ಸಂವಿಧಾನ ಬದಲಿಸಲು ಯಾರಿಂದಲೂ ಸಾಧ್ಯವಿಲ್ಲ: ಅಣ್ಣಾ ಹಜಾರೆ
ಚಿತ್ರದುರ್ಗ, ಜನವರಿ 30 : ಸಂವಿಧಾನವನ್ನು ಯಾರಿಂದಲೂ ಬದಲಾಯಿಸಲು ಸಾಧ್ಯವಿಲ್ಲ. ನಮ್ಮ ಸಂವಿಧಾನ ಅತ್ಯುತ್ತಮ ಸಂವಿಧಾನ, ಎಲ್ಲರಿಗೂ ಬದುಕುವ ಹಕ್ಕು ಸಂವಿಧಾನ ಕೊಟ್ಟಿದೆ ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಹೇಳಿದ್ದಾರೆ.
ಮಂಗಳವಾರ ಚಿತ್ರದುರ್ಗದ ಮುರುಘಾ ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ಸಂವಿಧಾನವನ್ನು ಬದಲಿಸುತ್ತೇನೆ ಎಂದು ಹೇಳಿಕೆ ನೀಡುವುದು ತಪ್ಪು, ಸಂವಿಧಾನವನ್ನು ಯಾರಿಂದಲೂ ಬದಲಾಯಿಸಲು ಸಾಧ್ಯವಿಲ್ಲ, ಅದು ಎಲ್ಲರಿಗೂ ಬದುಕುವ ಹಕ್ಕು ಎಂದು ಹೇಳಿದರು.
ಕಲಬುರಗಿಯಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಅಣ್ಣಾ ಹಜಾರೆ
ದೇಶದಲ್ಲಿ ಆತ್ಮಹತ್ಯೆ ತಡೆಯಲು ಆಳುವ ಸರ್ಕಾರ ವಿಫಲವಾಗಿದೆ. ಕೃಷಿ ಬಿಕ್ಕಟ್ಟು ಉದ್ಭವವಾಗಿದ್ದು, ಮಾರ್ಚ್ 23 ರಂದು ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತಿದ್ದೇನೆ. ರೈತರ ಸಮಸ್ಯೆಗಳು ಮುನ್ನೆಲೆಗೆ ಬರಬೇಕು. ವರ್ಷಕ್ಕೆ 12 ಲಕ್ಷ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ರೈತರಿಗೆ6 0 ವರ್ಷದ ನಂತರ ಪ್ರತಿಯೊಬ್ಬರಿಗೂ ಪಿಂಚಣಿ ಸಗಬೇಕು. ಈ ಬೇಡಿಕೆಗಳನ್ನಿಟ್ಟು ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತೇನೆ ಎಂದರು.