ಮುರುಘಾ ಶ್ರೀ ಪ್ರಕರಣ: ಎಡಿಜಿಪಿಗೆ ಪತ್ರ ಬರೆದ ಮಠದ ವಕ್ತಾರ
ಚಿತ್ರದುರ್ಗ, ನವೆಂಬರ್ 25 : ಮುರುಘಾ ಮಠದ ಅಪ್ರಾಪ್ತ ಬಾಲಕಿಯರ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಒಡನಾಡಿ ಸಂಸ್ಥೆ ಮುಖ್ಯಸ್ಥರಾದ ಸ್ಟ್ಯಾನ್ಲಿ ಮತ್ತು ಪರುಶುರನ್ನು ತನಿಖೆಗೆ ಒಳಪಡಿಸಿ, ಕಾನೂನು ಕ್ರಮ ಜರುಗಿಸಬೇಕು ಹಾಗೂ ಒಡನಾಡಿ ಸಂಸ್ಥೆಯಲ್ಲಿರುವ ಅಪ್ರಾಪ್ತ ಬಾಲಕಿಯರನ್ನು ಬಿಡುಗಡೆಗೊಳಿಸುವಂತೆ ಶ್ರೀಮಠದ ವಕ್ತಾರ ಜೀತೇಂದ್ರ ಅವರು ಎಡಿಜಿಪಿಗೆ ಪತ್ರ ಬರೆದಿದ್ದಾರೆ.
ಡಾ. ಮುರುಘಾ ಶರಣರು ಜೈಲಿಗೆ ಹೋಗಲು ಒಡನಾಡಿ ಸಂಸ್ಥೆ ಪಿತೂರಿಯಿದ್ದು, ಸ್ಟ್ಯಾನ್ಲಿ ಮತ್ತು ಪರುಶು ಇವರಿಬ್ಬರ ಷಡ್ಯಂತ್ರ ಇದೆ ಎಂದು ಮೇಲುನೋಟಕ್ಕೆ ಕಂಡು ಬರುತ್ತಿದೆ ಎಂದಿದ್ದಾರೆ.
ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿರುವ ಮುರುಘಾ ಶರಣರ ವಿರುದ್ಧ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಒಡನಾಡಿ ಸಂಸ್ಥೆ ಹಾಗೂ ಮುಖ್ಯಸ್ಥರು ಎ3 ಆರೋಪಿಗಳಾಗಿದ್ದಾರೆ. ಸಂತ್ರಸ್ತ ಬಾಲಕಿಯರ ತಾಯಿ ಎ2 ಆರೋಪಿಯಾಗಿದ್ದಾರೆ ಎಂದಿದ್ದಾರೆ.

ಪಿತೂರಿ ಆರೋಪ ಇರುವ ಒಡನಾಡಿ ಸಂಸ್ಥೆಯಲ್ಲಿ ಸಂತ್ರಸ್ತ ಬಾಲಕಿಯರು ಮತ್ತು ತಾಯಿ ಇರುವುದು ಅನುಮಾನಕ್ಕೆ ಆಸ್ಪದವಾಗಿದ್ದು, ಸಂತ್ರಸ್ತ ಬಾಲಕಿಯರಿಗೆ ಒಡನಾಡಿ ಸಂಸ್ಥೆಯವರು ಪ್ರಚೋದಿಸುತ್ತಿದ್ದಾರೆ ಎನ್ನಿಸುತ್ತಿದೆ. ಹಾಗಾಗಿ ತಕ್ಷಣ ಸಂತ್ರಸ್ತ ಬಾಲಕಿಯರನ್ನು ಸರ್ಕಾರದ ಯಾವುದಾದರೂ ಇಲಾಖೆ ಆಶ್ರಯದಲ್ಲಿ ಇಡಬೇಕೆಂದು ಪತ್ರದಲ್ಲಿ ಮನವಿ ಮಾಡಿದ್ದಾರೆ
ಮೈಸೂರಿನ ಸಿಡ್ಲ್ಯುಯುಸಿ ನಡೆಯೂ ಕೂಡ ಅನುಮಾನ ಆಸ್ಪದವಾಗಿದೆ ಇವರನ್ನು ತನಿಖೆಗೆ ಒಳಪಡಿಸಿ, ಜೊತೆಗೆ ಒಡನಾಡಿ ಸಂಸ್ಥೆಯವರು ಬಾಲಕಿಯರಿಗೆ ನ್ಯಾಯಾ ಕೊಡಿಸುವ ನೆಪದಲ್ಲಿ ಮುರುಘಾ ಶ್ರೀಗಳ ವಿರುದ್ಧ ಮಾದಕ ವಸ್ತುಗಳ ಬಳಕೆ, ಇಂಜೆಕ್ಷನ್ಗಳ ಬಳಕೆ, ಕುಡಿತ ಆರೋಪ ಸೇರಿದಂತೆ ಇಲ್ಲಸಲ್ಲದ ಆರೋಪ ಮಾಡಿದ್ದಾರೆ. ಇದರಿಂದ ಭವ್ಯಪರಂಪರೆವುಳ್ಳ ಮಠಕ್ಕೆ ಕಳಂಕ ತರುವ ವ್ಯವಸ್ಥಿತ ಸಂಚು ರೂಪಿಸಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇನ್ನು ಮುರುಘಾ ಮಠದಲ್ಲಿನ ಮಕ್ಕಳ ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಅದರೆ ಮಠದಲ್ಲಿದ್ದ ಮಕ್ಕಳನ್ನು ಸರ್ಕಾರವು ಕಾನೂನು ಬದ್ಧವಾಗಿ ಕ್ರಮ ಜರುಗಿಸಿ ಸ್ಥಳಾಂತರ ಮಾಡಿರುವುದು ದಾಖಲೆಯಲ್ಲಿದೆ. ಆದರೆ ಇವರು ಮಕ್ಕಳು ನಾಪತ್ತೆಯಾಗಿದ್ದಾರೆಂದು ಹೇಳುವ ಮೂಲಕ ಪೊಲೀಸ್, ಜಿಲ್ಲಾಡಳಿತಕ್ಕೆ ಅವಮಾನ ಮಾಡಿದಂತಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications