ಚಿತ್ರದುರ್ಗ: ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆ ದಿನದಂದೇ 5 ತಿಂಗಳ ಮಗುವಿಗೆ ನಾಮಕರಣ
ಚಿತ್ರದುರ್ಗ, ಜನವರಿ, 22: ಸೋಮವಾರವಾದ ಇಂದು (ಜನವರಿ 22) ಅಯೋಧ್ಯೆ ರಾಮಮಂದಿರ ಉದ್ಘಾಟನೆ ಹಿನ್ನೆಲೆ ಇಡೀ ದೇಶಾದ್ಯಂತ ಸಂಭ್ರಮಾಚರಣೆಯ ಮುಗಿಲು ಮುಟ್ಟಿದೆ. ವಿಶೇಷ ಪೂಜೆ, ಭಜನೆ, ಮಂತ್ರ ಪಠಣ, ಪ್ರಸಾದ ವಿತರಣೆ ಸೇರಿದಂತೆ ಅನೇಕ ಕಾರ್ಯಕ್ರಮ ಹಮ್ಮಿಕೊಳು ನಡೆಯುತ್ತಿವೆ. ಅದರಂತೆಯೇ ಕೋಟೆ ನಾಡು ಚಿತ್ರದುರ್ಗದಲ್ಲಿಲೂ ವಿಶೇಷ ಕಾರ್ಯಕ್ರಮವೊಂದು ನಡೆಯಿತು. ಶ್ರೀ ರಾಮಮಂದಿರ ಉದ್ಘಾಟನೆ ಅಂಗವಾಗಿ ಮಗುವಿಗೆ ಇಂದೇ ನಾಮಕರಣ ಮಾಡಲಾಗಿದೆ.
ಹೌದು ಚಿತ್ರದುರ್ಗ ಗಾಂಧಿನಗರದ ಸಾಗರ್ ಅವರು ಭಾವನಾ ಎಂಬುವರೊಂದಿಗೆ ಮದುವೆಯಾಗಿದೆ. ಮದುವೆಯ ನಂತರ ಭಾವನಾ ಅವರು 2023, ಸೆಪ್ಟೆಂಬರ್ 22ರಂದು ಗುಂಡು ಮಗುವಿಗೆ ಜನ್ಮ ನೀಡಿದ್ದಾರೆ. ಇಂದಿಗೆ ಮಗುವಿಗೆ 5 ತಿಂಗಳು ತುಂಬಿದ್ದು, ರಾಮಮಂದಿರ ಉದ್ಘಾಟನೆಯ ಸಂದರ್ಭದಲ್ಲಿ ಮಗುವಿಗೆ "ಶ್ರೀರಾಮ್" ಎಂದು ನಾಮಕರಣ ಮಾಡಿದ್ದಾರೆ.

ತಂದೆ ಸಾಗರ್ ಮೆಡಿಕಲ್ ರೆಪ್ರೆಸೆಂಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಪತ್ನಿ ಭಾವನಾ ಗೃಹಿಣಿಯಾಗಿದ್ದಾರೆ ಎನ್ನಲಾಗಿದೆ. ಇವರಿಬ್ಬರೂ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ತನ್ನ ಪುತ್ರನಿಗೆ ಅಯೋಧ್ಯೆ ರಾಮಮಂದಿರ ಪೂಜೆ ಸಮಯದಲ್ಲಿ ಮಗುವಿಗೆ ಶಾಸ್ತ್ರೋಕ್ತವಾಗಿ ನಾಮಕರಣ ಮಾಡಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ.
ಇನ್ನು ಈ ಬಗ್ಗೆ ಒನ್ ಇಂಡಿಯಾ ನ್ಯೂಸ್ ಜೊತೆ ಮಾತನಾಡಿ ಖುಷಿ ಹಂಚಿಕೊಂಡಿರುವ ತಾಯಿ ಭವನಾ "ಇಂದು ಅಯೋಧ್ಯೆ ರಾಮಮಂದಿರ ಉದ್ಘಾಟನೆ ಹಿನ್ನೆಲೆ ದೇಶಾದ್ಯಂತ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಇದು ಒಳ್ಳೆಯ ದಿನ ಆಗಿರುವುದರಿಂದ ಕುಟುಂಬದ ಸದಸ್ಯರು ಸೇರೀ ಮಗುವಿನ ಹೆಸರಿನ ಬಗ್ಗೆ ತಿರ್ಮಾನ ಮಾಡಲಾಯಿತು", ಎಂದರು.
ಅಯೋಧ್ಯೆ ರಾಮ ಮಂದಿರದಲ್ಲಿ ಶ್ರೀರಾಮನ ಪ್ರತಿಷ್ಠಾಪನೆ ಜರುಗಿದ ಸಮಯದಲ್ಲಿ ಮಗನಿಗೆ ಶ್ರೀರಾಮ್ ಎಂದು ನಾಮಕರಣ ಮಾಡಲಾಯಿತು. ಮನೆಯಲ್ಲಿ ಸತ್ಯನಾರಾಯಣ ಪೂಜೆ ನಡೆಸಿ ನಾಮಕರಣ ಮಾಡಲಾಯಿತು. ಇದರಿಂದ ಮನೆಯಲ್ಲಿ ಎಲ್ಲರೂ ಖುಷಿಯಾಗಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications