Murugha Mutt Seer POCSO Case: ಮುರುಘಾ ಶರಣರ ಪೋಕ್ಸೋ ಪ್ರಕರಣ-ಮನೆಯಿಂದ ಸಂತ್ರಸ್ಥೆ ಬಾಲಕಿ ನಾಪತ್ತೆ.!
ಚಿತ್ರದುರ್ಗ, ಮೇ, 28: ನಗರದ ಹೊರವಲಯದಲ್ಲಿರುವ ಮುರುಘಾ ಮಠದ ಡಾ.ಶಿವಮೂರ್ತಿ ಶರಣರ ವಿರುದ್ಧದ ಲೈಂಗಿಕ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯಾಗಿದ್ದ ಬಾಲಕಿ ಮನೆಯಿಂದ ನಾಪತ್ತೆಯಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದ್ದು, ಇದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಮುರುಘಾ ಶ್ರೀ ಪೋಕ್ಸೋ ಪ್ರಕರಣದ ಸಂತ್ರಸ್ತ ಬಾಲಕಿ ಚಿಕ್ಕಪ್ಪನ ಮನೆಯಿಂದ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಮುರುಘಾ ಶ್ರೀ 1 ಫೋಕ್ಸೋ ಕೇಸ್ಗೆ ಮತ್ತೊಂದು ತಿರುವು ಪಡೆದುಕೊಳ್ಳುತ್ತಿದ್ದು, ಸಂತ್ರಸ್ತ ಬಾಲಕಿ ಮೇಲೆ ಸಂಬಂಧಿಕರು ಒತ್ತಡ ಹಾಕ್ತಿದ್ದಾರಾ ಎನ್ನುವ ಅನುಮಾನಗಳು ವ್ಯಕ್ತವಾಗುತ್ತಿವೆ.

ಒಂದನೇ ಫೋಕ್ಸ್ ಕೇಸ್ನ ಸಂತ್ರಸ್ತ ಬಾಲಕಿ ಚಿಕ್ಕಪ್ಪನ ವಿರುದ್ದವೇ ದೂರು ಕೇಳಿ ಬಂದಿದೆ. ಮನೆಯಲ್ಲಿ ದೈಹಿಕ & ಮಾನಸಿಕ ಹಿಂಸೆ ನೀಡುತ್ತಿದ್ದಾರೆಂದು ದೂರು ಕೇಳಿಬಂದಿದೆ ಎಂದು ತಿಳಿದುಬಂದಿದೆ. ಮೇ 22ರಂದು ಮನೆಯಿಂದ ಮಿಸ್ಸಿಂಗ್ ಆಗಿ ಒಡನಾಡಿ ಸಂಸ್ಥೆಯ ಮುಂದೆ ಬಾಲಕಿ ಹೋಗಿದ್ದರು. ಸಂಸ್ಥೆಯ ಜೊತೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮುಂದೆ ಸಂತ್ರಸ್ತ ಬಾಲಕಿ ಬಂದಿದ್ದರು.
ನನ್ನ ಮತ್ತು ತಮ್ಮನ ಮೇಲೆ ಮನೆಯಲ್ಲಿ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ನಮ್ಮನ್ನು ರಕ್ಷಣೆ ಮಾಡಿ ಎಂದು CWC ಮುಂದೆ ಬಾಲಕಿ ಮನವಿ ಮಾಡಿದ್ದಾರೆ. ಒಡನಾಡಿ ಸಂಸ್ಥೆಯ ಸ್ಟಾನ್ಲಿ ಜೊತೆ ಬಾಲಕಿ ಆಗಮಿಸಿದ್ದಳು. ನಂತರ ಚಿತ್ರದುರ್ಗದ ಬಾಲಕಿಯರ ಬಾಲ ಭವನದಲ್ಲಿ ಸಂತ್ರಸ್ತ ಬಾಲಕಿಯ ಆಪ್ತ ಸಮಾಲೋಚನೆ ನಡೆಸಿದ್ದರು ಎಂದು ಅಧಿಕೃತವಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸವಿತ ಮಾಹಿತಿ ನೀಡಿತ್ತು.
ಆಡಳಿತ ಸಮಿತಿ ಅಧ್ಯಕ್ಷರ ನೇಮಕ: ಇತ್ತೀಚೆಗಷ್ಟೇ ಮುರುಘಾ ಮಠದ ಆಡಳಿತದಲ್ಲಿ ಬದಲಾವಣೆಯಾಗಿದ್ದು, ಸುಪ್ರೀಂ ಕೋರ್ಟ್ ಗಡುವು ನೀಡಿದ ನಿರ್ದೇಶನದಂತೆ ರಾಜ್ಯ ಸರ್ಕಾರ ಎಸ್ಜೆಎಂ ವಿದ್ಯಾಪೀಠದ ಆಡಳಿತ ನಿರ್ವಹಣೆಗೆ ನಿವೃತ್ತ ಐಎಎಸ್ ಅಧಿಕಾರಿ ಸಿ.ಶಿವಯೋಗಿ ಕಳಸದ ಅವರನ್ನು ನೇಮಕ ಮಾಡಲಾಗಿತ್ತು. ಸಮಿತಿಯನ್ನು ನೇಮಕ ಮಾಡಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿತ್ತು.
ಫೆಬ್ರವರಿ 27ರಂದು ಸುಪ್ರೀಂ ಕೋರ್ಟ್ ಮಠ ಹಾಗೂ ಎಸ್ಜೆಎಂ ವಿದ್ಯಾಪೀಠದ ಆಡಳಿತ ನಿರ್ವಹಣೆಗೆ ಮೂರು ದಿನಗಳಲ್ಲಿ ಸಮಿತಿ ರಚನೆ ಮಾಡಲು ಆದೇಶಿಸಿತ್ತು. ಅದರಂತೆ ಮಠ ಹಾಗೂ ಎಸ್.ಜೆ.ಎಂ.ವಿದ್ಯಾಪೀಠದ ಆಡಳಿತಾಧಿಕಾರಿಯಾಗಿ ನೇಮಕ ಮಾಡಲಾಗಿತ್ತು.
ಇನ್ನು ಪೋಕ್ಸೊ ಕಾಯ್ದೆಯಡಿಯಲ್ಲಿ ಜೈಲು ಸೇರಿ, ಜಾಮೀನಿನ ಮೇರೆಗೆ ಬಿಡುಗಡೆಯಾಗಿರುವ ಮುರುಘಾ ಶರಣರು ಮಠ ಹಾಗೂ ವಿದ್ಯಾಪೀಠದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು ಎಂದು ಹಿರಿಯೂರಿನ ಮಾಜಿ ಸಚಿವ ಹೆಚ್.ಏಕಾಂತಯ್ಯ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಇವರ ಅರ್ಜಿಯನ್ನು ಪರಿಶೀಲಿಸಿದ ಸುಪ್ರೀಂಕೋರ್ಟ್ ಫೆಬ್ರವರಿ 27ರಂದು ಮಹತ್ವದ ತೀರ್ಪು ನೀಡಿ, ರಾಜ್ಯ ಸರ್ಕಾರಕ್ಕೆ ತಿಳಿಸಿತ್ತು. ಅದರಂತೆಯೇ ರಾಜ್ಯ ಸರ್ಕಾರ ಆಡಳಿತಾಧಿಕಾರಿಯನ್ನು ನೇಮಕ ಮಾಡಲಾಗಿತ್ತು.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications