ಹಿರಿಯೂರು: ಗುಂಡಿಮಯವಾದ ರಸ್ತೆಗಳು; ಸ್ವಲ್ಪ ಯಾಮಾರಿದ್ರೂ ಆಸ್ಪತ್ರೆ ಸೇರೋದು ಗ್ಯಾರಂಟಿ.!
ಹಿರಿಯೂರು, ಆಗಸ್ಟ್, 30: ಮಳೆಗಾಲ ಬಂತೆಂದರೆ ಸಾಕು ಚಿತ್ರದುರ್ಗ ಜಿಲ್ಲೆಯ ಹಿರಿಯೂ ತಾಲ್ಲೂಕಿನ ಕೆಲವು ರಸ್ತೆಗಳಂತೂ ಕೆರೆಯಂತೆ ಮಾರ್ಪಡುತ್ತವೆ. ಇನ್ನು ಇದೀಗ ಹಿರಿಯೂರು ನಗರದಲ್ಲಿ ರಸ್ತೆಗಳು ಸಂಪೂರ್ಣವಾಗಿ ಗುಂಡಿಮಯವಾಗಿದ್ದು, ವಾಹನ ಸವಾರರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಲದೆ, ರಸ್ತೆ ದುರಸ್ತಿ ಮಾಡಿಸುವಂತೆ ಸ್ಥಳೀಯರು ಅನೇಕ ಬಾರಿ ಮನವಿ ಮಾಡಿದ್ದರೂ ಅಧಿಕಾರಿಗಳು ಮಾತ್ರ ಕ್ಯಾರೆ ಅನ್ನುತ್ತಿಲ್ಲ.
ನಗರದಲ್ಲಿ ಕಳೆದ ಒಂದು ವಾರದ ಹಿಂದೆ ಸುರಿದ ಭಾರೀ ಮಳೆಗೆ ನಗರದ ಪ್ರಮುಖ ರಸ್ತೆಗಳ ತುಂಬೆಲ್ಲಾ ಗುಂಡಿ ಬಿದ್ದು ಹೋಗಿವೆ ಸ್ವಾಮಿ. ಇಲ್ಲಿ ಹ್ಯಾಂಡಲ್, ಸ್ಟೇರಿಂಗ್, ಮೈಗಟ್ಟಿ ಹಿಡ್ಕೊಂಡು ಗಾಡಿ ಓಡಿಸ್ರಪ್ಪ. ಇಲ್ಲ ಅಂದರೆ ನಿಮ್ ಮೂಳೆ ಸಡಿಲ ಆಗೋದಂತೂ ಗ್ಯಾರಂಟಿ. ಅಲ್ಲದೆ ಸ್ವಲ್ಪ ಎಚ್ಚರ ತಪ್ಪಿದರೂ ಕೈಕಾಲು, ಸೊಂಟ ಮುರಿದು ಆಸ್ಪತ್ರೆ ಸೇರೋದಂತೂ ಗ್ಯಾರಂಟಿ. ಇನ್ನು ಇಲ್ಲಿ ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಗಾಡಿ ಓಡಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ನಗರದ ಟಿಬಿ ವೃತದಿಂದ ಹಿಡಿದು, ಗ್ರಾಮೀಣ ಬ್ಯಾಂಕ್ ಮುಂಭಾಗ, ತೊರೆ ಸೇತುವೆ, ಗಾಂಧಿ ಸರ್ಕಲ್, ನಗರ ಠಾಣೆ ಮುಂಭಾಗ, ಹುಳಿಯಾರ್ ರಸ್ತೆ ಚಾನೆಲ್ವರೆಗೂ ಕಣ್ಣಿಗೆ ಕಾಣೋದು ಬರೀ ಗುಂಡಿಗಳೇ. ನಗರದಲ್ಲಿ ಪದೇ ಪದೇ ಗುಂಡಿ ಬೀಳುವುದರಿಂದ ಸಾರ್ವಜನಿಕ ಪ್ರಯಾಣಿಕರು ಬೇಸತ್ತು ಹೋಗಿದ್ದಾರೆ. ಅನೇಕ ಜನರು ಬಿದ್ದು ಗಾಯಗೊಂಡು ಪ್ರಾಣಾಪಾಯದಿಂದ ತಪ್ಪಿಸಿಕೊಂಡಿರುವವರಿದ್ದಾರೆ. ಆದರೆ ಇತ್ತೀಚೆಗಂತೂ ಇಲ್ಲಿನ ರಸ್ತೆಗಳು ಪಾದಚಾರಿಗಳು ಮತ್ತು ದ್ವಿಚಕ್ರ ವಾಹನ ಚಾಲಕರನ್ನು ಹೈರಾಣ ಮಾಡಿಬಿಟ್ಟಿವೆ.
ಗುಂಡಿ ಮುಚ್ಚಿ, ಗುಂಡಿ ಮುಚ್ಚಿ ಅಂತಾ ಎಷ್ಟೇ ಬಾರೀ ಹೇಳಿದರೂ ಯಾರೂ ಗುಂಡಿ ಮುಚ್ಚುತ್ತಿಲ್ಲ. ಇನ್ನು ನಗರದಲ್ಲಿ ಬಿದ್ದಿರುವ ಗುಂಡಿಗಳನ್ನು ಮುಚ್ಚುವಂತೆ ಹತ್ತಾರು ಮನವಿಗಳನ್ನು ಸಲ್ಲಿಸಿದರೂ ಯಾವುದೇ ಪ್ರಯೋಜನ ಆಗಿಲ್ಲ.
ಚಿತ್ರದುರ್ಗ, ಚಳ್ಳಕೆರೆ, ಹೊಸದುರ್ಗ ಹಾಗೂ ಧರ್ಮಪುರ ಹಾಗೂ ಹುಳಿಯಾರು ಭಾಗದಿಂದ ನಗರಕ್ಕೆ ಬಂದರೆ ಗುಂಡಿಗಳಿಂದ ಸ್ವಾಗತ ಸಿಗುತ್ತದೆ. ಕಳಪೆ ಕಾಮಗಾರಿಯಿಂದ ಪದೇ ಪದೇ ಗುಂಡಿ ಬೀಳುತ್ತವೆ. ಈ ಗುಂಡಿ ಬಿದ್ದ ರಸ್ತೆಗಳಲ್ಲಿ ಪ್ರತಿದಿನ ಸಂಚರಿಸುವ ರೋಗಿಗಳು, ವಯೋವೃದ್ಧರು, ಶಾಲಾ ಮಕ್ಕಳು ಅಧಿಕಾರಿಗಳ ವಿರುದ್ಧ ಶಾಪ ಹಾಕುತ್ತಿದ್ದಾರೆ.
ನಗರದಲ್ಲಿ ಬಿದ್ದಿರುವ ಗುಂಡಿಗಳನ್ನು ತಪ್ಪಿಸಲು ಹೋಗಿ ಅದೆಷ್ಟೋ ಬೈಕ್ ಸವಾರು ಕೈ, ಕಾಲು ಮುರಿದುಕೊಂಡು ಆಸ್ಪತ್ರೆ ಸೇರಿರುವ ಉದಾಹರಣೆಗಳಿವೆ. ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸಹ ಗುಂಡಿ ಬಿದ್ದ ರಸ್ತೆಯಲ್ಲಿ ಓಡಾಡುತ್ತಿದ್ದು, ಕ್ರಮ ಕೈಗೊಳ್ಳದಿರುವುದು ವಿಪರ್ಯಾಸವೇ ಸರಿ. ಅಲ್ಲದೆ, ಟಿಬಿ ವೃತ್ತದಿಂದ ಗಾಂಧಿ ಸರ್ಕಲ್ವರೆಗೂ ರಾತ್ರಿ ವೇಳೆ ವಿದ್ಯುತ್ ಕಂಬದಲ್ಲಿ ಸರಿಯಾದ ಬೆಳಕಿನ ವ್ಯವಸ್ಥೆ ಇಲ್ಲದೆ, ಕತ್ತಲೆ ಭಾಗ್ಯವನ್ನು ಕಾಣಬಹುದಾಗಿದೆ. ಈಗಲಾದರೂ ಸಂಬಂಧಪಟ್ಟ ಅಧಿಕಾರಿಗಳು ಗುಂಡಿ ಮುಚ್ಚಲು ಕ್ರಮ ಕೈಗೊಳ್ಳುತ್ತಾರೆಯಾ ಎಂದು ಕಾದು ನೋಡಬೇಕಿದೆ.
ಈ ಕುರಿತು ದೂರವಾಣಿ ಮೂಲಕ ನಗರಸಭೆ ಅಧ್ಯಕ್ಷ ಅಜಯ್ ಕುಮಾರ್ ಮಾತನಾಡಿ, ನಗರದಲ್ಲಿ ಬಿದ್ದಿರುವ ಗುಂಡಿಗಳ ಬಗ್ಗೆ ನಗರಸಭೆ ಪೌರಾಯುಕ್ತರ ಗಮನಕ್ಕೆ ತರಲಾಗಿದೆ. 10 ಲಕ್ಷ ರೂಪಾಯಿ ಟೆಂಡರ್ ಕರೆಯಲಾಗಿದ್ದು, ಯಾರಿಗೆ ಎಲ್ಓನ್ ಬಂದಿದೆಯೋ ಅವರಿಗೆ ಕೊಡಲಾಗಿದೆ ಎಂದು ತಿಳಿಸಿದ್ದಾರೆ. ಟೆಂಡರ್ ಕಥೆ ಹೇಳ್ಬೇಡಿ ಮೊದಲು ಗುಂಡಿ ಮುಚ್ಚಲು ಕ್ರಮ ಕೈಗೊಳ್ಳಿ. ಇಲ್ಲ ಅಂದ್ರೆ ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದಿದ್ದೇನೆ. ಒಂದೆರಡು ದಿನಗಳಲ್ಲಿ ಗುಂಡಿಗಳನ್ನು ಮುಚ್ಚಲಾಗುವುದು ಎಂದು ತಿಳಿಸಿದರು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications