ನವೆಂಬರ್ 02ರಿಂದ ಸಾಣೇಹಳ್ಳಿಯಲ್ಲಿ ರಾಷ್ಟ್ರೀಯ ನಾಟಕೋತ್ಸವ
ಹೊಸದುರ್ಗ, ಅಕ್ಟೋಬರ್ 29: ಸಾಣೇಹಳ್ಳಿಯಲ್ಲಿ ನಡೆಯುವ ರಾಷ್ಟ್ರೀಯ ನಾಟಕೋತ್ಸವವನ್ನು ನವೆಂಬರ್ 02 ರಿಂದ 07ರ ತನಕ 6 ದಿನಗಳ ಕಾಲ ಅಯೋಜಿಸಲಾಗಿದೆ ಎಂದು ಡಾ. ಶ್ರೀ ಪಂಡಿತಾರಾಧ್ಯ ಸ್ವಾಮೀಜಿ ಹೇಳಿದ್ದಾರೆ.
ಶ್ರೀಬಸವ ಗುರು ಮಹಾಮನೆಯಲ್ಲಿ ಈಚೆಗೆ ಹಮ್ಮಿಕೊಂಡಿದ್ದ 2019ರ ರಾಷ್ಟ್ರೀಯ ನಾಟಕೋತ್ಸವ ಪೂರ್ವ ಸಿದ್ಧತೆ ಕುರಿತಂತೆ ನಡೆದ ಸಭೆಯ ಸಾನ್ನಿಧ್ಯ ವಹಿಸಿ ಶ್ರೀಪಂಡಿತಾರಾಧ್ಯ ಸ್ವಾಮೀಜಿ ಅವರು ಮಾತನಾಡಿದರು. ನಾಟಕೋತ್ಸವ ಆಯೋಜನೆ ಬಗ್ಗೆ ಅನುಮಾನ ವ್ಯಕ್ತವಾಗಿತ್ತು. ಆದರೆ ನಾಟಕೋತ್ಸವ ನಿಲ್ಲಿಸುವ ಕುರಿತ ಯೋಚಿಸಲೇ ಬಾರದೆಂಬ ಎಚ್ಚರಿಕೆ ನೀಡಿದಂತೆ ಭಾಸವಾಗಿದೆ. ಈ ನಾಟಕೋತ್ಸವ ನಮಗಾಗಿ ಅಲ್ಲ, ಸಮಾಜಕ್ಕಾಗಿ, ಹೀಗಾಗಿ ನಾವು ಹಿಂದೆ ಸರಿಯುವುದರಲ್ಲಿ ಅರ್ಥವಿಲ್ಲ. ನವೆಂಬರ್ 02ರಿಂದ 6 ದಿನಗಳ ಕಾಲ ನಾಟಕೋತ್ಸವ ನಡೆಯಲಿದೆ ಎಂದರು.

ನಾಟಕೋತ್ಸವದ ಜೊತೆಗೆ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಗುಣಮಟ್ಟದ ಕೆಲ ಚಲನಚಿತ್ರಗಳ ಪ್ರದರ್ಶನಕ್ಕೂ ವ್ಯವಸ್ಥೆ ಮಾಡಲಾಗುವುದು ಎಂದರು. ನಾಟಕದ ಜೊತೆ ಪ್ರತಿದಿನ ಸಾಮೂಹಿಕ ಪ್ರಾರ್ಥನೆ, ಚಿಂತನ, ವಚನ ಗೀತೆ, ಉಪನ್ಯಾಸ ಕಾರ್ಯಕ್ರಮಗಳಿದ್ದು ಅವುಗಳನ್ನು ವೀಕ್ಷಿಸಬಹುದಾಗಿದೆ.
ಸಭೆಯಲ್ಲಿ ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್, ಮಾಜಿ ಶಾಸಕ ಇಲ್ಕಲ್ ವಿಜಯಕುಮಾರ್, ಕಡೂರು ಶಾಸಕ ಕೆ.ಬಿ ಮಲ್ಲಿಕಾರ್ಜುನ, ಚಿತ್ರದುರ್ಗ ಮಂಜುನಾಥ್, ಕಡೂರು ಶಾಸಕ ಬೆಳ್ಳಿ ಪ್ರಕಾಶ್, ಶಾಸಕ ಸುರೇಶ್, ಹೊಳೆಲ್ಕೆರೆ ಮಾಜಿ ಶಾಸಕ ರಮೇಶ್, ನಿವೃತ್ತ ಡಿವೈಎಸ್ಪಿ ಪಿ ಅಜ್ಜಪ್ಪ, ಸಿ.ಕೆ ಸ್ವಾಮಿ, ಜಿ. ಪಂ ಸದಸ್ಯ ಅಜ್ಜಪ್ಪ, ಅಜ್ಜಂಪುರದ ಎಸಿ ಚಂದ್ರಪ್ಪ ಮುಂತಾದವರು ಉಪಸ್ಥಿತರಿದ್ದು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications