ವೈಭವದಿಂದ ಜರುಗಿದ ನಾಯಕನಹಟ್ಟಿ ತಿಪ್ಪೇಶನ ರಥೋತ್ಸವ, ಮುಕ್ತಿ ಬಾವುಟ ಯಾರ ಪಾಲಾಯ್ತು ಹಾಗೂ ಎಷ್ಟು ಲಕ್ಷ?
ಚಿತ್ರದುರ್ಗ, ಮಾರ್ಚ್, 26: ಮದ್ಯ ಕರ್ನಾಟಕದ ಬುಡಕಟ್ಟು ಸಮುದಾಯಗಳ ಆರಾಧ್ಯ ದೈವ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿಯ ಮಾಡಿದಷ್ಟು ನೀಡು ಭಿಕ್ಷೆ ಹಟ್ಟಿ ತಿಪ್ಪೇಶನ ರಥೋತ್ಸವ ಮಂಗಳವಾರ (ಮಾರ್ಚ್ 26) ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಬಹಳ ವಿಜೃಂಭಣೆಯಿಂದ ನೆರವೇರಿತು.
ಮಠ ಮಠ ಮಧ್ಯಾಹ್ನವೇ ಬೀಸಿಲು, ಗಾಳಿ, ಧೂಳು ಯಾವುದನ್ನು ಲೆಕ್ಕಿಸದೆ ಹಟ್ಟಿ ತಿಪ್ಪೇಶನ ರಥೋತ್ಸವಕ್ಕೆ ಬೆಳಗ್ಗೆಯಿಂದಲೇ ಲಕ್ಷಾಂತರ ಭಕ್ತರು ಸಾಗರೋಪದಿಯಲ್ಲಿ ಸೇರಿದ್ದರು. ಐತಿಹಾಸಿಕ ದೊಡ್ಡಕೆರೆ ಹೊಂದಿರುವ ಶ್ರೀ ಗುರು ತಿಪ್ಪೇರುದ್ರಸ್ವಾಮಿಯ ಪವಾಡಗಳ ಮೂಲಕ ಮಧ್ಯ ಕರ್ನಾಟಕ ಜನಮಾನದಲ್ಲಿ ನೆಲೆ ನಿಂತಿರುವ ರಥೋತ್ಸವ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು. ಮಧ್ಯಾಹ್ನ 3:15ಗಂಟೆಗೆ ಚಿತ್ತಾ ನಕ್ಷತ್ರದಲ್ಲಿ ತಿಪ್ಪೇರುದ್ರಸ್ವಾಮಿ ರಥವನ್ನು ರಥದ ಬೀದಿಯಿಂದ ಹೊರಮಠದವರಿಗೆ ಭಕ್ತರು ಎಳೆದರು. ಈ ವೇಳೆ ಸಾಹಸ್ರಾರು ಭಕ್ತರು ರಥವನ್ನು ಎಳೆಯುವ ಮೂಲಕ ಭಕ್ತಿಭಾವದ ಸಮರ್ಪಣೆ ಅರ್ಪಿಸಿದರು.

ತಿಪ್ಪೇರುದ್ರಸ್ವಾಮಿ ಐಕ್ಯ ಆಗಿರುವ ಹೊರಮಠ ಹಾಗೂ ದೇವರ ವಿಗ್ರಹ ಮತ್ತು ಮುಖ್ಯವಾಗಿರುವ ಒಳಮಠ ಎರಡು ಕಡೆಗಳಲ್ಲಿ ಬೆಳಗ್ಗೆಯಿಂದಲೇ ಬಿಡುವಿಲ್ಲದಂತೆ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ನಡೆದವು. ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದು ಪುಳಕಿತರಾದರು. ಶ್ರೀ ತಿಪ್ಪೇರುದ್ರಸ್ವಾಮಿಯ ಜಾತ್ರೆಯ ವಿಶೇಷತೆಗಳಲ್ಲಿ ಒಂದಾಗಿರುವ ಮುಕ್ತಿ ಬಾವುಟ ಹರಾಜು ಪ್ರಕ್ರಿಯೆ ಒಂದಾಗಿದೆ.
ಈ ಹರಾಜು ಪ್ರಕ್ರಿಯೆಯಲ್ಲಿ ದೇವರ ಮುಕ್ತಿ ಬಾವುಟ ಪಡೆಯಲು ಹಲವಾರು ಭಾಗಿ ಆಗಿದ್ದರು. ಅಂತಿಮವಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರು ₹61,00,000 ಮುಕ್ತಿ ಬಾವುಟವನ್ನು ತನ್ನದಾಗಿಸಿಕೊಂಡರು. ಕಳೆದ ವರ್ಷವೂ ಸಚಿವ ಡಿ.ಸುಧಾಕರ್ ಅವರೇ ಹರಾಜಿನಲ್ಲಿ ₹55,00,000ಕ್ಕೆ ಮುಕ್ತಿ ಬಾವುಟ ಪಡೆದುಕೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.
ಜಾತ್ರೆಗೆ ಹರಿದು ಬಂದ ಭಕ್ತ ಸಾಗರ: ಚಳ್ಳಕೆರೆ ತಾಲೂಕಿನ ನಾಯಕನಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ದತ್ತ ಸಾಗರದಲ್ಲಿ ಹರಿದುಬಂದಿತು. ಬಳ್ಳಾರಿ, ರಾಯಚೂರು, ತುಮಕೂರು, ಕೊಪ್ಪಳ, ಗದಗ ಸೇರಿದಂತೆ ಅಕ್ಕಪಕ್ಕದ ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯದಿಂದಲೂ ಭಕ್ತರು ಜಾತ್ರೆಯಲ್ಲಿ ಭಾಗವಹಿಸಿ ಸ್ವಾಮಿಯ ದರ್ಶನ ಪಡೆದರು.
ಜಾತ್ರೆ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದರು. ಈ ನಿಟ್ಟಿನಲ್ಲಿ ಸುಸುತ್ರವಾಗಿ ಜಾತ್ರೆ ನೇರವೇರಿತು. ಇನ್ನು ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಶಾಸಕರಾದ ಟಿ.ರಘುಮೂರ್ತಿ, ಎನ್.ವೈ.ಗೋಪಾಲಕೃಷ್ಣ, ಜಿಲ್ಲಾಧಿಕಾರಿ ವೆಂಕಟೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ, ಅಪಾರ ಜಿಲ್ಲಾಧಿಕಾರಿ ಕುಮಾರಸ್ವಾಮಿ ಉಪವಿಭಾಗಾಧಿಕಾರಿ ಕಾರ್ತೀಕ್ ದೇವಸ್ಥಾನ ಸಮಿತಿ ಪದಾಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications