ಲಾಕ್ ಡೌನ್ ನಡುವೆ ಈಜಲು ಹೋದ ಹೊಳಲ್ಕೆರೆ ತಾಲ್ಲೂಕಿನ ಯುವಕ ಸಾವು
ಚಿತ್ರದುರ್ಗ, ಏಪ್ರಿಲ್ 30: ಲಾಕ್ ಡೌನ್ ಮಧ್ಯೆಯೂ ಯುವಕನೊಬ್ಬ ಕೆರೆಯಲ್ಲಿ ಈಜಲು ಹೋಗಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಉಪ್ಪಾರಹಟ್ಟಿ ಗ್ರಾಮದಲ್ಲಿ ನಡೆದಿದೆ.
ಹೊಸದುರ್ಗದ ರಾಕೇಶ್ (21) ಮೃತ ಯುವಕ. ಸ್ನೇಹಿತರೊಂದಿಗೆ ಈತ ಇಂದು ಸಂಜೆ ತಾಲ್ಲೂಕಿನ ಗೌಡಿಹಳ್ಳಿ ಕೆರೆಯಲ್ಲಿ ಈಜಲು ಹೋಗಿದ್ದಾನೆ. ಈ ಸಂದರ್ಭದಲ್ಲಿ ನೀರಿನ ಹರಿವಿನಲ್ಲಿ ಸಿಲುಕಿಕೊಂಡು ಯುವಕ ಸಾವನ್ನಪ್ಪಿದ್ದಾನೆ.
ಲಾಕ್ ಡೌನ್ ಸರಣಿ ರಜೆ: ತುಂಗಭದ್ರಾ ನದಿಯಲ್ಲಿ ಈಜಲು ಹೋದ ಮೂವರು ನೀರುಪಾಲು
ವಿಷಯ ತಿಳಿದ ಅಗ್ನಿಶಾಮಕ ದಳ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಧಾವಿಸಿದ್ದಾರೆ. ಶೋಧ ಕಾರ್ಯ ನಡೆಸಿ ಯುವಕನ ಮೃತ ದೇಹವನ್ನು ಹೊರ ತೆಗೆದಿದ್ದಾರೆ. ರಾಮಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಘಟನೆ ನಡೆದಿದೆ.
English summary
A person who went to swim in river has died in water at Hollkere today