ಚಿತ್ರದುರ್ಗ: ಕೊರೊನಾ ಸೋಂಕಿಗೆ ಖಾಸಗಿ ಸುದ್ದಿ ವಾಹಿನಿ ಕ್ಯಾಮರಾಮನ್ ಸಾವು
ಚಿತ್ರದುರ್ಗ, ಮೇ 12: ಮಹಾಮಾರಿ ಕೊರೊನಾ ಸೋಂಕಿಗೆ ಖಾಸಗಿ ಸುದ್ದಿ ವಾಹಿನಿಯ ಚಿತ್ರದುರ್ಗದ ಕ್ಯಾಮರಾಮನ್, ಕೊರೊನಾ ಫ್ರಂಟ್ ಲೈನ್ ವಾರಿಯರ್ ಬಸವರಾಜ್ ಕೋಟಿ (44) ಮೃತಪಟ್ಟಿದ್ದಾರೆ.
ಕಳೆದ ಒಂದು ವಾರದ ಹಿಂದೆ ಚಿತ್ರದುರ್ಗ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಸವರಾಜ್ ಅವರು ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮುಂಜಾನೆ ನಿಧನರಾಗಿದ್ದಾರೆ.
ಕ್ರಿಯಾಶೀಲ ಪತ್ರಕರ್ತರಾಗಿದ್ದ ಧಾರವಾಡ ಮೂಲದ ಬಸವರಾಜ್ ಕೋಟಿ ಅವರು ಚಿತ್ರದುರ್ಗಕ್ಕೆ ವೃತ್ತಿ ಅರಸಿಕೊಂಡು ಬಂದವರು. ಎಲ್ಲರಿಗೂ ಅಪಾರ ಒಡನಾಡಿ, ಮಿತಭಾಷಿ, ಆದರೆ ಒಲವಿನ ಮಿತ್ರರಾಗಿದ್ದರು. ಪತ್ರಕರ್ತರು, ಕ್ಯಾಮರಾಮನ್ ಗಳು ಪ್ರಸ್ತುತ ಜಾಗೃತವಾಗಿರಬೇಕು ಎಂಬುದಕ್ಕೆ ಹತ್ತಾರು ಸಾಕ್ಷಿಗಳು ಕಣ್ಣ ಮುಂದಿವೆ.

ಸರ್ಕಾರ ಕೂಡಲೇ ಪತ್ರಕರ್ತ ಬಸವರಾಜ್ ಕೋಟಿ ಪತ್ನಿ ಮತ್ತು ಎರಡು ಪುಟ್ಟ ಮಕ್ಕಳ ಭವಿಷ್ಯಕ್ಕೆ ಸೂಕ್ತ ಪರಿಹಾರ ಒದಗಿಸಿಕೊಡಬೇಕೆಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರಿಗೆ ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ರಾಷ್ಟ್ರೀಯ ಮಂಡಳಿ ಸದಸ್ಯರಾದ ಮಾಲತೇಶ್ ಅರಸ್ ರಾಜ್ಯ ಸಮಿತಿ ಸದಸ್ಯರಾದ ಅರುಣ್ ಕುಮಾರ್ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಲಕ್ಷ್ಮಣ್, ಉಪಾಧ್ಯಕ್ಷ ಕುಮಾರಸ್ವಾಮಿ, ಪ್ರಧಾನ ಕಾರ್ಯದರ್ಶಿ ಗೌಡಗೆರೆ ದಿನೇಶ್ ಮತ್ತು ಪದಾಧಿಕಾರಿಗಳು ಮನವಿ ಮಾಡಿದ್ದಾರೆ.
ಮೃತರ ಕುಟುಂಬಕ್ಕೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಚಿತ್ರದುರ್ಗ ಜಿಲ್ಲೆ ಮತ್ತು ತಾಲ್ಲೂಕು ಪತ್ರಕರ್ತರು, ಅಧಿಕಾರಿಗಳು, ಜನಪ್ರತಿನಿಧಿಗಳು ಸಂತಾಪ ಸೂಚಿಸಿದ್ದಾರೆ.
Recommended Video
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications