ಚಿತ್ರದುರ್ಗ:ಕಟ್ಟಡ ಕಾರ್ಮಿಕರ ಆರೋಗ್ಯ ಸೇವೆಗೆ ಸಂಚಾರಿ ಆರೋಗ್ಯ ಕ್ಲಿನಿಕ್
ಚಿತ್ರದುರ್ಗ,ಜು4 : ನೋಂದಾಯಿತ ಕಟ್ಟಡ ಕಾರ್ಮಿಕರು ಮತ್ತು ಅವರ ಅವಲಂಬಿತರ ಆರೋಗ್ಯ ಸೇವೆಗೆ ಸಂಚಾರಿ ಆರೋಗ್ಯ ಕ್ಲಿನಿಕ್ ಅತ್ಯಾಧುನಿಕ ಸವಲತ್ತುಗಳನ್ನು ಹೊಂದಿದೆ ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ಕಾರ್ಮಿಕರ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಲ್ಯಾಣ ಮಂಡಳಿ ವತಿಯಿಂದ ಹಮ್ಮಿಕೊಂಡಿದ್ದ ಶ್ರಮಿಕ್ ಸಂಜೀವಿನಿ-ಸಂಚಾರಿ ಆರೋಗ್ಯ ಕ್ಲಿನಿಕ್ ಸೇವೆಯ ವಾಹನಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ಸಂಚಾರಿ ಆರೋಗ್ಯ ಕ್ಲಿನಿಕ್ ಅತ್ಯಾಧುನಿಕ ಸವಲತ್ತುಗಳನ್ನು ಹೊಂದಿದೆ. ಆಧುನಿಕ ಸ್ಟ್ರೆಚ್ಚರ್, ಬೆಡ್, ಆಕ್ಸಿಜನ್ ಪರಿಕರಗಳು, ವ್ಹೀಲ್ ಚೇರ್, ಪ್ರಯೋಗಾಲಯ ಸಲಕರಣೆಗಳು, ಸಿಬ್ಬಂದಿಗೆ ಆಸನದ ವ್ಯವಸ್ಥೆ, ಅವಶ್ಯಕ ವೈದ್ಯಕೀಯ ಪರಿಕರಗಳನ್ನು ಹೊಂದಿದೆ. ಈ ವಾಹನದಲ್ಲಿ ಓರ್ವ ವೈದ್ಯ, ನರ್ಸ್, ಫಾರ್ಮಸಿಸ್ಟ್, ಲ್ಯಾಬ್ ಟೆಕ್ನಿಷಿಯನ್, ಎಎನ್ಎಮ್, ಚಾಲಕ ಮತ್ತು ಸಹಾಯಕ ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ ಎಂದರು.

ಕಟ್ಟಡ ಕಾರ್ಮಿಕರ ಆರೋಗ್ಯ ಕಾಳಜಿಗೆ ಹೆಚ್ಚಿನ ಆದ್ಯತೆ
ಕಟ್ಟಡ ಕಾರ್ಮಿಕರ ಜೀವನ ಸುಧಾರಣೆಗೆ ಅನುಕೂಲವಾಗುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರವು ಹತ್ತು ಹಲವು ಯೋಜನೆಗಳನ್ನು ಜಾರಿ ಮಾಡಲಾಗಿದ್ದು, ಅದರಂತೆ ಕಟ್ಟಡ ನಿರ್ಮಾಣ ಮತ್ತು ಇತರೆ ಕಾರ್ಮಿಕರಿಗೆ ಉತ್ತಮ ಆರೋಗ್ಯ ಸೇವೆ ನೀಡುವ ಜೊತೆಗೆ ಅವರಿದ್ದಲ್ಲಿಗೇ ಚಿಕಿತ್ಸಾಲಯವನ್ನು ಕೊಂಡೊಯ್ಯುವ ಮಹತ್ವಕಾಂಕ್ಷಿ ಯೋಜನೆ ಇದಾಗಿದ್ದು, ಕಟ್ಟಡ ಕಾರ್ಮಿಕರ ಆರೋಗ್ಯ ಕಾಳಜಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಹೇಳಿದರು. ಸಂಚಾರಿ ಆರೋಗ್ಯ ಕ್ಲಿನಿಕ್ ವಾಹನವು ಚಿತ್ರದುರ್ಗ ತಾಲ್ಲೂಕು ವ್ಯಾಪ್ತಿಯ 17 ಗ್ರಾಮಗಳಿಗೆ ಕಾರ್ಮಿಕರು ಇರುವಲ್ಲಿಗೆಯೇ ಈ ವಾಹನವು ತೆರಳಿ, ಕಾರ್ಮಿಕರು ಹಾಗೂ ಅವರ ಅವಲಂಬಿತರಿಗೆ ಉಚಿತ ಆರೋಗ್ಯ ಸೇವೆ ನೀಡುವ ಮೂಲಕ ಕಾರ್ಮಿಕರ ಹಿತ ರಕ್ಷಣೆಗೆ ಸರ್ಕಾರವು ಬದ್ಧವಾಗಿದೆ ಎಂದು ತಿಳಿಸಿದರು.

ನಿಗಧಿತ ಪ್ರದೇಶಗಳಿಗೆ ಸಂಚಾರಿ ಕ್ಲಿನಿಕ್
"ಸೋಮವಾರದಿಂದ ಶನಿವಾರದವರೆಗೆ ನಿಗದಿತ ಅವಧಿಯಲ್ಲಿ ನಿಗದಿತ ಪ್ರದೇಶಗಳಿಗೆ ಸಂಚಾರಿ ಕ್ಲಿನಿಕ್ ಜಿಲ್ಲೆಯಲ್ಲಿ ಎರಡು ವರ್ಷಗಳ ಕಾಲ ಭೇಟಿ ನೀಡಲಿದೆ. ಚಿತ್ರದುರ್ಗ ತಾಲ್ಲೂಕಿನಲ್ಲಿ ಸೋಮವಾರ ಬೆಳಗ್ಗೆ ಹೊಸ ಕಲ್ಲಹಳ್ಳಿ, ಹಳೇಕಲ್ಲಹಳ್ಳಿ, ಮಧ್ಯಾಹ್ನ ಲಿಂಗಾವರಹಟ್ಟಿ, ಮಂಗಳವಾರ ಬೆಳಿಗ್ಗೆ ಕಾಸವರಹಟ್ಟಿ, ಮಧ್ಯಾಹ್ನ ಗುಡ್ಡದರಂಗವ್ವನಹಳ್ಳಿ, ಬುಧವಾರ ಬೆಳಿಗ್ಗೆ ಮಲ್ಲಾಪುರ, ದ್ಯಾಮವ್ವನಹಳ್ಳಿ, ಮಧ್ಯಾಹ್ನ ಮದಕರಿಪುರ, ಗುರುವಾರ ಬೆಳಿಗ್ಗೆ ಬಚ್ಚಬೋರನಹಟ್ಟಿ, ಮಧ್ಯಾಹ್ನ ಮಠದಹಟ್ಟಿ, ಕಾವಡಿಗರಹಟ್ಟಿ, ಶುಕ್ರವಾರ ಬೆಳಿಗ್ಗೆ ಇಂಗಳದಾಳ್, ಕ್ಯಾದಿಗೆರೆ, ಮಧ್ಯಾಹ್ನ ದೊಡ್ಡಸಿದ್ದವ್ವನಹಳ್ಳಿ, ಶನಿವಾರ ಬೆಳಗ್ಗೆ ಜಾನುಕೊಂಡ, ಸಿದ್ದಾಪುರ, ಮಧ್ಯಾಹ್ನ ದಂಡಿನಕುರುಬರಹಟ್ಟಿ ಗ್ರಾಮಗಳಿಗೆ ಭೇಟಿ ನೀಡಲಿದೆ ಎಂದರು".
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications