ಪಕ್ಷ ಸೇರ್ಪಡೆ ಕಾರ್ಯಕ್ರಮಕ್ಕೆ ಆಹ್ವಾನಿಸಿದ ಪೂರ್ಣಿಮಾ ಶ್ರೀನಿವಾಸ್: ಗೊಲ್ಲ ಸಮುದಾಯದಲ್ಲಿ ಮೂಡದ ಒಮ್ಮತ
ಚಿತ್ರದುರ್ಗ, ಅಕ್ಟೋಬರ್ 10: ಅಕ್ಟೋಬರ್ 20ರಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಸೇರುತ್ತಿದ್ದೇನೆ ಈ ಕಾರ್ಯಕ್ರಮಕ್ಕೆ ತಾವೆಲ್ಲರೂ ಬನ್ನಿ ಎಂದು ಬೆಂಬಲಿಗರನ್ನು ಕರೆದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಬಿಜೆಪಿಗೆ ಗುಡ್ ಬೈ ಹೇಳುತ್ತಿದ್ದಾರೆ.
ಹಿರಿಯೂರು ತಾಲೂಕಿನ ಬೀರೇನಳ್ಳಿ ಗ್ರಾಮದ ಸಮೀಪವಿರುವ ತಮ್ಮ ತೋಟದ ನಿವಾಸದಲ್ಲಿ ಗೊಲ್ಲ ಸಮುದಾಯದವರ ಜೊತೆ ಸಭೆ ನಡೆಸಿ ಮಾತನಾಡಿದ ಅವರು, ನಮ್ಮ ಕುಟುಂಬ ಮೂಲತಃ ಕಾಂಗ್ರೆಸ್ ಆಗಿದ್ದು, ನನ್ನ ತಂದೆ ಎ. ಕೃಷ್ಣಪ್ಪ ಅವರು ಕಾಂಗ್ರೆಸ್ ಪಕ್ಷದಲ್ಲಿ ಶಾಸಕರಾಗಿ, ಸಚಿವರಾಗಿದ್ದರು. ಕಾರಣಾಂತರಗಳಿಂದ ಅನ್ಯ ಪಕ್ಷದೊಂದಿಗೆ ಹೋಗಬೇಕಾದ ಅನಿವಾರ್ಯತೆ ಬಂತು ಅಷ್ಟೇ ಎಂದರು.

ಇತ್ತೀಚಿಗಷ್ಟೇ ನಡೆದ ವಿಧಾನಸಭಾ ಚುನಾವಣೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕರೆ ಮಾಡಿ ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನಿಸಿದ್ದರು. ಜೊತೆಗೆ ಬೆಂಗಳೂರಿನ ಕೆ.ಆರ್ ಪುರಂ ಕ್ಷೇತ್ರದಿಂದ ಟಿಕೆಟ್ ನೀಡಲಾಗುವುದು ಎಂದಿದ್ದರು. ಆದರೆ ನಾವು ಹೋಗಿರಲಿಲ್ಲ. ಇತ್ತೀಚಿಗೆ ಯಾಕೋ ಬಿಜೆಪಿ ಪಕ್ಷದಲ್ಲಿ ಇರುವುದು ಸೂಕ್ತವಲ್ಲ ಎನ್ನಿಸಿತು. ಮೂಲ ಮಾತೃ ಪಕ್ಷಕ್ಕೆ ಹೋಗಬೇಕು ಅನ್ನಿಸಿತು ಎಂದು ಹೇಳಿದರು.
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಾಗಿದೆ. ಅಕ್ಟೋಬರ್ 20ರಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನ ಸೇರುತ್ತಿದ್ದೇನೆ ಎಂದು ಕೆ ಪೂರ್ಣಿಮಾ ತಿಳಿಸಿದರು.

ಮುಂಬರುವ ವರ್ಷದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದ್ದು, ಈ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಸ್ಪರ್ಧಿಸಲು ಸೂಕ್ತ ಅಭ್ಯರ್ಥಿ ಇಲ್ಲದ ಕಾರಣ ಡಿ.ಟಿ ಶ್ರೀನಿವಾಸ್ ಅವರೇ ಸೂಕ್ತ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ಅದಕ್ಕೆ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಪತಿ ಡಿ.ಟಿ ಶ್ರೀನಿವಾಸ್ ಅವರಿಗೆ ಟಿಕೆಟ್ ನೀಡಲಿದ್ದಾರೆ. ಅವರು ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ತಿಳಿಸಿದರು.
ಇನ್ನು ಗೊಲ್ಲ ಸಮುದಾಯದ ಮುಖಂಡರು ಸಭೆಗೆ ಗೈರಾಗುವ ಮೂಲಕ ಈ ದಂಪತಿ ನಡೆಗೆ ಆಕ್ರೋಶ ಹೊರ ಹಾಕಿದ್ದಾರೆ. ಪಕ್ಷದಿಂದ ಪಕ್ಷಕ್ಕೆ ಜಿಗಿಯುವ ಮೂಲಕ ಸಮುದಾಯವನ್ನು ಬಲಿಕೊಡುವ ಕೆಲಸ ಮಾಡುತ್ತಿದ್ದಾರೆ. ಈಗಾಗಲೇ ಕ್ಷೇತ್ರದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಸಮುದಾಯ ಮುಖಂಡರ ಜೊತೆ ಸಮಾಲೋಚನೆ ಚರ್ಚಿಸದೆ ತೀರ್ಮಾನ ತೆಗೆದುಕೊಂಡಿರುವುದು ಬೇಸರ ತಂದಿದೆ. ಈಗಾಗಲೇ ಬಿಜೆಪಿ ಪಕ್ಷದಿಂದ ಕಾಲು ಹೊರಗಡೆ ಇಟ್ಟಿದ್ದಾರೆ. ಅವರಿಗೆ ಯಾರು ಹೇಳಿದರು ನಿಲ್ಲುವುದಿಲ್ಲ. ಅವರು ಹೋಗಲಿ, ನಾವು ಬಿಜೆಪಿ ಪಕ್ಷದಲ್ಲೇ ಇರುತ್ತವೆ ಎಂದು ಸಭೆ ಮುಗಿದ ಬಳಿಕ ಕೆಲವರು ಮಾತನಾಡಿಕೊಳ್ಳುತ್ತಿದ್ದರು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications