ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೋವಿಡ್ -19 ಗೆ ಹಿರಿಯೂರು ಹಾಲಿ ನಗರಸಭಾ ಸದಸ್ಯ ಸಾವು

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಆಗಸ್ಟ್ 16: ರಾಜ್ಯ ಸೇರಿದಂತೆ ದೇಶದಲ್ಲಿ ಪ್ರತಿದಿನ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಏರುತ್ತಲೇ ಇದ್ದು, ಮಹಾಮಾರಿ ಕೊರೊನಾ ಸೋಂಕಿಗೆ ಹಿರಿಯೂರಿನ ಕಾಂಗ್ರೆಸ್ ಹಾಲಿ ನಗರಸಭಾ ಸದಸ್ಯ ಸಾವನ್ನಪ್ಪಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರಸಭೆಯ 15ನೇ ವಾರ್ಡಿನ ಸದಸ್ಯ ಎಸ್.ಪಿ.ಟಿ ದಾದಾಪೀರ್ (45) ತಡರಾತ್ರಿ ನಿಧನರಾಗಿದ್ದಾರೆ. ಆಗಸ್ಟ್ 07 ರಂದು ಕೊರೊನಾ ಸೋಂಕು ಪಾಸಿಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ ಚಿತ್ರದುರ್ಗ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು.

ಹಿರಿಯ ಪತ್ರಕರ್ತ ಸೋಮಶೇಖರ್ ಯಡವಟ್ಟಿ ನಿಧನ ಹಿರಿಯ ಪತ್ರಕರ್ತ ಸೋಮಶೇಖರ್ ಯಡವಟ್ಟಿ ನಿಧನ

ದಾದಾಪೀರ್ ಜೊತೆಗೆ ಅವರ ಪತ್ನಿ, ಮಗ, ಮಗಳಿಗೂ ಸಹ ಕೊರೊನಾ ಸೋಂಕು ಪಾಸಿಟಿವ್ ಕೇಸ್ ದೃಢಪಟ್ಟಿತ್ತು. ಕಳೆದ ನಾಲ್ಕೈದು ದಿನಗಳಿಂದ ದಾದಾಪೀರ್ ಚಿತ್ರದುರ್ಗ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

 Chitradurga: Present Municipal Councilor Death From Coronavirus Infection

ಹೆಚ್ಚಿನ ಚಿಕಿತ್ಸೆಗಾಗಿ ಶನಿವಾರ ಚಿತ್ರದುರ್ಗ ಕೋವಿಡ್ ಆಸ್ಪತ್ರೆಯಿಂದ ಬೆಂಗಳೂರಿಗೆ ಹೋಗಲು ಬಿಡುಗಡೆ ಮಾಡಿಕೊಂಡು ಹೋಗುವಾಗ ಹಿರಿಯೂರು ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ದಾದಾಪೀರ್ ಎರಡನೇ ಬಾರಿಗೆ ನಗರಸಭೆಗೆ ಆಯ್ಕೆಯಾಗಿದ್ದರು. ಮೃತರ ಆತ್ಮಕ್ಕೆ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್, ಮಾಜಿ ಸಚಿವ ಡಿ. ಸುಧಾಕರ್ ಸೇರಿದಂತೆ ಮತ್ತಿತರರು ಸಂತಾಪ ಸೂಚಿಸಿದ್ದಾರೆ.

English summary
Present Municipal Councilor Dadapeer, Died For Coronavirus infection in hiriyuru, chitradurga District.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X