ಚಿತ್ರದುರ್ಗ ಜನತೆ ಗಮನಿಸಿ: ಹೊಸವರ್ಷ ಆಚರಣೆಗೆ ಜಿಲ್ಲಾಡಳಿತ ವಿಧಿಸಿರುವ ಈ ನಿಯಮಗಳನ್ನು ಪಾಲಿಸಿ
ಚಿತ್ರದುರ್ಗ, ಡಿಸೆಂಬರ್ 29: ಹೊಸ ವರ್ಷದ ಸಂಭ್ರಮಾಚರಣೆಗೆ ಷರತ್ತುಗಳನ್ನು ವಿಧಿಸಲಾಗಿದ್ದು, ಮಾರ್ಗಸೂಚಿಯನ್ವಯ ಆಚರಣೆ ಡಿಸೆಂಬರ್ 31 ಹಾಗೂ ಜನವರಿ 01ರ ಮಧ್ಯರಾತ್ರಿ 01 ಗಂಟೆಯೊಳಗಾಗಿ ಮುಕ್ತಾಯಗೊಳಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಹೇಳಿದರು.
ಈ ಬಗ್ಗೆ ಮಾತನಾಡಿದ ದಿವ್ಯಪ್ರಭು ಜಿ.ಆರ್.ಜೆ. ತಪ್ಪದೇ ಎಲ್ಲರೂ ಮಾಸ್ಕ್ ಧರಿಸಬೇಕು, ಅಲ್ಲದೆ ಎಲ್ಲ ಹೊಟೇಲ್, ಪಬ್, ಬಾರ್ ಅಂಡ್ ರೆಸ್ಟೋರೆಂಟ್ಸ್, ಕ್ಲಬ್ಸ್ ಇತ್ಯಾದಿಗಳು ಕೂಡ ಮಧ್ಯರಾತ್ರಿ 01 ಕ್ಕೆ ಮುಚ್ಚಬೇಕು. ದೊಡ್ಡ ಪ್ರಮಾಣದ ಗುಂಪು ಸೇರುವ ಸಭೆಯನ್ನು ಆದಷ್ಟು ಮಧ್ಯಾಹ್ನದ ಸಮಯದಲ್ಲಿ ಮತ್ತು ಹೊರಾಂಗಣ ಪ್ರದೇಶದಲ್ಲಿ ಹಮ್ಮಿಕೊಳ್ಳಬೇಕು. ನಿಗದಿತ ಸಂಖ್ಯೆಗಿಂತ ಹೆಚ್ಚು ಜನರನ್ನು ಸೇರಿಸುವಂತಿಲ್ಲ ಹಾಗೂ ಹೋಟೆಲ್, ಪಬ್, ರೆಸ್ಟೋರೆಂಟ್ಗಳಲ್ಲಿ ನಿಗದಿತ ಆಸನ ಸಾಮರ್ಥ್ಯಕ್ಕಿಂತ ಹೆಚ್ಚಾಗಿ ಆಸನ ವ್ಯವಸ್ಥೆ ಮಾಡುವಂತಿಲ್ಲ ಎಂದು ಖಡಕ್ ಸೂಚನೆ ನೀಡಿದ್ದಾರೆ.
ಸಮಾರಂಭಗಳಲ್ಲಿ ಸಾಮಾಜಿಕ ಅಂತರ, ಮಾಸ್ಕ್, ಬಳಸುವುದು ಮತ್ತು ಬಂದವರಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡಬೇಕು. ಸಮಾರಂಭ ಆಯೋಜಕರು, ಸಿಬ್ಬಂದಿ ಬೂಸ್ಟರ್ ಡೋಸ್ ತೆಗೆದುಕೊಳ್ಳುವುದು, ಎರಡು ಡೋಸ್ ಲಸಿಕೆ ಪಡೆಯುವುದು ಕಡ್ಡಾಯವಾಗಿದೆ. ಸಿನಿಮಾ ಮಂದಿರ ಪ್ರವೇಶಿಸುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ತಹಶೀಲ್ದಾರರು, ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಈ ಬಗ್ಗೆ ನಿಗಾ ವಹಿಸಬೇಕು, ಉಲ್ಲಂಘನೆ ಕಂಡುಬಂದಲ್ಲಿ ಕ್ರಮಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಜಿಲ್ಲೆಯ ಎಲ್ಲಾ ಸಾರ್ವಜನಿಕ ಆಸ್ಪತ್ರೆ, ಸಮುದಾಯ ಆರೋಗ್ಯಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಎಲ್ಲಾ ಪ್ರಕರಣಗಳಿಗೆ ಸಂಬಂಧಿಸಿದಂತೆ ಕೋವಿಡ್ ಟೆಸ್ಟ್ ಮಾಡಬೇಕು, ಪಾಸಿಟಿವ್ ಬಂದ ಎಲ್ಲ ಪ್ರಕರಣಗಳನ್ನು ಜಿನೋಟಿಕ್ ಸೀಕ್ವೆನ್ಸ್ ಪರೀಕ್ಷೆಗೆ ಕಳುಹಿಸಿಕೊಡಬೇಕು, ಇದರಲ್ಲಿ ಯಾವುದೇ ನಿರ್ಲಕ್ಷ್ಯ ವಹಿಸುವಂತಿಲ್ಲ. ಖಾಸಗಿ ಆಸ್ಪತ್ರೆಯವರೂ ಕೂಡ ಜ್ವರ, ಶೀತ ಹಾಗೂ ಕೆಮ್ಮು ರೋಗಗಳ ಪ್ರಕರಣಗಳನ್ನು ಟೆಸ್ಟ್ಗೆ ಒಳಪಡಿಸಬೇಕು. ಟೆಸ್ಟ್ ವರದಿಗಳನ್ನು 24 ಗಂಟೆಗಳ ಒಳಗಾಗಿ ನೀಡಬೇಕು ಎಂದು ಆರೋಗ್ಯ ಅಧಿಕಾರಿಗಳಿಗೆ ತಿಳಿಸಿದರು.
ಇನ್ನು ಸೋಂಕಿನ ಲಕ್ಷಣಗಳನ್ನು ಹೋಂದಿರುವವರನ್ನು ಪರೀಕ್ಷೆ ಮಾಡಲು ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.
ಈ ವೇಳೆ ಉಪಸ್ಥಿತರಿದ್ದ ಡಿಹೆಚ್ಒ ಡಾ. ರಂಗನಾಥ್ ಪ್ರತಿಕ್ರಿಯಿಸಿ, "ಕೊರೊನಾ ಸೋಂಕಿನ ಮಾದರಿಗಳನ್ನು ಪರೀಕ್ಷಿಸುವ ಮೂರು ಪ್ರಯೋಗಾಲಯ ಯೂನಿಟ್ಗಳು ನಮ್ಮಲ್ಲಿವೆ. ದಿನಕ್ಕೆ ಗರಿಷ್ಟ 4 ಸಾವಿರ ಮಾದರಿಗಳನ್ನು ಟೆಸ್ಟ್ ಮಾಡುವ ಸಾಮರ್ಥ್ಯವಿದೆ" ಎಂದರು.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications