ವಿಶೇಷ ವರದಿ; ಅನಾಥವಾದ ಹಿರಿಯೂರಿನ ಎಪಿಎಂಸಿ ವಸತಿ ಗೃಹಗಳು
ಚಿತ್ರದುರ್ಗ, ಆಗಸ್ಟ್ 01; ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ಕೃಷಿ ಮಾರುಕಟ್ಟೆ ಸಮಿತಿ ಆವರಣದಲ್ಲಿ (ಎಪಿಎಂಸಿ) ನಿರ್ಮಿಸಿರುವ ಸಿಬ್ಬಂದಿ ವಸತಿ ಗೃಹಗಳನ್ನು ಉದ್ದೇಶಕ್ಕೆ ಬಳಸದ ಕಾರಣ ಅನಾಥವಾಗಿದ್ದು, ಕಟ್ಟಡಗಳು ಕುಸಿದು ಬೀಳುವ ಹಂತ ತಲುಪಿವೆ.
1998ರಲ್ಲಿ ಅರಣ್ಯ ಸಚಿವರಾಗಿದ್ದ ದಿವಂಗತ ಡಿ. ಮಂಜುನಾಥ್, ಗೃಹ ಮಂಡಳಿ ಅಧ್ಯಕ್ಷರಾಗಿದ್ದ ಈಗಿನ ಹಾಲಿ ಶಾಸಕ ಜಿ. ಹೆಚ್. ತಿಪ್ಪಾರೆಡ್ಡಿ ಶಂಕುಸ್ಥಾಪನೆ ಮಾಡಿದ ಬಳಿಕ ಎರಡು ವಸತಿ ಗೃಹಗಳು ನಿರ್ಮಾಣವಾಗಿದ್ದವು. ಈಗ ಕೃಷಿ ಮಾರುಕಟ್ಟೆಯ ವಸತಿ ಗೃಹಗಳನ್ನು ಯಾರು ಕೇಳುವವರು ಗತಿ ಇಲ್ಲಾದಂತಾಗಿದೆ.
ಹಿರಿಯೂರು ನಗರದ ಕೃಷಿ ಮಾರುಕಟ್ಟೆ ಆವರಣದಲ್ಲಿ ನಿರ್ಮಾಣಗೊಂಡಿರುವ ವಸತಿ ಗೃಹಗಳು ಶಿಥಿಲಗೊಂಡಿದ್ದು ಕುಸಿದು ಬೀಳುವ ಹಂತಕ್ಕೆ ತಲುಪಿವೆ. ಮತ್ತೆರಡು ಕಟ್ಟಡಗಳು ಬಳಕೆಯಾಗದೆ ಹಾಗೆ ಉಳಿದಿದ್ದು ಯಾರು ಕೇಳುವವರಿಲ್ಲ ಇಲ್ಲದಂತಾಗಿದೆ.
ಮೊದಲನೇ ವಸತಿ ಗೃಹಗಳು ಒಂದೆರಡು ವರ್ಷಗಳ ಕಾಲ ಮಾತ್ರ ಬಳಕೆ ಮಾಡಲಾಗಿತ್ತು. ಬಳಿಕ ಇಲ್ಲಿಯವರೆಗೆ ಸುಮಾರು 20 ವರ್ಷ ಕಳೆದರೂ ಯಾರು ಕೂಡ ಸಿಬ್ಬಂದಿಗಳು ಬಳಸಿಕೊಳ್ಳಲು ಮುಂದೆ ಬರುತ್ತಿಲ್ಲ. ಇನ್ನು 2014ರಲ್ಲಿ ಮತ್ತೆರಡು ಹೊಸ ಸಿಬ್ಬಂದಿ ವಸತಿ ಗೃಹಗಳನ್ನು ಸುಮಾರು 15 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ್ದು, ಮೂಲಭೂತ ಸೌಕರ್ಯಗಳನ್ನು ಅಳವಡಿಕೆ ಮಾಡಲಾಗಿದೆ. ಆದರೆ ಯಾರು ಬಳಕೆ ಮಾಡುವವರು ಇಲ್ಲದಂತಾಗಿದೆ.

ಎಲ್ಲಾ ವ್ಯವಸ್ಥೆ ಇದ್ದರೂ ಬಳಕೆ ಇಲ್ಲ
ವಿಪರ್ಯಾಸವೆಂದರೆ ದಿವಂಗತ ಮಾಜಿ ಸಚಿವ ಡಿ. ಮಂಜುನಾಥ್ ನಿಧನ ಹೊಂದಿದರೂ ವಸತಿ ಗೃಹಗಳು ಮಾತ್ರ ಬಳಕೆಯಾಗದೆ ಹಾಗೆ ಉಳಿದಿವೆ. ಈ ಗೃಹಗಳು ಗಾಳಿ, ಬೆಳಕು, ರಸ್ತೆ, ವಿದ್ಯುತ್ ಸೇರಿದಂತೆ ಎಲ್ಲಾ ವ್ಯವಸ್ಥೆ ಒಳಗೊಂಡಿದ್ದು ಬಳಕೆ ಮಾಡಿಕೊಳ್ಳಲು ಮಾತ್ರ ಸಿಬ್ಬಂದಿ ಮುಂದೆ ಬರುತ್ತಿಲ್ಲ. ದುರಂತವೆಂದರೆ ಕೃಷಿ ಮಾರುಕಟ್ಟೆ ಇಲಾಖೆಯಲ್ಲಿ ಒಟ್ಟು 13 ಹುದ್ದೆಗಳಿವೆ. ಇದರಲ್ಲಿ ಮೂರು ಮಂದಿ ಮಾತ್ರ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕೆಲವರು ನಿವೃತ್ತಿ ಹೊಂದಿದರೆ, ಇನ್ನು ಕೆಲವರು ಬೇರೆ ಕಡೆಗೆ ವರ್ಗಾವಣೆ ಆಗಿ ಹೋಗಿದ್ದಾರೆ. ಉಳಿದ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳದ ಸರ್ಕಾರ ಇರುವ 3 ಜನರಿಂದಲೇ ಕೆಲಸ ಮಾಡಿಸುತ್ತದೆ ಎಂಬ ಆರೋಪ ಕೂಡ ಕೇಳಿ ಬಂದಿದೆ. ಇತರೇ ಸಿಬ್ಬಂದಿ ಇಲ್ಲದ ಕಾರಣ ಮೂರು ಜನರ ಸಿಬ್ಬಂದಿಗೆ ಕೆಲಸದ ಹೊರೆ ಹೆಚ್ಚು ಎಂದರೆ ತಪ್ಪಾಗಲಾರದು.

ಸಿಬ್ಬಂದಿ ಬೇರೆ ಮನೆಯಲ್ಲಿದ್ದಾರೆ
ಈ ಕುರಿತು ಒನ್ ಇಂಡಿಯಾ ಕನ್ನಡದ ಪ್ರತಿನಿಧಿ ಜೊತೆ ಮಾತನಾಡಿದ ಹಿರಿಯೂರಿನ ಕೃಷಿ ಮಾರುಕಟ್ಟೆ ಪ್ರಭಾರ ಕಾರ್ಯದರ್ಶಿ ತಿಪ್ಪೇಸ್ವಾಮಿ. "1998 ರಲ್ಲಿ ನಿರ್ಮಾಣವಾದ ಕಾರ್ಯದರ್ಶಿ ವಸತಿ ಗೃಹಗಳಲ್ಲಿ ಕೆಲವು ವರ್ಷಗಳ ಕಾಲ ಮಾತ್ರ ಅಧಿಕಾರಿಗಳು ವಾಸವಾಗಿದ್ದರು. ಬೇರೆ-ಬೇರೆ ಕಾರಣಗಳಿಂದ ಬಂದ ಸಿಬ್ಬಂದಿಯವರು ಬೇರೆ ಮನೆಯಲ್ಲಿದ್ದಾರೆ. ಇದುವರೆಗೂ ಯಾರು ಸಹ ವಸತಿ ಗೃಹಗಳಿಗೆ ಬಾಡಿಗೆ ಬರಲಿಲ್ಲ" ಎಂದು ಹೇಳಿದ್ದಾರೆ.
"ನಮ್ಮ ಇಲಾಖೆಯಲ್ಲಿ ಪ್ರಸ್ತುತ 3 ಜನ ಸಿಬ್ಬಂದಿಗಳು ಮಾತ್ರ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಸ್ವಂತ ಮನೆಗಳಿವೆ. ನಮ್ಮ ಇಲಾಖೆಯಲ್ಲಿ ಹೆಚ್ಚು ಸಿಬ್ಬಂದಿಗಳು ಇಲ್ಲದ ಕಾರಣ ಬಳಕೆಯಾಗಾದೇ ವಸತಿ ಗೃಹಗಳು ಹಾಗೆ ಉಳಿದಿವೆ. 'ಡಿ' ಗ್ರೂಪ್ ನೌಕರರನ್ನು ಹೊರೆತುಪಡಿಸಿ ಉಳಿದ ಯಾವುದೇ ಸರ್ಕಾರಿ ಇಲಾಖೆಯವರು ಬಂದು ಕೇಳಿದರೆ ನಾವು ಅವುಗಳನ್ನು ಬಾಡಿಗೆ ನೀಡುತ್ತವೆ. ಒಮ್ಮೆ ಅಬಕಾರಿ ಇಲಾಖೆಯವರು ಕೇಳಿದ್ದರು ಮತ್ತೆ ಅವರು ಕೇಳಲಿಲ್ಲ" ಎನ್ನುತ್ತಾರೆ ತಿಪ್ಪೇಸ್ವಾಮಿ.

ಅನೈತಿಕ ಚಟುವಟಿಕೆಗಳ ತಾಣ
ವಸತಿ ಗೃಹಗಳನ್ನು ಬಳಕೆ ಮಾಡದೇ ಹಾಗೇ ಇರುವುದರಿಂದ ಸಂಜೆಯಾಗುತ್ತಿದ್ದಂತೆ ಇವುಗಳು ಕುಡುಕರ ಮತ್ತು ಅನೈತಿಕತೆ ಚಟುವಟಿಕೆಗಳ ತಾಣವಾಗಿ ಮಾರ್ಪಾಡಾಗುತ್ತವೆ ಎಂಬ ಆರೋಪವೂ ಇದೆ. ಇದರಿಂದ ಅಕ್ಕಪಕ್ಕದ ಮನೆಯವರಿಗೆ ತೊಂದರೆ ಉಂಟಾಗುತ್ತಿದೆ. ಈಗಾಗಲೇ ಹಳೆಯ ವಸತಿ ಗೃಹಗಳ ಕಿಟಾಕಿಗಳು ಕಿತ್ತು ಹೋಗಿದ್ದು, ಕಾಂಪೌಂಡ್ ಗೋಡೆಯ ಗೇಟ್ ಸಹ ಕಣ್ಮರೆಯಾಗಿದೆ, ಗೋಡೆಯ ಕಾಂಪೌಂಡ್ ಬಾಗಿಲಿಗೆ ಮುಳ್ಳಿನ ಬೇಲಿ ಹಾಕಿದ್ದಾರೆ.
Recommended Video

ವಸತಿ ಗೃಹ ಬಳಕೆಗೆ ಆಗ್ರಹ
"ನಮ್ಮ ಹಿರಿಯೂರು ತಾಲ್ಲೂಕಿನ ಕೃಷಿ ಮಾರುಕಟ್ಟೆ ಆವರಣದಲ್ಲಿ ಮೂರು ವಸತಿ ಗೃಹಗಳನ್ನು ಸರ್ಕಾರದ ಅನುದಾನದಲ್ಲಿ ನಿರ್ಮಾಣ ಮಾಡಿ ಸುಮಾರು ವರ್ಷಗಳು ಕಳೆದರೂ ಬಳಕೆಯಾಗದೆ ಹಾಗೆ ಉಳಿದುಕೊಂಡಿವೆ. ವಸತಿ ಗೃಹಗಳು ಎಂದು ನಾಮಫಲಕ ಬರೆದಿದ್ದಾರೆ. ಇದುವರೆಗೂ ಯಾವ ಸಿಬ್ಬಂದಿಗಳು ಅಲ್ಲಿ ವಾಸಿಸುತ್ತಿಲ್ಲ. ಸರ್ಕಾರದ ಇತರೇ ಅನೇಕ ಇಲಾಖೆಯ ಸಿಬ್ಬಂದಿಗಳು ಬಿಲ್ಡಿಂಗ್ ಇಲ್ಲ ಎಂದು ಬಾಡಿಗೆ ಬಿಲ್ಡಿಂಗ್ ನಲ್ಲಿದ್ದಾರೆ. ಹೀಗೆ ಸರ್ಕಾರದ ದುಡ್ಡನ್ನು ದುಂದು ವೆಚ್ಚ ಮಾಡುವುದು ಸರಿಯಲ್ಲ. ವಸತಿ ಗೃಹಗಳನ್ನು ಖಾಲಿ ಬಿಟ್ಟರೆ ಅನೈತಿಕ ಚಟುವಟಿಕೆಗಳಿಗೆ ದಾರಿಯಾಗುತ್ತದೆ. ಲಕ್ಷ ಲಕ್ಷ ರೂಪಾಯಿ ಖರ್ಚು ಮಾಡಿ ನಿರ್ಮಾಣ ಮಾಡಿ ಅದನ್ನು ಖಾಲಿ ಬಿಡುವುದು ಒಳ್ಳೆಯದಲ್ಲ. ಸಂಬಂಧ ಪಟ್ಟ ಅಧಿಕಾರಿಗಳು ಗಮನ ಹರಿಸಬೇಕು" ಎಂದು ರೈತ ಸಂಘದ ಅಧ್ಯಕ್ಷ ಕೆ. ಟಿ. ತಿಪ್ಪೇಸ್ವಾಮಿ ಆಗ್ರಹಿಸಿದ್ದಾರೆ.
-
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ -
Shiva Rajkumar: ಹೆಣ್ಣು ಮಕ್ಕಳು, ನಟಿಯರ ಗೌರವಕ್ಕೆ ಚ್ಯುತಿ ತರಬೇಡಿ ಎಂದ ಶಿವಣ್ಣ: ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ -
ರಾಜ್ಯಸಭೆಗೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್: ಮಲ್ಲಿಕಾರ್ಜುನ ಖರ್ಗೆ, ಎಚ್ಡಿ ದೇವೇಗೌಡ ರಾಜ್ಯಸಭಾ ಅವಧಿ ಶೀಘ್ರ ಮುಕ್ತಾಯ -
ಮ್ಯಾಕ್ಸ್ವೆಲ್, ಗೇಲ್ ರೆಕಾರ್ಡ್ ಬ್ರೇಕ್: ವಿಶ್ವದಾಖಲೆ ಮಾಡಿದ ಫಿನ್ ಅಲೆನ್ಗೆ ಸಚಿನ್ ತೆಂಡೂಲ್ಕರ್ ವಿಶೇಷ ಸಂದೇಶ -
Petrol - Diesel: ಪೆಟ್ರೋಲ್ - ಡೀಸೆಲ್ ಖರೀದಿಗೆ ಮುಗಿ ಬಿದ್ದ ಜನ ವಿಡಿಯೋ ವೈರಲ್: ಕೇಂದ್ರ ಸರ್ಕಾರ ಹೇಳಿದ್ದೇನು -
ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್-ಸಾನಿಯಾ ಚಾಂದೋಕ್ ಅದ್ಧೂರಿ ವಿವಾಹ -
Gold Rate March 05: ಮಧ್ಯಪ್ರಾಚ್ಯ ಯುದ್ಧದ ನಡುವೆ ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಇಳಿಕೆ: ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka School Fee: ಪ್ರೈವೇಟ್ ಸ್ಕೂಲ್ ಫೀ ಮತ್ತೆ ದುಬಾರಿ: ಶುಲ್ಕ ಹೆಚ್ಚಿಸಲು ಸಜ್ಜಾದ ಖಾಸಗಿ ಶಾಲೆಗಳು, ಪೋಷಕರಲ್ಲಿ ಆತಂಕ -
''ತೆರಿಗೆ ಹೇರುವ ರಾಮಯ್ಯನಿಂದ ರಾಜ್ಯದಲ್ಲಿ 1.15 ಲಕ್ಷ ಕೋಟಿ ಸಾಲದ ಬಜೆಟ್ ಮಂಡನೆ'' -
ಕೈಚೆಲ್ಲಿ ನಿಂತ ಸಿಂಗಂ ಪೊಲೀಸರು, ದೈನೇಸಿ ಸ್ಥಿತಿಗೆ ಜನಸಾಮಾನ್ಯರು: ಪುಂಡರಿಗೆ ಹೆದರಿದ ಬೆಂಗಳೂರು - ರವಿಕೃಷ್ಣಾ ರೆಡ್ಡಿ ಬರಹ












Click it and Unblock the Notifications