ಭಾಗ್ಯಗಳ ಹೆಸರಿನಲ್ಲಿ ರಾಜ್ಯಕ್ಕೆ ದೌರ್ಭಾಗ್ಯ ತಂದಿದ್ದಾರೆ: ಪ್ರತಾಪ್ ಸಿಂಹ

ಚಿತ್ರದುರ್ಗ, ನವೆಂಬರ್ 28: ಮಾಜಿ ಸಿಎಂ ಸಿದ್ದರಾಮಯ್ಯನವರು ಭಾಗ್ಯಗಳ ಹೆಸರಿನಲ್ಲಿ ರಾಜ್ಯಕ್ಕೆ ದೌರ್ಭಾಗ್ಯ ತಂದಿಟ್ಟಿದ್ದಾರೆ ಎಂದು ಹೇಳಿದ್ದಾರೆ ಸಂಸದ ಪ್ರತಾಪ್ ಸಿಂಹ.

ಚಿತ್ರದುರ್ಗದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರಾವಳಿಯಲ್ಲಿ ರಿಯಾಜ್ ಭಟ್ಕಳ್, ಯಾಸೀನ್ ಭಟ್ಕಳ್ ಗಳಿಂದ ದೇಶ ವಿರೋಧಿ ಚಟುವಟಿಕೆಗೆ ಕುಮ್ಮಕ್ಕು ನೀಡುತ್ತಿದ್ದಾರೆ. ಕೇರಳ ಮಾದರಿ ಕೊಲೆಗಳು ಸಹ ಮಂಗಳೂರಿನಲ್ಲೇ ಆರಂಭವಾಗಿದೆ. ಈಗ ರಾಜ್ಯದಾದ್ಯಂತ ಕೇರಳ ಮಾದರಿ ಕೊಲೆಗಳು ಹರಡಿದೆ. ಗೃಹ ಸಚಿವರು, ‌ಸಿಎಂ ಈ ಬಗ್ಗೆ ಕ್ರಮ ವಹಿಸಬೇಕು ಎಂದು ತಿಳಿಸಿದರು.

Chitradurga: MP Pratap Simha Reaction To Siddaramaiah Statement Regarding BJP

ಈಗಿನ ಬಿಜೆಪಿ ಸರ್ಕಾರ ದಿವಾಳಿಯಾಗಿದೆ ಎಂದಿದ್ದ ಸಿದ್ದರಾಮಯ್ಯ ಅವರ ಹೇಳಿಕೆಗೆ ತಿರುಗೇಟು ನೀಡಿ, ಬಿಜೆಪಿ ಸರ್ಕಾರ ದಿವಾಳಿ ಆಗಿದೆ ಎಂದ ಸಿದ್ದರಾಮಯ್ಯ ಅವರಿಗೆ ನೈತಿಕತೆ ಇಲ್ಲ. ಭಾಗ್ಯಗಳ ಹೆಸರಿನಲ್ಲಿ ರಾಜ್ಯಕ್ಕೆ ದೌರ್ಭಾಗ್ಯ ತಂದಿದ್ದಾರೆ. ಬಿಜೆಪಿ ಸರ್ಕಾರದ ಬಗ್ಗೆ ಮಾತನಾಡುವ ಅರ್ಹತೆ ಯಾವುದೂ ಅವರಿಗೆ ಇಲ್ಲ ಎಂದಿದ್ದಾರೆ. ಅವರ ಅವಧಿಯಲ್ಲಿ ರಾಜ್ಯದ ಸ್ಥಿತಿ ಹೇಗಿತ್ತು ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.

Recommended Video

      Hardik Pandya ಕೇವಲ ಬ್ಯಾಟ್‌ನಿಂದಲೇ ಪಂದ್ಯ ಗೆಲ್ಲಿಸ ಬಲ್ಲರು | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+