಜೆಪಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಅವರು ಮಾಜಿ ಸಚಿವ ಡಿ.ಸುಧಾಕರ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ಬುಧವಾರದಂದು ಹಿರಿಯೂರು ನಗರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ನಂತರ ಮಾತನಾಡಿದ ಮಾಜಿ ಸಚಿವ ಡಿ.ಸುಧಾಕರ್ "ನಮ್ಮ ಅಧಿಕಾರದ ಅವಧಿಯಲ್ಲಿ ಸರ್ಕಾರ ಬಿಡುಗಡೆ ಮಾಡಿದ್ದ ಹಣವನ್ನು ಈಗಿನ ಸರ್ಕಾರ ಹಣ ವಾಪಸ್ ಪಡೆದುಕೊಂಡಿದೆ' ಎಂಬ ಹೇಳಿಕೆಯನ್ನು ಖಂಡಿಸಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಅವರು ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.
ಒಬ್ಬ ಮಾಜಿ ಸಚಿವರಾಗಿ ಸಾರ್ವಜನಿಕರಿಗೆ ತಪ್ಪು ಮಾಹಿತಿಯನ್ನು ನೀಡಬಾರದು ಎಂದ ಶಾಸಕಿ, ನಾನಾಗಲಿ ಅಥವಾ ಅವರಾಗಲಿ ಕೈಯಿಂದ ದುಡ್ಡು ತಂದು ಅಭಿವೃದ್ಧಿ ಕಾರ್ಯಗಳನ್ನು ಮಾಡುವುದಿಲ್ಲ, ಬದಲಾಗಿ ಜನರ ತೆರಿಗೆ ಹಣದಿಂದ ನಾವು ಅಭಿವೃದ್ಧಿ ಮಾಡುವುದು ಎಂದು ಮಾಜಿ ಸಚಿವರ ಹೇಳಿಕೆಗೆ ಶಾಸಕಿ ಪೂರ್ಣಿಮಾ ಪ್ರತಿಕ್ರಿಯಿಸಿದರು.

2008 ರಿಂದ 2018 ರವರೆಗೆ ಹಿರಿಯೂರು ಕ್ಷೇತ್ರದ ಶಾಸಕರಾಗಿದ್ದು, 2008 ರಿಂದ ಹುಳಿಯಾರು ರಸ್ತೆ ಅಗಲೀಕರಣ ಮತ್ತು ದುರಸ್ತಿ ಬಗ್ಗೆ ಇವರ ಗಮನಕ್ಕೆ ಬಂದಿರಲಿಲ್ಲವೇ ಎಂದು ಪ್ರಶ್ನಿಸಿದರು. ಅವರು ಬಹಳ ಚಾಣಾಕ್ಷತೆಯಿಂದ 2018ರ ಚುನಾವಣಾ ಗಿಮಿಕ್ ಗಾಗಿ, ಜನರ ಕಣ್ಣು ಹೊರೆಸುವುದಕ್ಕಾಗಿ ಹಣ ತಂದಿದ್ದರಾ.? ಅವರು ಹಣ ತರುವುದು ಮುಖ್ಯವಲ್ಲ, ಅದನ್ನು ಕಾರ್ಯರೂಪಕ್ಕೆ ತರುವುದು ಮುಖ್ಯವಾಗಿರುತ್ತದೆ ಎಂದರು.
ಹುಳಿಯಾರು ರಸ್ತೆ ಬಗ್ಗೆ ಅವರಿಗೆ ಕಾಳಜಿ ಇದ್ದಿದ್ದರೆ ಮೊದಲೇ ರಸ್ತೆ ಅಗಲೀಕರಣ ಮಾಡುತ್ತಿದ್ದರು. ಯಾವುದೇ ಹಣ ವಾಪಸ್ ಹೋಗಿಲ್ಲ, ಜನರ ತೆರಿಗೆ ಹಣವನ್ನು ಪೋಲು ಮಾಡಬಾರದು ಎಂಬುದು ನಮಗೆ ಗೊತ್ತಿದೆ. ಈಗಾಗಲೇ 4 ಕೋಟಿ ರೂ. ಕಾಮಗಾರಿ ಕೆಲಸ ಮುಗಿದಿದೆ.
ಒಂದು ರಸ್ತೆ ಅಗಲೀಕರಣ ಮಾಡಬೇಕಾದರೆ ಡಿಪಿಆರ್ ನಲ್ಲಿ ಬರುವ ವಿದ್ಯುತ್ ಕಂಬ, ಕುಡಿಯುವ ನೀರಿನ ಪೈಪ್ ಗಳು, ರಸ್ತೆ ಪಕ್ಕದ ಮರಗಳು ಇವೆಲ್ಲವುಗಳ ಇಲಾಖೆಗೆ ಇಂತಿಷ್ಟು ಹಣ ಎಂದು ಡಿಪಿಆರ್ ನಲ್ಲಿ ನಮೂದು ಮಾಡಬೇಕಿತ್ತು. ಆದರೆ ಇದು ಯಾವುದು ಆಗಿಲ್ಲ. ಆದರೆ ಜನರ ಕಣ್ಣು ಹೊರೆಸೋಕ್ಕೆ ಹಣ ತಂದಿದ್ದರು. ಇದನ್ನು ಬದಲಾಯಿಸಿ ಈಗ ಟೆಂಡರ್ ಕರೆದಿದ್ದು ಶೀಘ್ರದಲ್ಲೇ ಕಾಮಗಾರಿ ಕೈಗೊಳ್ಳಲಾಗುವುದು ಎಂದರು.
ಹಿರಿಯೂರು ನಗರದ ಅಭಿವೃದ್ಧಿ ಬಗ್ಗೆ ನಮಗೂ ಕಳಕಳಿ ಇರುತ್ತದೆ. ಕೊರೊನಾ ಹಿನ್ನೆಲೆಯಲ್ಲಿ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದೆ. ನಮ್ಮ ಆಡಳಿತದಲ್ಲಿ ಯಾವುದೇ ಭ್ರಷ್ಟಾಚಾರ ನಡೆದಿಲ್ಲ, ಅವರು ಶಾಸಕರಾಗಿದ್ದಾಗ ಸಂದರ್ಭದಲ್ಲಿ ಇತ್ತು ಅದಕ್ಕೆ ನೆನಪಿಸಿಕೊಂಡಿದ್ದಾರೆ, ಈಗ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರಿಗೆ ಉತ್ತಮ ಸ್ಪಂದನೆ ದೊರೆಯುತ್ತಿದೆ. ಇದನ್ನು ನಾನು ಹೇಳುತ್ತಿಲ್ಲ, ನಾನು ಹಳ್ಳಿಗಳಿಗೆ ಹೋದಾಗ ಸಾರ್ವಜನಿಕರೇ ಹೇಳುತ್ತಿರುತ್ತಾರೆ ಎಂದು ತಿಳಿಸಿದರು.
ಅವರ ಹತ್ತು ವರ್ಷಗಳ ಕಾಲದಲ್ಲಿ ಬಾಕಿ ಉಳಿಸಿಕೊಂಡಿದ್ದ 650ಕ್ಕೂ ಹೆಚ್ಚು ಹಕ್ಕಪತ್ರಗಳನ್ನು ನಾವು ಕೊಟ್ಟಿದ್ದೇವೆ. ಉತ್ತಮ ಆಡಳಿತ ಕೊಟ್ಟಿದ್ದೇವೆ ಎಂದು ತನ್ನನ್ನು ತಾನು ಹೊಗಳಿಕೊಳ್ಳುವುದಲ್ಲ, ಉತ್ತಮ ಆಡಳಿತ ಕೊಟ್ಟಿದ್ದರೆ ತಮ್ಮ ಮೇಲೆ ಸಿಬಿಐ ಕೇಸ್ ಯಾಕೆ ದಾಖಲಾಗುತ್ತಿತ್ತು ಎಂದು ಮಾಜಿ ಶಾಸಕ ಡಿ.ಸುಧಾಕರ್ ಅವರಿಗೆ ಪ್ರಶ್ನಿಸಿದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications