Murugha Mutt Seer: ಜೈಲಿನಿಂದ "ಮುರುಘಾ" ಶ್ರೀ ಬಿಡುಗಡೆಗೆ ಆದೇಶ
Murugha Mutt Seer: ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ್ದ ಚಿತ್ರದುರ್ಗ ಮುರುಘಾಶ್ರೀ ಬಿಡುಗಡೆಗೆ ಕೋರ್ಟ್ ಆದೇಶ ಹೊರಡಿಸಿದೆ. ಸಾಕ್ಷಿಗಳ ವಿಚಾರಣೆ ಬಹುತೇಕ ಪೂರ್ಣ ಹಿನ್ನೆಲೆ ಚಿತ್ರದುರ್ಗದ 2ನೇ ಅಪರ ಮತ್ತು ಜಿಲ್ಲಾ ಸತ್ರ ನ್ಯಾಯಾಲಯ ಈ ಆದೇಶವನ್ನು ಹೊರಡಿಸಿದೆ.
ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯದ ಪೋಕ್ಸೋ ಪ್ರಕರಣ ಆರೋಪ ಎದುರಿಸುತ್ತಿದ್ದ ಮುರುಘಾ ಶರಣರನ್ನು ಚಿತ್ರದುರ್ಗ ಜೈಲಿನಲ್ಲಿರಿಸಲಾಗಿತ್ತು. ಒಮ್ಮೆ ಬೇಲ್ ಪಡೆದು ಹೊರ ಬಂದಿದ್ದರು. ಮತ್ತೆ ಅವರನ್ನು ಎರಡನೇ ಬಾರಿಗೆ ಜೈಲು ಸೇರಿದ್ದರು. ಇದೀಹ ಮುರುಘಾ ಶರಣರಿಗೆ ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಬಿಡುಗಡೆಗೆ ಆದೇಶ ಹೊರಡಿಸಿದೆ.

ಸಾಕ್ಷ್ಯ ವಿಚಾರಣೆ ಪೂರ್ಣಗೊಂಡ ಹಿನ್ನೆಲೆ ಬಿಡುಗಡೆಗೆ ಆದೇಶ ನೀಡಲಾಗಿದೆ. ಈ ಹಿಂದೆ ಹೈಕೋರ್ಟ್ ಜಾಮೀನು ನೀಡಿತ್ತು. ಸಾಕ್ಷ್ಯ ವಿಚಾರಣೆ ನಡೆಸುವವರೆಗೆ ಬಂಧನದಲ್ಲಿಡಲು ಸುಪ್ರಿಂ ಕೋರ್ಟ್ ಆದೇಶಿಸಿತ್ತು. ಇದೀಗ ಸಾಕ್ಷ್ಯ ವಿಚಾರಣೆ ಪೂರ್ಣಗೊಂಡ ಹಿನ್ನೆಲೆ ಇಂದೇ ಬಿಡುಗಡೆಗೆ ಆದೇಶ ಹೊರಡಿಸಿದೆ. ಸಂತ್ರಸ್ತೆಯರಿಬ್ಬರು ಸೇರಿ 12ಜನ ಸಾಕ್ಷ್ಯಗಳ ವಿಚಾರಣೆ ಪೂರ್ಣವಾಗಿದ್ದು, ಕೋರ್ಟ್ನಿಂದ ಜಿಲ್ಲಾ ಕಾರಾಗೃಹಕ್ಕೆ ತೆರಳಿ ಬಳಿಕ ಮುರುಘಾಶ್ರೀ ಬಿಡುಗಡೆಯಾಗಲಿದ್ದಾರೆ ಎಂದು ತಿಳಿದುಬಂದಿದೆ.
ಮುರುಘಾ ಶ್ರೀ ಬಿಡುಗಡೆಗೆ ಕೋರ್ಟ್ ಆದೇಶ ಹಿನ್ನೆಲೆ ಬಿಡುಗಡೆ ಪ್ರಕ್ರಿಯೆ ಮುಗಿಸಲು ಮತ್ತೆ ಚಿತ್ರದುರ್ಗ ಜೈಲಿಗೆ ಮುರಘಾ ಶ್ರೀ ವಾಪಾಸಾಗಿದ್ದು, ಬಳಿಕ ಕೋರ್ಟ್ ಆದೇಶದ ಬೆನ್ನಲ್ಲೇ ಜೈಲು ಒಳಗೆ ಮುಗುಳ್ನಗೆಯಿಂದ ಹೊರಟರು.
ಬಿಡುಗಡೆ ಆದೇಶ ಹೊರಬೀಳುತ್ತಿದ್ದಂತೆ ಶ್ರೀಗಳು ಜೈಲಿನೊಳಗೆ ಹೋಗುವಾಗ ಕ್ಯಾಮೆರಾ ಕಂಡು ಮುಗುಳ್ನಕ್ಕರು. ಇನ್ನು ಜೈಲು ಪ್ರಕ್ರಿಯೆ ಪೂರ್ಣಗೊಳಿಸಿದ ಬಳಿಕ ದಾವಣಗೆರೆಯ ವಿರಕ್ತ ಮಠಕ್ಕೆ ಮುರುಘಾ ಶರಣರು ತೆರಳಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಮುರುಘಾಶ್ರೀ ಬಿಡುಗಡೆ: ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ್ದ ಚಿತ್ರದುರ್ಗ ಮುರುಘಾಶ್ರೀ ಅವರನ್ನು ಇಂದು (ಅಕ್ಟೋಬರ್ 07) ಕಾರಾಗೃಹದಿಂದ ಬಿಡುಗಡೆ ಮಾಡಲಾಯಿತು.
ಶ್ರೀಗಳನ್ನು ಬಿಡುಗಡೆಗೊಳಿಸುವಂತೆ ಇಂದು ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿತ್ತು. ಸಾಕ್ಷ್ಯಗಳ ವಿಚಾರಣೆ ಬಹುತೇಕ ಪೂರ್ಣಗೊಂಡ ಹಿನ್ನೆಲೆ ಚಿತ್ರದುರ್ಗದ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಈ ಆದೇಶವನ್ನು ಹೊರಡಿಸಿದ್ದರಿಂದ ಕೋರ್ಟ್ನಿಂದ ಜೈಲಿಗೆ ತೆರಳಿ ಅಲ್ಲಿಂದ ಹೊರ ಬಂದರು. ಶ್ರೀಗಳು ನೇರವಾಗಿ ದಾವಣಗೆರೆಗೆ ತೆರಳಿದರು. ದಾವಣಗೆರೆಯ ವಿರಕ್ತ ಮಠದಲ್ಲಿ ಶ್ರೀಗಳು ತಂಗಲಿದ್ದಾರೆ.
ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾ ಶರಣರು ಜೈಲು ಪಾಲಾಗಿದ್ದರು. ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಜಾಮೀನು ಪ್ರಶ್ನೆ ಮಾಡಲಾಗಿತ್ತು. ಕೋರ್ಟ್ನಲ್ಲಿ ಸಾಕ್ಷ್ಯಗಳ ವಿಚಾರಣೆ ಪೂರ್ಣಗೊಳಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದ್ದರಿಂದ ಮುರುಘಾ ಶರಣರನ್ನು ಎರಡನೇ ಬಾರಿಗೆ ಬಂಧಿಸಿದ್ದರು. ಇಂದು ವಿಚಾರಣೆ ಮುಗಿದಿದೆ.
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications