ಚಿತ್ರದುರ್ಗ: ಮರಳಿ ಗೂಡು ಸೇರಿದ ಶಬರಿ ಮಲೆಯಲ್ಲಿ ಬಿಟ್ಟ ಪಾರಿವಾಳ
ಚಿತ್ರದುರ್ಗ ಜನವರಿ 4: ಚಿತ್ರದುರ್ಗದಲ್ಲಿ ಆಶ್ಚರ್ಯಕರ ಸಂಗತಿಯೊಂದು ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾ. ಮೇಗಳಹಟ್ಟಿ ಗ್ರಾಮದಲ್ಲಿ ಪಾರಿವಾಳ ಪವಾಡ ಮಾಡಿದೆ. ಶಬರಿ ಮಲೆ ಯಾತ್ರೆಯಲ್ಲಿ ಬಿಟ್ಟ ಪಾರಿವಾಳ ಮರಳಿ ತನ್ನ ಗೂಡಿಗೆ ಸೇರಿದೆ. ಕೇರಳದಲ್ಲಿ ಬಿಟ್ಟ ಮಾಲಾದಾರಿಯ ಪಾರಿವಾಳ ಮರಳಿ ಗೂಡಿಗೆ ಬಂದಿದೆ. ಮೇಗಳಹಟ್ಟಿ ಗ್ರಾಮದ ವೆಂಕಟೇಶ್ ಅವರ ಪಾರಿವಾಳ ಜ.30 ರಂದು ಶಬರಿಮಲೆಯಲ್ಲಿ ಹಾರಿ ಬಿಟ್ಟಿದ್ದರು. ನಾಲ್ಕು ದಿನಗಳ ಬಳಿಕ ಆ ಪಾರಿವಾಳ ಮೇಗಳಹಟ್ಟಿ ಗ್ರಾಮಕ್ಕೆ ಆಗಮಿಸಿದೆ. ಪಾರಿವಾಳ ಆಗಮಿಸಿದ್ದನ್ನು ಕಂಡು ಗ್ರಾಮಸ್ಥರಲ್ಲಿ ಅಚ್ಚರಿ ಹುಟ್ಟುಹಾಕಿದೆ.
ಕೇರಳ ರಾಜ್ಯದ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನವು ವಿಶ್ವ ವಿಖ್ಯಾತ ದೇವಸ್ಥಾನಗಳಲ್ಲಿ ಒಂದಾಗಿದೆ. ಈ ದೇವಸ್ಥಾನದ ಐತಿಹ್ಯಗಳೇ ಸಾಕು ನಮ್ಮನ್ನು ವಿಸ್ಮಯಗೊಳಿಸಲು. ಹೀಗಿರುವಾಗ ಪಾರಿವಾಳ ಅಯ್ಯಪ್ಪನ ಆಶೀರ್ವಾದ ಪಡೆದು ಪುನ: ಆಗಮಿಸಿದೆ ಎಂದು ಹೇಳಲಾಗುತ್ತದೆ.
ಶಬರಿಮಲೆ ಎಂದೊಡನೆ ಎಲ್ಲರಿಗೂ ಅಯ್ಯಪ್ಪ ಸ್ವಾಮಿಯ ಹೆಸರು ತಟ್ಟನೆ ಮನಸ್ಸಿಗೆ ಬರುವುದು ಖಂಡಿತ.ಪಶ್ಚಿಮ ಘಟ್ಟ ಪರ್ವತ ಶ್ರೇಣಿಗಳಲ್ಲಿ ನೆಲೆಗೊಂಡಿರುವ ಈ ಪವಿತ್ರ ಯಾತ್ರಾ ಸ್ಥಳವು ಕೇರಳ ರಾಜ್ಯದ ಪತನಂತಿಟ್ಟ ಜಿಲ್ಲೆಯ ಪೆರುನಾಡ್ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿದೆ.

ಧಾರ್ಮಿಕ ದಂತಕಥೆಯ ಪ್ರಕಾರ, ಸಾಗರ ಮಂಥನದ ಸಮಯದಲ್ಲಿ, ಭಗವಾನ್ ವಿಷ್ಣುವಿನ ಮೋಹಿನಿ ರೂಪದಿಂದ ಆಕರ್ಷಿತನಾಗುತ್ತಾರೆ ಮತ್ತು ಈ ಕಾರಣದಿಂದಾಗಿ, ಒಂದು ಮಗು ಜನಿಸಿತು. ಅದನ್ನು ಪಂಪಾ ನದಿಯ ತೀರದಲ್ಲಿ ಬಿಡಲಾಗುತ್ತದೆ . ಈ ಸಮಯದಲ್ಲಿ, ರಾಜ ರಾಜಶೇಖರ ಅವರನ್ನು 12 ವರ್ಷಗಳ ಕಾಲ ಬೆಳೆಸಿದರು. ಈ ಮಗುವನ್ನೇ ನಂತರ ಅಯ್ಯಪ್ಪ ಸ್ವಾಮಿ ಎಂದು ಕರೆಯಲಾಯಿತು.

ಅಯ್ಯಪ್ಪ ಸ್ವಾಮಿ ಬ್ರಹ್ಮಚಾರಿ ಮತ್ತು ತಪಸ್ವಿಯಾಗಿದ್ದರು. ಅದಕ್ಕಾಗಿಯೇ 10 ರಿಂದ 50 ವರ್ಷ ವಯಸ್ಸಿನ ಹುಡುಗಿಯರು ಮತ್ತು ಮಹಿಳೆಯರು ಈ ದೇವಸ್ಥಾನಕ್ಕೆ ಪ್ರವೇಶಿಸಲು ಅವಕಾಶವಿಲ್ಲ. ಅಯ್ಯಪ್ಪ ದೇವರು ಬ್ರಹ್ಮಚಾರಿಯಾಗಿರುವ ಕಾರಣದಿಂದ ಮಹಿಳೆಯರಿಗೆ ಮಂದಿರಕ್ಕೆ ಪ್ರವೇಶಿಸಲು ಅವಕಾಶವಿಲ್ಲ. ಅಲ್ಲದೆ ಹಿಂದೂ ಧರ್ಮದ ಪ್ರಕಾರ ಋತುಮತಿಯಾಗುವ ವಯಸ್ಸಿನ ಹೆಣ್ಣು ಮಕ್ಕಳನ್ನು ದೇವಾಲಯದ ಒಳಗೆ ಬರಲು ಅವಕಾಶವಿಲ್ಲ ಎಂಬ ದಂತಕಥೆಯ ಸಲುವಾಗಿ ಈ ವಯಸ್ಸಿನ ಒಳಗಿನ ಹೆಂಗಸರನ್ನು ದೇವಾಲಯದೊಳಗೆ ಬಿಡುವುದಿಲ್ಲ. ಅಲ್ಲದೆ ಅಯ್ಯಪ್ಪ ಸ್ವತಃ ಬ್ರಹ್ಮಚಾರಿಯಾಗಿರುವುದರಿಂದಾಗಿ ಸಹ ಈ ಪದ್ಧತಿಯನ್ನು ಅನುಸರಿಸಲಾಗುತ್ತದೆ ಎಂಬುದು ನಡೆದುಕೊಂಡು ಬಂದಿದೆ.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications