ಮೊದಲ ಬಾರಿಗೆ ಚಿತ್ರದುರ್ಗದಿಂದ ಕೋಲ್ಕತ್ತಾಗೆ ರೈಲಲ್ಲಿ ಈರುಳ್ಳಿ ಸಾಗಟ
ಚಿತ್ರದುರ್ಗ, ಸೆಪ್ಟೆಂಬರ್ 30: ಚಿತ್ರದುರ್ಗ ಜಿಲ್ಲೆಯಲ್ಲಿ ಈರುಳ್ಳಿ ಬೆಲೆ ಕುಸಿತದಿಂದ ರೈತರು ಕಂಗಾಲಾಗಿದ್ದರು. ಈಗ ರೈತರಿಗೆ ನೆಮ್ಮದಿ ನೀಡುವ ಸುದ್ದಿಯೊಂದಿದೆ. ಮೊದಲ ಬಾರಿಗೆ ಚಿತ್ರದುರ್ಗದಿಂದ ಕೋಲ್ಕತ್ತಾಗೆ ಈರುಳ್ಳಿ ಸಾಗಣೆ ಮಾಡಲಾಗಿದೆ.
ಮೊದಲು ದುಬಾರಿ ಬಾಡಿಗೆ ನೀಡಿ ಲಾರಿಗಳ ಮೂಲಕ ಈರುಳ್ಳಿಯನ್ನು ಕೋಲ್ಕತ್ತಾದ ಮಾರುಕಟ್ಟೆಗೆ ಸಾಗಾರ ಮಾಡುವ ಸ್ಥಿತಿ ಇತ್ತು. ಆದರೆ ರೈತರು ರೈಲ್ವೆ ಇಲಾಖೆಯ ಅಧಿಕಾರಿಗಳಿಗೆ ಮಾಡಿದ ಮನವಿಗೆ ಸ್ಪಂದನೆ ಸಿಕ್ಕಿದೆ. ಮೊದಲ ಬಾರಿಗೆ ಚಿತ್ರದುರ್ಗ ಜಿಲ್ಲೆಯ ರೈತರು 20 ಟನ್ ಗೂ ಹೆಚ್ಚು ಈರುಳ್ಳಿಯನ್ನು ರೈಲಿನ ಮೂಲಕ ಕೋಲ್ಕತ್ತಾಗೆ ಸಾಗಿಸಿದ್ದಾರೆ.
ರೈಲ್ವೆ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿಕೊಂಡು 1 ಕೆ. ಜಿ. ಈರುಳ್ಳಿಗೆ 1.60 ಪೈಸೆಯಂತೆ ಬಾಡಿಗೆ ನೀಡಿ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬೇಡರೆಡ್ಡಿಹಳ್ಳಿ ಗ್ರಾಮದ ರೈಲ್ವೆ ನಿಲ್ದಾಣದಿಂದ ಕೋಲ್ಕತ್ತಾ ಮಾರುಕಟ್ಟೆಗೆ ಕಡಿಮೆ ವೆಚ್ಚದಲ್ಲಿ ಸುಮಾರು 20 ಬೋಗಿಗಳಲ್ಲಿ ಈರುಳ್ಳಿ ಸಾಗಣೆ ಮಾಡಿದ್ದಾರೆ.

ಮನವಿಗೆ ಸ್ಪಂದಿಸಿದ ಇಲಾಖೆ: "ಪ್ರತಿ ಬಾರಿ ರೈತರಿಂದ ಖರೀದಿ ಮಾಡಿದ ಈರುಳ್ಳಿಯನ್ನು ಲಾರಿಗಳ ಮೂಲಕ ಸಾಗಿಸಲಾಗುತ್ತಿತ್ತು. ಲಾರಿಗಳ ಬಾಡಿಗೆ ದುಬಾರಿ ಆಗುತ್ತಿತ್ತು. ಹಾಗಾಗಿ ರೈಲ್ವೆ ಇಲಾಖೆಗೆ ಮನವಿ ಮಾಡಲಾಗಿತ್ತು. ನಮ್ಮ ಮನವಿಗೆ ಸ್ಪಂದಿಸಿ ರೈಲು ಬಿಟ್ಟಿರುವುದು ನಮಗೆ ಅನುಕೂಲವಾಗಿದೆ. ರೈಲಿನಲ್ಲಿ ಒಮ್ಮೆ 20 ಟನ್ಗೂ ಅಧಿಕ ತೂಕದ ಈರುಳ್ಳಿ ಚೀಲಗಳನ್ನು ತೆಗೆದುಕೊಂಡು ಹೋಗುತ್ತಿದ್ದೇವೆ. ಅಷ್ಟೇ ಅಲ್ಲದೆ ನಮಗೆ ಹಮಾಲಿ ಹಣ ಕೂಡ ಕಡಿಮೆ ವೆಚ್ಚದಲ್ಲಿ ಆಗುತ್ತಿದೆ" ಎಂದು ಬಂಜಗೆರೆಯ ರೈತ ಚಂದ್ರಣ್ಣ ಹೇಳಿದರು.
ಇದೇ ಮೊದಲ ಬಾರಿಗೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬೇಡರೆಡ್ಡಿಹಳ್ಳಿ ಗ್ರಾಮದ ರೈಲ್ವೆ ನಿಲ್ದಾಣದಿಂದ ಕೋಲ್ಕತ್ತಾದ ಮಾರುಕಟ್ಟೆಗೆ ಕಡಿಮೆ ವೆಚ್ಚದಲ್ಲಿ ರೈತರು ಸುಮಾರು 20 ಬೋಗಿಗಳ ಮೂಲಕ ಈರುಳ್ಳಿ ಸಾಗಣೆ ಮಾಡುತ್ತಿದ್ದಾರೆ. @IRCTCofficial #Chitradurga #Onion pic.twitter.com/9QlgDoOOiZ
— oneindiakannada (@OneindiaKannada) September 30, 2021
ಈರುಳ್ಳಿ ದರ ಕುಸಿತ; ರಾಜ್ಯದಲ್ಲಿ ಈರುಳ್ಳಿ ದರ ಕುಸಿತ ಕಂಡಿತ್ತು. ಇದೀಗ ಕಳೆದ ಒಂದು ವಾರದಿಂದ ಪ್ರತಿ ಕ್ವಿಂಟಲ್ಗೆ ದರ 600 ರಿಂದ 1200 ರೂಪಾಯಿಗಳು ಸಿಗಬಹುದು ಎನ್ನಲಾಗಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ, ಹಿರಿಯೂರು ಭಾಗದಲ್ಲಿ ಸಾಕಷ್ಟು ರೈತರು ಈರುಳ್ಳಿ ಬೆಳೆದಿದ್ದಾರೆ.
ಬೆಲೆ ಇಲ್ಲದ ಕಾರಣ ಟ್ರ್ಯಾಕ್ಟರ್ ಮೂಲಕ ಬೆಳೆಗಳನ್ನು ನಾಶಪಡಿಸಿದ್ದಾರೆ. ಇನ್ನೂ ಕೆಲ ರೈತರು ತಿಪ್ಪೆ ಗುಂಡಿಗೆ ಸುರಿದಿದ್ದಾರೆ. ಈರುಳ್ಳಿ ಬೆಳೆದು ಲಕ್ಷಾಂತರ ರೂಪಾಯಿ ಖರ್ಚು ಮಾಡಿಕೊಂಡು ನಷ್ಟ ಅನುಭವಿಸಿದ್ದಾರೆ. ಕೊಳೆ ರೋಗ ಬಂದ ಕಾರಣ ಈರುಳ್ಳಿ ಫಸಲು ಸರಿಯಾಗಿ ರೈತರ ಕೈ ಸೇರಲಿಲ್ಲ.
ಸಾಲ ಮಾಡಿಕೊಂಡು ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ಬೆಳೆ ಬೆಳೆದಿದ್ದರು. ಬೆಂಗಳೂರಿನ ಯಶವಂತಪುರ ಮಾರುಕಟ್ಟೆಗೆ ಈರುಳ್ಳಿ ತೆಗೆದುಕೊಂಡು ಹೋದರೆ ಲಾರಿ ಬಾಡಿಗೆ ಸಹ ಸಿಗದೇ ಎಷ್ಟೋ ರೈತರು ಕಣ್ಣೀರು ಹಾಕಿಕೊಂಡು ವಾಪಸ್ ಬಂದಿರುವ ಉದಾಹರಣೆಗಳಿವೆ.
ಹಿರಿಯೂರು ತಾಲ್ಲೂಕಿನ ಈಶ್ವರಗೆರೆ ಗ್ರಾಮದ ರೈತರೊಬ್ಬರು 5 ಎಕರೆಯಲ್ಲಿ ಈರುಳ್ಳಿ ಬೆಳೆ ಬೆಳೆದು ಕೆರೆಗೆ ಸುರಿದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ಚಳ್ಳಕೆರೆ ತಾಲೂಕಿನ ಕ್ಯಾತಗೊಂಡನಹಳ್ಳಿ ಗ್ರಾಮದ ರೈತ ಶ್ರೀನಿವಾಸ್ 6 ಎಕರೆಯಲ್ಲಿ ನಾಲ್ಕು ಲಕ್ಷ ಖರ್ಚು ಮಾಡಿ 882 ಚೀಲ ಈರುಳ್ಳಿ ಬೆಳೆದಿದ್ದರು. ಇದನ್ನು ಬೆಂಗಳೂರು ಮಾರುಕಟ್ಟೆಗೆ ತೆಗೆದುಕೊಂಡು ಹೋಗಿ ಪ್ರತಿ ಕ್ವಿಂಟಲ್ಗೆ 230 ರೂಪಾಯಿ ಬೆಲೆ ಪಡೆದಿದ್ದರು. ಬೆಂಗಳೂರಿಗೆ ಸಾಗಾಟ ಮಾಡಿದ ಲಾರಿ ಬಾಡಿಗೆಯು ಸಹ ಕೈಗೆ ಬಂದಿರಲಿಲ್ಲ.
ಇದೇ ಮೊದಲ ಬಾರಿಗೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬೇಡರೆಡ್ಡಿಹಳ್ಳಿ ಗ್ರಾಮದ ರೈಲ್ವೆ ನಿಲ್ದಾಣದಿಂದ ಕೋಲ್ಕತ್ತಾದ ಮಾರುಕಟ್ಟೆಗೆ ಕಡಿಮೆ ವೆಚ್ಚದಲ್ಲಿ ರೈತರು ಸುಮಾರು 20 ಬೋಗಿಗಳ ಮೂಲಕ ಈರುಳ್ಳಿ ಸಾಗಣೆ ಮಾಡುತ್ತಿದ್ದಾರೆ.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications