ಲೈಂಗಿಕ ದೌರ್ಜನ್ಯ : ಮೆಡಿಕಲ್ ಟೆಸ್ಟ್ನಲ್ಲಿ ಮುರುಘಾ ಶರಣರ ಪುರುಷತ್ವ ಸಾಬೀತು
ಚಿತ್ರದುರ್ಗ, ಸೆಪ್ಟೆಂಬರ್ 3 : ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾ ಮಠದ ಸ್ವಾಮೀಜಿಗಳ ಪುರಷತ್ವ ಪರೀಕ್ಷೆಯ ವೈದ್ಯಕೀಯ ವರದಿ ಬಿಡುಗಡೆಯಾಗಿದ್ದು, ಪುರಷತ್ವ ಸಾಬೀತಾಗಿದೆ ಎಂದು ಮೂಲಗಳಿಂದ ತಿಳಿಬಂದಿದೆ.
ಮಠದ ವಸತಿನಿಲಯದ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ನೀಡಿದ ಪ್ರಕರಣದಲ್ಲಿ ಶಿವಮೂರ್ತಿ ಶರಣರನ್ನು ಪೊಲೀಸರು ಬಂಧಿಸಿದ್ದು, ಶುಕ್ರವಾರ ಅವರನ್ನು2 ನೇ ಅಪರ ಜಿಲ್ಲಾ ಕೋರ್ಟ್ ನ್ಯಾಯಾಂಗ ಬಂಧನದಿಂದ ಸೆಪ್ಟೆಂಬರ್ 5ರವರೆಗೆ ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.
ಪೊಲೀಸ್ ಕಸ್ಟಡಿಗೆ ಒಪ್ಪಿಸಿದ ಬೆನ್ನಲ್ಲೇ ಪೊಲೀಸರು ಶುಕ್ರವಾರ ರಾತ್ರಿ ಜಿಲ್ಲಾಸ್ಪತ್ರೆಯಲ್ಲಿ ಮುರುಘಾ ಶರಣರನ್ನು ವೈದ್ಯಕೀಯ ಟೆಸ್ಟ್ಗೆ ಒಳಪಡಿಸಿದ್ದು, ಪುರುಷತ್ವ ಪರೀಕ್ಷೆಯಲ್ಲಿ ವೈದ್ಯರು ತಿಳಿಸಿದ ವರದಿಗಳಲ್ಲಿ ಶ್ರೀಗಳ ಗಂಡಸತ್ವ ಸಾಬೀತಾಗಿದೆ ಎಂಬ ಮಾಹಿತಿ ಬಹಿರಂಗವಾಗಿದೆ. ಈಗಾಗಲೇ ಎಫ್ ಎಸ್ಎಲ್ ಪರೀಕ್ಷೆಗಾಗಿ ಕೂದಲು, ರಕ್ತ, ಉಗುರಿನ ಮಾದರಿಗಳನ್ನು ಪ್ರಯೋಗಾಲಯ ಪಡೆದುಕೊಂಡಿದೆ ಎಂಬ ಮಾಹಿತಿ ಇದೆ ತಿಳಿದು ಬಂದಿದೆ.

ರಾತ್ರಿ ಪರೀಕ್ಷೆಗೆ ಒಳಪಡಿಸಿದ್ದು, ಶನಿವಾರ ಬೆಳಿಗ್ಗೆ ವರದಿಯನ್ನು ನೀಡಲಾಗಿದೆ. ಉಳಿದ ಮಾದರಿಗಳನ್ನು ಮಡಿವಾಳದ ಎಫ್ಎಸ್ಎಸ್ಲೆ ರವಾನಿಸಲಾಗಿದೆ. ಈ ಹಿಂದಿನ ಅತ್ಯಾಚಾರ ಪ್ರಕರಣಗಳಲ್ಲಿ ಆರೋಪಿ ತಾನೂ ಪುರುಷನಲ್ಲ ಎಂದು ಅಫಿಡವಿಟ್ ಸಲ್ಲಿಸಿದರೆ ಮಾತ್ರ ಪರುಷತ್ವ ಪರೀಕ್ಷೆಗೆ ಒಳಪಡಿಸಲಾಗುತ್ತಿತ್ತು. ಆದರೆ ಇತ್ತೀಚೆಗೆ ಅತ್ಯಾಚಾರ ಪ್ರಕರಣಗಳಲ್ಲಿ ಕಡ್ಡಾಯ ಪರೀಕ್ಷೆ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಪೊಲೀಸ್ ಕಸ್ಟಡಿ ಮುಗಿದ ಬಳಿಕ ಜಾಮೀನು ಅರ್ಜಿ ವಿಚಾರಣೆ
ಕೋರ್ಟ್ ಮುರುಘಾ ಶರಣರನ್ನು ನ್ಯಾಯಾಂಗ ಬಂಧನದಿಂದ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಆದರೆ ಜೈಲು ಪಾಲಾಗುವುದನ್ನು ತಪ್ಪಿಸಿಕೊಳ್ಳಬೇಕು ಎಂದು ಯತ್ನಿಸುತ್ತಿರುವ ಮುರುಘಾ ಶರಣರು ಮತ್ತೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಆದರೆ ಪೊಲೀಸ್ ಕಸ್ಟಡಿ ಮುಗಿಯುವ ವರೆಗೂ ಜಾಮೀನು ಅರ್ಜಿ ವಿಚಾರಣೆ ನಡೆಸುವುದಿಲ್ಲ ಎಂದು ನ್ಯಾಯಾಲಯ ತಿಳಿಸಿದೆ.
ಸೆಪ್ಟೆಂಬರ್ ರಂದು ಪೊಲೀಸ್ ಕಸ್ಟಡಿ ಅಂತ್ಯವಾಗಲಿದ್ದು, ಅದರ ನಂತರ ಅರ್ಜಿ ವಿಚಾರಣೆ ನಡೆಯಲಿದೆ. ಆದರೆ ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ಮತ್ತಷ್ಟು ದಿನ ಕಸ್ಟಡಿಗೆ ನೀಡಲು ಕೋರ್ಟ್ಗೆ ಮನವಿ ಮಾಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications