ಹೇಳಿಕೆ ದಾಖಲಿಸಲು ಸಿದ್ಧರಾದ ಸಂತ್ರಸ್ತೆಯರು; ಮುರುಘಾ ಶ್ರೀಗಳಿಗೆ ಬಂಧನ ಭೀತಿ
ಚಿತ್ರದುರ್ಗ, ಆ. 28: ಮುರುಘಾ ಮಠದ ಡಾ. ಶಿವಮೂರ್ತಿ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಹೊರಸಿರುವ ಪ್ರಕರಣ ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ವರ್ಗಾಯಿಸಿದ ಬೆನ್ನಲ್ಲೇ ಇಬ್ಬರು ಬಾಲಕಿಯರನ್ನು ಮೈಸೂರಿನಿಂದ ಚಿತ್ರದುರ್ಗಕ್ಕೆ ಕರೆದೊಯ್ಯಲಾಗಿದೆ. ಚಿತ್ರದುರ್ಗ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಇಬ್ಬರು ಶಾಲಾ ಬಾಲಕಿಯರನ್ನು ಒಪ್ಪಿಸಲಾಗಿದೆ.
ಇಬ್ಬರು ಶಾಲಾ ಬಾಲಕಿಯರಿಗೆ ಲೈಂಗಿಕ ಕಿರುಕುಳ ಪ್ರಕರಣ ಭಾನುವಾರ ತೀವ್ರ ಸ್ವರೂಪ ಪಡೆದುಕೊಂಡಿದೆ. ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ ಸೇರಿದಂತೆ ಆರೋಪಿಗಳಿಗೆ ಬಂಧನ ಭೀತಿ ಎದುರಾಗಿದೆ.
ಮುರುಘಾ ಮಠದ ಸ್ವಾಮೀಜಿ ಸೇರಿದಂತೆ ಹಲವರ ವಿರುದ್ಧ ಬಾಲಕಿಯರ ಹೇಳಿಕೆ ಆಧರಿಸಿ ಮಕ್ಕಳ ಕಲ್ಯಾಣ ಸಮಿತಿ ದೂರು ನೀಡಿದ ಬೆನ್ನಲ್ಲೇ ಎಫ್ಐಆರ್ ದಾಖಲಾಗಿತ್ತು. ಸದ್ಯ ಇಲ್ಲಿನ ಬಾಲಕಿಯರ ಬಾಲ ಮಂದಿರದಲ್ಲಿ ಆಶ್ರಯ ಪಡೆದಿರುವ ಮಕ್ಕಳನ್ನು ಭಾನುವಾರ ಸಂಜೆ ವೇಳೆಗೆ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ ಹೇಳಿಕೆ ದಾಖಲಿಸಲಾಗುತ್ತದೆ. ಅ ಬಳಿಕ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ ಎಂದು ತಿಳಿದು ಬಂದಿದೆ. ವೈದ್ಯಕೀಯ ಪರೀಕ್ಷೆಯ ಬಳಿಕ ಮುರುಘಾ ಶ್ರೀಗಳು ಸೇರಿದಂತೆ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆಯುವ ಸಾಧ್ಯತೆಯಿದೆ.

ಇತರೆ ಬಾಲಕಿಯರ ಹೇಳಿಕೆ ದಾಖಲು: ಡಾ. ಶಿವಮೂರ್ತಿ ಮುರುಘಾ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಎಸಗಿ ದೂರು ನೀಡಿರುವ ಶಾಲಾ ಬಾಲಕಿಯರ ಆಪ್ತರು ಒಳಗೊಂಡಂತೆ ಮಠದ ಹಲವು ವಿದ್ಯಾರ್ಥಿಗಳ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ.
ಬೆದರಿಕೆ, ಪ್ರಭಾವ: ಇಬ್ಬರ ಶಾಲಾ ಬಾಲಕಿಯರು ಡಾ. ಶಿವಮೂರ್ತಿ ಮುರುಘಾ ಶರಣರು ನೀಡಿರುವ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಪ್ರಭಾವಿಗಳು ಒಡನಾಡಿ ಸ್ವಯಂ ಸೇವಾ ಸಂಸ್ಥೆಗೆ ಒತ್ತಡ ಹಾಕಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಇದನ್ನು ಒಡನಾಡಿ ಸಂಸ್ಥೆಯ ಮುಖ್ಯಸ್ಥರಾದ ಪರುಶುರಾಂ ಮಾಧ್ಯಮಗಳಿಗೆ ಪ್ರತಿಕ್ರಿಯೆ ನಡೆದಿದ್ದಾರೆ.

ಪ್ರಭಾವಿ ಮಠ: ಚಿತ್ರದುರ್ಗದ ಮುರುಘಾ ಶ್ರೀ ಮಠ ರಾಜ್ಯದ ಅತ್ಯಂತ ಪ್ರಭಾವಿ ಮಠಗಳಲ್ಲಿ ಒಂದು. ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಸೇರಿದಂತೆ ದೇಶದ ಪ್ರಭಾವಿ ನಾಯಕರೇ ಈ ಮಠಕ್ಕೆ ಹೊಗಿ ಬಂದಿದ್ದರು. ಇತ್ತೀಚೆಗೆ ಅಮಿತ್ ಶಾ ಸಹ ಭೇಟಿ ನೀಡಿ ಗಮನ ಸೆಳೆದಿದ್ದರು. ಇದೀಗ ಮಠದ ಶ್ರೀಗಳು ಶಾಲಾ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣ ಹೊರ ಬಂದಿದ್ದು, ಸ್ವಾಮೀಜಿ ಬಂಧನಕ್ಕೆ ಒಳಗಾಗುವ ಸಾಧ್ಯತೆಯಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications