ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಜಾತ್ರೆಯ ಮುಕ್ತಿ ಬಾವುಟ ಹರಾಜು
ಚಿತ್ರದುರ್ಗ, ಮಾರ್ಚ್ 12: ಕರ್ನಾಟಕದ ಎರಡನೇ ಅತಿ ದೊಡ್ಡ ರಥೋತ್ಸವ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಪವಾಡ ಪುರುಷ ತಿಪ್ಪೇರುದ್ರಸ್ವಾಮಿ ರಥೋತ್ಸವ. ಇಂದು ಬಹಳ ವಿಜೃಂಭಣೆಯಿಂದ ಲಕ್ಷಾಂತರ ಭಕ್ತರ ಮಧ್ಯೆ ಜರುಗಿತು.
ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸಿದ್ದ ಸಾವಿರಾರು ಭಕ್ತರು ತಿಪ್ಪೇರುದ್ರಸ್ವಾಮಿ ಜಯಘೋಷಗಳೊಂದಿಗೆ, ತಮಟೆ ಸದ್ದು, ಓಲಗ, ವಿವಿಧ ವಾದ್ಯಗಳ ಮಂತ್ರ ಘೋಷಣೆಗಳೊಂದಿಗೆ ಭಕ್ತರು ರಥವನ್ನು ಎಳೆದರು.
ಇಂದು ಬೆಳಿಗ್ಗೆಯಿಂದಲೇ ತಿಪ್ಪೇರುದ್ರಸ್ವಾಮಿಯ ವಿವಿಧ ಪೂಜಾ ಕೈಂಕರ್ಯಗಳು ಆರಂಭಗೊಂಡಿದ್ದವು. ತಿಪ್ಪೇರುದ್ರಸ್ವಾಮಿಯ ರಥಕ್ಕೆ ವಿವಿಧ ಬಣ್ಣಗಳ ಮೂಲಕ ಶೃಂಗಾರ ಮಾಡಿ, ಭಕ್ತರನ್ನು ಆಕರ್ಷಿಸುವಂತೆ ಮಾಡಿದ್ದವು. ರಥೋತ್ಸವಕ್ಕೆ ವಿಶೇಷ ಪೂಜೆ ಸಲ್ಲಿಸಿದ ನಂತರ ರಥ ಎಳೆಯಲು ಚಾಲನೆ ನೀಡಲಾಯಿತು.

ತಿಪ್ಪೇರುದ್ರಸ್ವಾಮಿಯ ಬ್ರಹ್ಮ ರಥೋತ್ಸವ ಬಹಳ ವಿಜೃಂಭಣೆಯಿಂದ ಜರುಗಿದ್ದು, ಸ್ವಾಮಿಯ ಮುಕ್ತಿ ಬಾವುಟವನ್ನು ಶಿವಮೊಗ್ಗ ಹಾಲು ಒಕ್ಕೂಟದ ಸದಸ್ಯ, ಚಳ್ಳಕೆರೆಯ ಕಾಂಗ್ರೆಸ್ ಮುಖಂಡ ಸಿ.ವೀರಭದ್ರ ಬಾಬು 26 ಲಕ್ಷ ರುಪಾಯಿಗೆ ಮುಕ್ತಿ ಬಾವುಟವನ್ನು ಪಡೆದುಕೊಂಡಿದ್ದಾರೆ.
ಕಳೆದ ಬಾರಿಗಿಂತ ಈ ಬಾರಿ ಮುಕ್ತಿ ಬಾವುಟ ಕಡಿಮೆಗೆ ಬೆಲೆಗೆ ಹರಾಜು ಆಗಿದೆ. ರಾಜ್ಯ ಮತ್ತು ಹೊರ ರಾಜ್ಯದ ಲಕ್ಷಾಂತರ ಭಕ್ತರು ಜಾತ್ರೆಗೆ ಆಗಮಿಸಿದ್ದರು.

ಜಾತ್ರೆಯಲ್ಲಿ ಆರೋಗ್ಯ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಜಾತ್ರೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಡಳಿತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಭಾಗವಹಿಸಿದ್ದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications