ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಿನ್ನೆ ಅಪಘಾತವಾಗಿ ನಿಂತಿದ್ದ ಲಾರಿಗೆ ಮತ್ತೆ ಕಾರು ಡಿಕ್ಕಿ– ವ್ಯಕ್ತಿ ಸಾವು

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಜುಲೈ 18: ಅಪಘಾತವಾಗಿ ದಾರಿ ಬದಿ ನಿಂತಿದ್ದ ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ, ಒಬ್ಬ ವ್ಯಕ್ತಿ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಚಿತ್ರದುರ್ಗದ ಕುಂಚಿಗನಾಳ್ ಬಳಿ ನಡೆದಿದೆ. ಹುಬ್ಬಳ್ಳಿಯಿಂದ ಬೆಂಗಳೂರಿಗೆ ಬರುವಾಗ ಈ ದುರ್ಘಟನೆ ನಡೆದಿದೆ.

 ಚಿತ್ರದುರ್ಗದಲ್ಲಿ ಕಾರು-ಲಾರಿ ನಡುವೆ ಭೀಕರ ಅಪಘಾತ; ನಾಲ್ವರ ಸಾವು ಚಿತ್ರದುರ್ಗದಲ್ಲಿ ಕಾರು-ಲಾರಿ ನಡುವೆ ಭೀಕರ ಅಪಘಾತ; ನಾಲ್ವರ ಸಾವು

ಮೃತಪಟ್ಟ ವ್ಯಕ್ತಿಯನ್ನು 25 ವರ್ಷದ ಅರುಣ್ ಎಂದು ಗುರುತಿಸಲಾಗಿದೆ. ಸದಾನಂದ, ಸಿರೀಶ್ ಹಾಗೂ ಕಾರು ಚಾಲಕ ಪವನ್ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ.

One person died when a car collided with a lorry in chitradurga

ನಿನ್ನೆಯಷ್ಟೇ ಇನ್ನೋವಾ ಕಾರೊಂದು ಟೈರ್ ಸಿಡಿದು ಡಿವೈಡರ್ ದಾಟಿ ಲಾರಿಗೆ ಡಿಕ್ಕಿ ಹೊಡೆದು ನಾಲ್ವರು ಮೃತಪಟ್ಟಿದ್ದರು. ಅಪಘಾತವಾಗಿದ್ದ ಆ ಲಾರಿಯನ್ನು ಸ್ಥಳಾಂತರಿಸದೇ ಅಲ್ಲಿಯೇ ಬಿಟ್ಟಿದ್ದರು. ಇದೇ ಲಾರಿಗೆ ಮತ್ತೆ ಕಾರು ಡಿಕ್ಕಿ ಹೊಡೆದಿದೆ. ಪೊಲೀಸರು ಲಾರಿಯನ್ನು ತಕ್ಷಣವೇ ಸ್ಥಳಾಂತರಿಸಿದ್ದರೆ ಈ ಅಪಘಾತ ನಡೆಯುತ್ತಿರಲಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಈ ಸಂಬಂಧ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

English summary
One person died and three seriously injured when a car collided with a lorry which met with an accident yesterday near Kunchiganal in Chitradurga. The tragedy occurred on the way from Hubli to Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X