Chitradurga Bus Accident: ಹೊಸ ತಿರುವು ಪಡೆದುಕೊಂಡ ಚಿತ್ರದುರ್ಗ ಬಸ್ ಅಗ್ನಿ ದುರಂತ ಪ್ರಕರಣ
Chitradurga Bus Accident: ಚಿತ್ರದುರ್ಗ ಬಸ್ ಅಗ್ನಿ ದುರಂತ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಈ ಸಂಬಂಧ ಇದೀಗ ಶಾಕಿಂಗ್ ಮಾಹಿತಿಯೊಂದು ಬಹಿರಂಗವಾಗಿದೆ. ಹಾಗಾದ್ರೆ, ಅದೇನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಚಿತ್ರದುರ್ಗ ಬಸ್ ಅಗ್ನಿ ದುರಂತ ಸಂಬಂಧ ಸ್ಫೋಟಕ ಮಾಹಿತಿಯೊಂದು ಹೊರಬಿದ್ದಿದ. ಬೆಂಗಳೂರಿನಿಂದ ಗೋಕರ್ಣಕ್ಕೆ ಪ್ರಯಾಣಿಸುತ್ತಿದ್ದ ಸೀಬರ್ಡ್ ಖಾಸಗಿ ಬಸ್ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬಸ್ ಹೊತ್ತಿ ಉರಿದಿತ್ತು. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೊರ್ಲತ್ತು ಕ್ರಾಸ್ ಬಳಿ ದುರಂತ ನಡೆದಿದ್ದು, ಈ ವೇಳೆ ಬಸ್ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿತ್ತು. ತನಿಖೆಯ ವೇಳೆ ಅಪಘಾತಕ್ಕೆ ಒಳಗಾದ ಬಸ್ನೊಳಗೆ ಆಯಿಲ್ ಬಾಕ್ಸ್ಗಳು ಪತ್ತೆ ಆಗಿದ್ದು, ಇದು ಇದೀಗ ಹೊಸ ತಿರುವು ಪಡೆದುಕೊಂಡಿದೆ.

ಪ್ರಕರಣಕ್ಕೆ ಹೊಸ ತಿರುವು: ಈ ಆಯಿಲ್ ಬಾಕ್ಸ್ ಇದ್ದ ಕಾರಭ ಬಸ್ನಲ್ಲಿ ಬೆಂಕಿ ಕಾಣಿಸಿಕೊಳ್ಳಲು ಮತ್ತು ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಿಯಂತ್ರಿಣ ಮಾಡಲು ಕಷ್ಟ ಆಗಲು ಪ್ರಮುಖ ಕಾರಣ ಆಗಿರಬಹುದು ಎಂದು ಶಂಕೆ ವ್ಯಕ್ತವಾಗಿದೆ. ಬಸ್ನಲ್ಲಿ ಇಷ್ಟು ದೊಡ್ಡ ಪ್ರಮಾಣದ ಆಯಿಲ್ ಬಾಕ್ಸ್ಗಳು ಹೇಗೆ ಬಂದವು ಮತ್ತು ಇವುಗಳ ಸಾಗಣೆಗೆ ಅನುಮತಿ ನೀಡಲಾಗಿತ್ತಾ? ಎಂಬ ಬಗ್ಗೆ ತನಿಖೆ ಮುದುವರೆದಿದೆ. ಈ ಘಟನೆ ಇದೀಗ ಸಾರ್ವಜನಿಕ ಸಾರಿಗೆಯಲ್ಲಿ ಸುರಕ್ಷತಾ ಮಾನದಂಡಗಳ ಬಗ್ಗೆ ಅನುಮಾನ ಹುಟ್ಟುಹಾಕಿದೆ.
ಪ್ರಯಾಣಿಕರ ಸುರಕ್ಷತೆ ಬಗ್ಗೆ ಆತಂಕ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಬಳಿ ನಡೆದ ಸೀ ಬರ್ಡ್ ಬಸ್ ದುರಂತದ ಬೆನ್ನಲ್ಲೇ, ಅದೇ ಕಂಪನಿಯ ಮತ್ತೊಬ್ಬ ಚಾಲಕನ ನಿರ್ಲಕ್ಷ್ಯ ಇದೀಗ ಬಟಾಬಯಲಾಗಿದೆ. ಪ್ರಯಾಣಿಕರ ಸುರಕ್ಷತೆ ಬಗ್ಗೆ ಆತಂಕ ಮೂಡಿಸುವಂತಹ ಈ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಮದ್ಯಪಾನ ಮಾಡಿ ಬಸ್ ಚಾಲನೆ: ಬೆಂಗಳೂರಿನಿಂದ ಗೋವಾಕ್ಕೆ ಹೊರಟಿದ್ದ ಖಾಸಗಿ ಸೀ ಬರ್ಡ್ ಬಸ್ ಅನ್ನು ಮದ್ಯಪಾನ ಮಾಡಿ ಚಾಲನೆ ಮಾಡುತ್ತಿದ್ದ ಚಾಲಕ ಇದೀಗ ಪೊಲೀಸರ ತಗ್ಲಾಕೊಂಡಿದ್ದಾನೆ. ಉಪ್ಪಾರಪೇಟೆ ಸಂಚಾರಿ ಪೊಲೀಸರ ಡ್ರಂಕ್ ಅಂಡ್ ಡ್ರೈವ್ ತಪಾಸಣೆ ವೇಳೆ ಈತ ತಗ್ಲಾಕೊಂಡಿದ್ದಾನೆ.
ಹೊಸ ವರ್ಷಾಚರಣೆ ಹಿನ್ನೆಲೆ ಬೆಂಗಳೂರು ನಗರದಾದ್ಯಂತ ತೀವ್ರ ತಪಾಸಣೆ ನಡೆಯುತ್ತಿದ್ದ ವೇಳೆ, ಅನುಮಾನಾಸ್ಪದವಾಗಿ ಬಸ್ ಅನ್ನು ತಡೆಯಲಾಯಿತು. ತಪಾಸಣೆ ವೇಳೆ ಚಾಲಕ ಮದ್ಯಪಾನ ಮಾಡಿರುವುದು ದೃಢಪಟ್ಟಿದ್ದು, ತಕ್ಷಣವೇ ಆತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಮತ್ತೊಬ್ಬ ಚಾಲಕನ ವ್ಯವಸ್ಥೆ: ಬಳಿಕ ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ಪೊಲೀಸರು ತಕ್ಷಣವೇ ಬೇರೆ ಚಾಲಕನ ವ್ಯವಸ್ಥೆ ಮಾಡಿ ಬಸ್ ಅನ್ನು ಗೋವಾಕ್ಕೆ ಕಳುಹಿಸಿದ ಘಟನೆ ನಡೆದಿದೆ. ಈ ಘಟನೆ ಇದೀಗ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಖಾಸಗಿ ಬಸ್ಗಗಳ ಮೇಲಿನ ನಿಗಾವನ್ನು ಮತ್ತಷ್ಟು ಹೆಚ್ಚಿಸುವ ಅಗತ್ಯ ಇದೆ ಅಂತಲೂ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಯಾಕಂದ್ರೆ, ಜೀವ ಹೋದ್ರೆ ಮತ್ತೆ ಬಾರದು. ಆದ್ದರಿಂದ ಎಲ್ಲಾ ಬಸ್ ಚಾಲಕರಿಗೂ ತಪಾಸಣೆ ನಡೆಸಬೇಕು ಎನ್ನುವ ಮಾತುಗಳು ಕೇಳಿಬರುತ್ತಿವೆ.
ಬಸ್ ಅಂದಮೇಲೆ ಒಬ್ಬರು, ಇಬ್ಬರು ಪ್ರಯಾಣ ಮಾಡುವುದಿಲ್ಲ.ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಪ್ರಯಾಣ ಮಾಡುತ್ತಾರೆ. ಎಲ್ಲರೂ ಚಾಲಕನ ಮೇಲೆ ನಂಬಿಕೆ ಇಟ್ಟು ಬಸ್ ಹತ್ತುತ್ತಾರೆ. ಆದರೆ, ಅವರು ಮದ್ಯ ಸೇವನೆ ಮಾಡಿಬಂದರೆ, ಹೇಗೆ ಗೊತ್ತಾಗುತ್ತದೆ. ಆದ್ದರಿಂದ, ಪ್ರಯಾಣಿಕರ ಹಿತದೃಷ್ಟಿಯಿಂದ ಪೊಲೀಸರು ಹೀಗೆಯೇ ಎಲ್ಲಾ ವಾಹನಗಳನ್ನು ತಪಾಸಣೆ ಮಾಡಿ ಮುಂದೆ ಬಿಡಬೇಕು ಎನ್ನುವ ಒತ್ತಾಯಗಳು ಕೇಳಿಬಂದಿವೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications